ಆಳ್ವಾಸ್ ನಲ್ಲಿ ಮಿಂಚಿದ ಕಲ್ಲಡ್ಕದ ಗೊಂಬೆಗಳು

ಈ ಬಾರಿ ಆಳ್ವಾಸ್ ನುಡಿಸಿರಿಯ ಆವರಣದಲ್ಲಿ ಕಾಣಿಸಿಕೊಂಡ ಕಲ್ಲಡ್ಕದ ಗೊಂಬೆಗಳು ನೋಡುಗರಿಗೆ ಸಂಭ್ರಮ .

gombe1

ಆಳ್ವಾಸ್ ನುಡಿಸಿರಿಯ ಮೆರವಣಿಗೆಯಿಂದ ತೊಡಗಿ, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ  ವಿಶೇಷ ಆಕರ್ಷಣೆಯಾಗಿ ಮೆರುಗು ನೀಡುತ್ತಾ ಬಂದಿರುವ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗದ ಗೊಂಬೆಗಳು  ಈ ಬಾರಿಯ ನುಡಿಸಿರಿಯಲ್ಲಿ ಸೆಲ್ಫೀ ವಿದ್ ಗೊಂಬೆ  ಎನ್ನುವ ಹಿರಿಮೆಯನ್ನು ಪಡೆದುಕೊಂಡಿದೆ. ಆವರಣದ ಅಲ್ಲಲ್ಲಿ ತಿರುಗಾಡುತ್ತಿದ್ದ ಕಲ್ಲಡ್ಕದ ಗೊಂಬೆಗಳು ಕನ್ನಡಾಭಿಮಾನಿಗಳಿಗೆ ವಿಶೇಷ ಖುಷಿಕೊಟ್ಟಿದೆ  ಎನ್ನುವುದಕ್ಕೆ  ಗೊಂಬೆಗಳ ಜೊತೆ ಸೆಲ್ಫೀ ಫೊಟೋ ಕ್ಲಿಕ್ಕಿಸುತ್ತಿದ್ದ ದೃಶ್ಯಗಳೇ ಸಾಕ್ಷಿ.

ಜಾಹೀರಾತು

gombe2

ಕಳೆದ ವರ್ಷ ನಾಲ್ಕೈದು ಗೊಂಬೆಗಳಷ್ಟೇ ಕ್ಯಾಂಪಸ್ ನಲ್ಲಿತ್ತು, ಆ ಗೊಂಬೆಗಳ ಬಗ್ಗೆ ಕನ್ನಡಾಭಿಮಾನಿಗಳಿಂದ ವ್ಯಕ್ತವಾದ ಸಂತಸಕ್ಕೆ ಪ್ರತಿಕ್ರಿಯೆಯಾಗಿ ಡಾ.ಆಳ್ವರು ಈ ಬಾರಿ ಹತ್ತಕ್ಕೂ ಅಧಿಕ ಕಲ್ಲಡ್ಕದ ಗೊಂಬೆಗಳನ್ನು ವ್ಯವಸ್ಥೆಗೊಳಿಸಿದ್ದಾರೆ.

gombe3

ಜಾಹೀರಾತು

ನುಡಿಸಿರಿಯ ಪ್ರವೇಶದ್ವಾರದಿಂದ ತೊಡಗಿ ಅಲ್ಲಲ್ಲಿ ಕಾಣಿಸಿಕೊಳ್ಳುವ ಗೋರಿಲ್ಲ, ಪಂಜಾಬಿ ಗೊಂಬೆ, ಹಂಸ ಜೋಕರ್, ಯಕ್ಷಗಾನ ಸ್ತ್ರೀವೇಷ, ಹತ್ತಿ ತಲೆಯ ರಾವಣ, ಅಜ್ಜ ಅಜ್ಜಿ ಗೊಂಬೆ, ಕುಳ್ಳ ಗೊಂಬೆ ಹಾಗೂ ಜೋಕರ್ ಗೊಂಬೆಗಳು ನುಡಿಸಿರಿಯ ಆವರಣ ಸುತ್ತುವ ಕನ್ನಡಾಭಿಮಾನಿಗಳ ಆಯಾಸ ಕಳೆಯುತ್ತಿದೆ. ನಿತಿನ್ ಕಲ್ಲಡ್ಕ  ಗೊಂಬೆಗಳ ನಿರ್ವಹಣೆಯ ಉಸ್ತುವಾರಿ ವಹಿಸಿದ್ದಾರೆ. ಗೊಂಬೆಯ ರೂಪ, ಚಲನವಲನಕ್ಕೆ ಮನಸೋತ ಸಾವಿರಾರು ಮಂದಿ ಗೊಂಬೆಗಳ ಜೊತೆಗೆ ಸೆಲ್ಫೀ ಫೊಟೋ ತೆಗೆಸಿಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯಗಳು ಅಲ್ಲಲ್ಲಿ  ಕಂಡುಬಂತು.

gombe4

ಡಾ.ಎಂ.ಮೋಹನ ಆಳ್ವರು ಉತ್ತಮ ಕಲಾಪೋಷಕರು. ಈ ನುಡಿಸಿರಿ ಯಿಂದಾಗಿ ಅದೆಷ್ಟೋ ಕಲಾವಿದರಿಗೆ ಅನುಕೂಲವಾಗಿದೆ. ಕಲ್ಲಡ್ಕ ಶಿಲ್ಪಾಗೊಂಬೆ ಬಳಗವನ್ನೂ  ಡಾ.ಆಳ್ವರು ಬೆಂಬಲಿಸುತ್ತಲೇ ಬಂದಿದ್ದಾರೆ. ಅವರ ಅಪೇಕ್ಷೆಯಂತೆ ಈ ಬಾರಿ ಹತ್ತಕ್ಕೂ ಅಧಿಕ ಗೊಂಬೆಗಳು ನುಡಿಸಿರಿಗೆ ಬಂದ ಕನ್ನಡಾಭಿಮಾನಿಗಳ ಜೊತೆ ಬೆರೆತಿದೆ ಎಂದು ಶಿಲ್ಪಾಗೊಂಬೆ ಬಳಗದ ಮಾಲಕ ರಮೇಶ್ ಕಲ್ಲಡ್ಕ ಅಭಿಪ್ರಾಯ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Mounesh Vishwakarma
ಮಕ್ಕಳ ಹಕ್ಕು ಮತ್ತು ರಕ್ಷಣೆ ಕುರಿತು ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ರಂಗಭೂಮಿ ಕಾರ್ಯಕರ್ತ, ಪತ್ರಕರ್ತ ಮೌನೇಶ ವಿಶ್ವಕರ್ಮ ಮಕ್ಕಳ ದಿನನಿತ್ಯದ ಆಗುಹೋಗುಗಳಲ್ಲಿ ಸಂಭವಿಸುವ ಘಟನೆಯ ಸೂಕ್ಷ್ಮ ನೋಟ ನೀಡುತ್ತಾರೆ. ಪತ್ರಕರ್ತರಾಗಿ ಹಲವು ವರ್ಷಗಳಿಂದ ಮಂಗಳೂರು, ಪುತ್ತೂರು ಬಂಟ್ವಾಳಗಳಲ್ಲಿ ದುಡಿಯುತ್ತಿರುವ ಅವರು ಸಂಪನ್ಮೂಲ ವ್ಯಕ್ತಿಯೂ ಹೌದು.

Be the first to comment on "ಆಳ್ವಾಸ್ ನಲ್ಲಿ ಮಿಂಚಿದ ಕಲ್ಲಡ್ಕದ ಗೊಂಬೆಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*