ಆಳ್ವಾಸ್ ಪ್ರಥಮ, ಮೇಗಿನಪೇಟೆ ರೆಡ್ ಟ್ಯಾಗ್ ದ್ವಿತೀಯ

ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನಡೆದ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಮೂಡಬಿದಿರೆ ಆಳ್ವಾಸ್ ತಂಡ ಪ್ರಥಮ ಹಾಗೂ ವಿಟ್ಲ ಮೇಗಿನಪೇಟೆ ರೆಡ್ ಟ್ಯಾಗ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು.

ಫ್ರೆಂಡ್ಸ್ ಕಡಬ ಮೂರನೇ ಹಾಗೂ ಚಿಕ್ಕಮಗಳೂರಿನ ಕೊಪ್ಪ ತಂಡ ನಾಲ್ಕನೇ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್ ತಂಡದ ಭರತ್ ಆಲ್ ರೌಂಡರ್, ರೆಡ್ ಟ್ಯಾಗ್ ತಂಡದ ಸುಶಾಂತ್ ಶೆಟ್ಟಿ ಉತ್ತಮ ದಾಳಿಗಾರ ಹಾಗೂ ಆಳ್ವಾಸ್ ತಂಡದ ಜಸ್ವಾಂತ್ ಉತ್ತಮ ಹಿಡಿತಗಾರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಜಾಹೀರಾತು

ಮಲಯಾಳಂ ಚಲನಚಿತ್ರ ನಟಿ ದಿಶಾ ದಿನಕರ್ ಪಂದ್ಯಾಟವನ್ನು ಉದ್ಘಾಟಿಸಿದರು. ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾ ಪಟುಗಳಾದ ಗಾಯತ್ರಿ, ಭರತ್, ರಶೀದ್ ಬನಾರಿ, ಅಬ್ದುಲ್ ರಹಿಮಾನ್, ಹಿರಿಯ ಕಬಡ್ಡಿ ಆಟಗಾರರಾದ ಜಬ್ಬಾರ್ ಅವರನ್ನು ಸನ್ಮಾನಿಸಲಾಯಿತು.

ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಉಪಾಧ್ಯಕ್ಷ ರಮಾನಾಥ ವಿಟ್ಲ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ ಮಾನ್ ಬಂಟ್ವಾಳ, ಬಂಟ್ವಾಳ ಪುರಸಭೆ ಸದಸ್ಯ ಇಕ್ಬಾಲ್ ಗೂಡಿನಬಳಿ, ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ದಯಾನಂದ ಅಬೀರಿ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ಅಬೂಬಕ್ಕರ್ ಒಕ್ಕೆತ್ತೂರು, ಇಸ್ಮಾಯಿಲ್ ಪೊಳ್ಯ, ರಾಜಾರಾಮ್ ಶೆಟ್ಟಿ ಕೋಲ್ಪೆಗುತ್ತು, ಸೋಮಶೇಖರ್ ಶೆಟ್ಟಿ ಅಳಕೆಮಜಲು, ಹಾಜಿ ಮೊಹಿದ್ದೀನ್ ಶಾಫಿ, ರಶೀದ್ ವಿಟ್ಲ, ಅಬ್ದುಲ್ ರಹಿಮಾನ್ ಅದ್ರು, ಶುಶಾಂತ್ ಶೆಟ್ಟಿ ಮೂಡೈಮಾರ್, ನಾಸೀರ್ ಕೋಲ್ಪೆ, ಜಯಶೀಲ ಶೆಟ್ಟಿ ಮೂಡೈಮಾರ್, ಹಮೀದ್ ಮೌಲ ಕಬಕ, ಅಬ್ದುಲ್ ರಹಿಮಾನ್ ಕುರುಂಬಳ, ಹನೀಫ್ ಹಾಜಿ ಗೋಳ್ತಮಜಲು, ಶಾಹುಲ್ ಹಮೀದ್ ನೆಕ್ಕರೆ, ಈಶ್ವರ ಭಟ್ ಪಡ್ನೂರು, ಐ.ಸಿ ಕೈಲಾಸ್, ಶಮ್ಮೂನ್ ಪರ್ಲಡ್ಕ, ದಯಾನಂದ ಉಜಿರೆಮಾರ್, ಜಾಬೀರ್ ಅರಿಯಡ್ಕ, ಶರೀಫ್ ಬೀಟಿಗೆ, ತ್ಯಾಗರಾಜ್ ವಿಟ್ಲ, ಉಬೈದ್ ಮಂಗಳಪದವು, ಕಲಂದರ್ ಪರ್ತಿಪಾಡಿ, ಉಬೈದುಲ್ಲಾ ವಿಟ್ಲ ಬಝಾರ್, ನಝೀರ್ ಕಂಬಳಬೆಟ್ಟು, ಅಬ್ದುಲ್ ರಝಾಕ್ ಮೋನು, ರಘು ಕೆಲಿಂಜ, ಶಂಶುದ್ದೀನ್ ಕಂಬಳಬೆಟ್ಟು, ಶರೀಫ್ ಇಂಡಿಯನ್ ಆಟೋ ಲಿಂಕ್ಸ್, ಯೂಸುಫ್ ನೆಕ್ಕರೆ ಮೊದಲಾದವರು ಉಪಸ್ಥಿತರಿದ್ದರು.ಶಾಕೀರ್ ಅಳಕೆಮಜಲು ಸ್ವಾಗತಿಸಿದರು. ಹಮೀದ್ ಕಂಬಳಬೆಟ್ಟು ವಂದಿಸಿದರು. ನೌಫಲ್ ಕುಡ್ತಮುಗೇರು, ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆಳ್ವಾಸ್ ಪ್ರಥಮ, ಮೇಗಿನಪೇಟೆ ರೆಡ್ ಟ್ಯಾಗ್ ದ್ವಿತೀಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*