ನೆಕ್ಕರೆಕಾಡು ಸೇತುವೆಗೆ 5 ಕೋಟಿ ಮಂಜೂರು

ವಿಟ್ಲ: ಬಂಟ್ವಾಳ ಕ್ಷೇತ್ರದ ಕೊಳ್ನಾಡು ಗ್ರಾಮದ ನೆಕ್ಕರೆಕಾಡು ಸೇತುವೆ ನಿರ್ಮಾಣಕ್ಕೆ 5 ಕೋಟಿ ರೂ. ಮಂಜೂರಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಬಿ.ರಮಾನಾಥ ರೈ ಹೇಳಿದರು. ನೆಕ್ಕರೆಕಾಡು ನದಿ ಸ್ಥಳ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೆಟ್ರೋಲ್ ಮತ್ತು ಡೀಸಲ್ ಸೆಸ್ ಮೂಲಕ ಸಂಗ್ರಹವಾದ ಮೊತ್ತದಿಂದ ಪ್ರತಿಯೊಂದು ರಾಜ್ಯಕ್ಕೆ ಅನುಧಾನ ದೊರೆಯುತ್ತದೆ. ರಾಜ್ಯ ಸರ್ಕಾರದ ಪ್ರಸ್ತಾವನೆಯ ಮೇರೆಗೆ ಸಿಆರ್‌ಎಫ್ ಯೋಜನೆಯನ್ನು ಸಿದ್ದಪಡಿಸಲಾಗುತ್ತದೆ. ಯೋಜನೆಯ ಉಳಿತಾಯದ ಹಣವಿದೆ ಎಂದರು.

ಸೆಸ್ ಮೂಲಕ ಸಂಗ್ರಹವಾದ ಮೊತ್ತದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 26.8 ಕೋಟಿ ರೂ. ಅನುದಾನ ಮಂಜೂರಾಗಿದೆ. ನೆಕ್ಕರೆಕಾಡು ಸೇತುವೆ ಹಿಂದಿನ ದಿನಗಳಲ್ಲಿ ಜಯಿಕಾ ಮತ್ತು ಲೋಕೋಪಯೋಗಿ ಇಲಾಖೆ ಅಂದಾಜುಪಟ್ಟಿ ಸಲ್ಲಿಸಿ, ಪ್ರಸ್ತಾವನೆ ಕಳುಹಿಸಲಾಗಿತ್ತು. ಕಳೆದ ವರ್ಷ ಸೆಸ್ ಹಣ ಉಳಿದಿರುವ ಅನುದಾನದ ಮಾಹಿತಿ ಲಭ್ಯವಾಗಿ, ಈ ಭಾಗದ ಜನತೆ ಬಹುಕಾಲದ ಹಿಂದೆ ಸಲ್ಲಿಸಿದ ಬೇಡಿಕೆಯನ್ನು, ಕೊಳ್ನಾಡು ಗ್ರಾ.ಪಂ.ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರೊಡನೆ 8 ತಿಂಗಳ ಹಿಂದೆ ಬೇಡಿಕೆ ದೃಢೀಕರಿಸಿ, ಅದನ್ನು ಈಡೇರಿಸುವ ಸಲುವಾಗಿ ರಾಜ್ಯ ಸರಕಾರದ ಮೂಲಕ ಸಿ.ಆರ್.ಎಫ್. ಯೋಜನೆಗೆ ಪ್ರಸ್ತಾವನೆ ಕಳುಹಿಸಲಾಗಿತ್ತು ಎಂದರು.

ಜಾಹೀರಾತು

ಕೊಳ್ನಾಡು ಗ್ರಾಮದ ಅಗರಿಯಿಂದ ನೆಕ್ಕರೆಕಾಡು ಮತ್ತು ಕುಳಾಲಿನಿಂದ ನೆಕ್ಕರೆಕಾಡು ವರೆಗೆ ಈ ರಸ್ತೆ ಸಂಪೂರ್ಣ ಡಾಮರೀಕರಣಗೊಂಡಿದ್ದು ಈ ಸೇತುವೆ ಬಾಕಿಯಾಗಿತ್ತು. 10 ದಿನಗಳ ಹಿಂದೆ ಇದು ಮಂಜೂರಾಗಿದ್ದು, ಇದಕ್ಕೆ ಈ ಭಾಗದ ಶಾಸಕನಾಗಿ ಪ್ರಸ್ತಾವನೆ ಸಲ್ಲಿಸಿದ ದಾಖಲೆ ನಮ್ಮಲ್ಲಿದೆ. ಸೇತುವೆ ನಿರ್ಮಾಣವಾಗುವುದರಿಂದ ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ ಗ್ರಾಮಗಳನ್ನು ಸಂಪರ್ಕಿಸಲು ಜತೆಗೆ ಕೇರಳವನ್ನು ಹತ್ತಿರದ ರಸ್ತೆಯಾಗುತ್ತದೆ. ಇನ್ನು ಎರಡು ತಿಂಗಳಲ್ಲಿ ಈ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಹೇಳಿದರು.

ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ ಮಂಕುಡೆ-ಕುಂಟುಕುಡೇಲು ರಸ್ತೆಗೆ, ಬೋಳಂತೂರು, ತಾಳಿತ್ತನೂಜಿ, ಮದಕ ರಸ್ತೆ ಅನುದಾನ ಬಿಡುಗಡೆಯಾಗಲಿದೆ. ಅಪೆಂಡಿಕ್ಸ್ ಸಿ ಅನುದಾನದಲ್ಲಿ ರಾಜ್ಯ ಹೆದ್ದಾರಿಗಳಿಗೆ 18 ಕೋಟಿ ರೂ. ಅನುದಾನ ಮಂಜೂರಾಗಿದೆ. ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯನ್ನು ಮತ್ತು ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.

ದ.ಕ.ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಎಇಇ ಅಬ್ದುಲ್‌ರಹಿಮಾನ್, ಎಇ ಅಶೋಕ್, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಮತ್ತು ಸದಸ್ಯರಾದ ಗುರುವಪ್ಪ ಮುಗೇರ, ವಿಶ್ವನಾಥ ಶೆಟ್ಟಿ ಪೆರ್ಲದಬೈಲು, ಮಹಮ್ಮದ್ ಸಾಲೆತ್ತೂರು ಕಟ್ಟೆ, ಮಹಮ್ಮದ್ ಮಂಚಿ, ಇಬ್ರಾಹಿಂ ಮಣ್ಣಗದ್ದೆ, ಲೀನಾ ಡಿ ಸೋಜಾ, ಪವಿತ್ರ ಪೂಂಜ, ಅಬ್ದುಲ್ಲ ಎ.ಬಿ., ಗಂಗಾಧರ ಚೌಟ, ಸಿ.ಎಚ್.ಅಬೂಬಕ್ಕರ್, ಹಮೀದ್ ಎನ್., ಕುಳಾಲು ರಾಮದಾಸ್ ಭಂಡಾರಿ, ಕರುಣಾಕರ ರೈ, ಅಶ್ರಫ್ ಸಾಲೆತ್ತೂರು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೆಕ್ಕರೆಕಾಡು ಸೇತುವೆಗೆ 5 ಕೋಟಿ ಮಂಜೂರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*