ಮೇ.4ರಿಂದ ಪ.ಗೋ. ಅವರ ‘ವಿಶೇಷ ಸೃಷ್ಟಿಗಳ ಲೋಕದಲ್ಲಿ’ ಅಂಕಣ ಆರಂಭ

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ಸಾಲಿನಲ್ಲಿ ಮುಂಚೂಣಿಯಲ್ಲಿದ್ದವರು ಪದ್ಯಾಣ ಗೋಪಾಲಕೃಷ್ಣ (1928-1997). .ಗೋ. ಎಂದೇ ಚಿರಪರಿಚಿತರಾಗಿದ್ದ ಅವರು, ಕನ್ನಡದ ಪ್ರಸಿದ್ಧ ದಿನಪತ್ರಿಕೆಗಳಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಕೆಲಸ ಮಾಡಿದವರು. ನೇರ, ನಿಷ್ಠುರ ನಡೆಯ ಪ.ಗೋ. ಅವರು ಪತ್ರಕರ್ತನಾಗಿ ವೃತ್ತಿಜೀವನದುದ್ದಕ್ಕೂ ಸಿದ್ಧಾಂತ ಹಾಗೂ ಪ್ರಾಮಾಣಿಕತೆಯ ಹಾದಿ ಹಿಡಿದಿದ್ದರು. ವೃತ್ತಪತ್ರಿಕಾ ಜಗತ್ತಿನ ಎಲ್ಲ ಮುಖಗಳ ಅನುಭವವನ್ನು ವೃತ್ತಿನಿರತ ಪತ್ರಿಕೋದ್ಯೋಗಿಯಾಗಿ ಕಂಡ ನಾನಾ ಮುಖಗಳೂ, ಅನುಭವಿಸಿದ ನೋವು, ನಲಿವುಗಳನ್ನು ನಿರ್ಮೋಹದಿಂದ, ವಸ್ತುನಿಷ್ಠವಾಗಿ ಬರೆದ ವಿಶೇಷ ಸೃಷ್ಟಿಯ ಲೋಕದಲ್ಲಿ ವೃತ್ತಪತ್ರಿಕೆಗಳ ಕಾಲಂ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯದಲ್ಲಿ ಒಂದು ವಿಶಿಷ್ಟ ಬರವಣಿಗೆಇದು ಪ.ಗೋ. ಆತ್ಮಕತೆಯ ಭಾಗವೂ ಹೌದು.  ಅವರು ಬಂಟ್ವಾಳ ತಾಲೂಕಿನವರೇ ಆಗಿರುವ (ಅಡ್ಯನಡ್ಕ) ಕಾರಣ, ಈ ಅಂಕಣದ ಮೂಲಕ ತಾಲೂಕಿನ ಪ್ರಸಿದ್ಧ ಪತ್ರಕರ್ತರೊಬ್ಬರ ಕೃತಿ ಪರಿಚಯವೂ ಆದಂತಾಗುತ್ತದೆ.

ಜಾಹೀರಾತು

ಪರಿಚಯ:

ಪದ್ಯಾಣ ಗೋಪಾಲಕೃಷ್ಣ ಅವರ ಹುಟ್ಟೂರು ದಕ್ಷಿಣ ಕನ್ನಡ ಮತ್ತು ಈಗಿನ ಕಾಸರಗೋಡು ಜಿಲ್ಲೆಗಳ ಗಡಿಯಂಚಿನಲ್ಲಿರುವ ಅಡ್ಯನಡ್ಕ. 1928ರಲ್ಲಿ ಜನಿಸಿದ ಅವರು 1956ರಲ್ಲಿ ಕನ್ನಡ ದಿನಪತ್ರಿಕೆ  ‘ವಿಶ್ವಕರ್ನಾಟಕ’  ಮುಖಾಂತರ ಬೆಂಗಳೂರಿನಲ್ಲಿಪತ್ರಿಕೋದ್ಯಮಕ್ಕೆ ಪ್ರವೇಶ ಪಡೆದರು. ಮುಂದೆ ತಾಯಿನಾಡು, ಕಾಂಗ್ರೆಸ್ಸಂದೇಶ ಮತ್ತು ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದರು. ಮಡಿಕೇರಿಯಿಂದ ಪ್ರಕಟವಾಗುತ್ತಿದ್ದ ‘ಶಕ್ತಿ’ ಪತ್ರಿಕೆಯ ಬೆಂಗಳೂರಿನ ವರದಿಗಾರರಾಗಿದ್ದವರು ಪ.ಗೋ.

1959ರ ಸುಮಾರಿಗೆ ಮಂಗಳೂರಿಗೆ ಬಂದು ನೆಲಸಿ ನವ ಭಾರತ, ಕನ್ನಡವಾಣಿ ಪತ್ರಿಕೆಯಲ್ಲಿ ಉಪಸಂಪಾದಕರಾಗಿಕಾರ್ಯನಿರ್ವಹಿಸಿ, ನಂತರಇಂಡಿಯನ್ಎಕ್ಸ್‌ಪ್ರೆಸ್, ಕನ್ನಡಪ್ರಭ, ಸಂಯುಕ್ತಕರ್ನಾಟಕ, ಟೈಮ್ಸ್ ಆಫ್ ಡೆಕ್ಕನ್ ಮಂಗಳೂರು ವರದಿಗಾರರಾಗಿ ಮುಂದುವರಿದರು. 1963-1964 ರಲ್ಲಿಮಂಗಳೂರಿನಲ್ಲಿತಮ್ಮಸ್ವಂತ ಕನ್ನಡ ದಿನಪತ್ರಿಕೆ “ವಾರ್ತಾಲೋಕ” ದ ವರದಿಗಾರ, ಮುದ್ರಕ ಮತ್ತು ಪ್ರಕಾಶಕರಾಗುವ ಮೂಲಕ, ಪತ್ರಿಕೋದ್ಯಮದ ಎಲ್ಲಾವಿಭಾಗಗಳಲ್ಲಿ ಕಾರ್ಯನಿರ್ವಹಿಸಿದವರು. 1994 ರಲ್ಲಿಕಾರ್ಯನಿರತ ಪತ್ರಿಕೋದ್ಯಮದಿಂದ ನಿವೃತ್ತಿ ಹೊಂದುವ ಮೊದಲು ತಮ್ಮ ಒಂಬತ್ತು ವರ್ಷಗಳನ್ನುಇಂಗ್ಲಿಷ್ ಪತ್ರಿಕಾರಂಗದ ‘ಟೈಮ್ಸ್ಆಫ್ಇಂಡಿಯಾ’ಕ್ಕೆ ಸಲ್ಲಿಸಿ ಪತ್ರಿಕಾರಂಗಕ್ಕೆ ವಿದಾಯ ಹೇಳಿದರೂ ಅಂಕಣ ಬರವಣಿಗೆಯನ್ನುಕೊನೆ ತನಕ ಮುಂದುವರಿಸಿ ದಿನಾಂಕ 10-8-1997ರಂದು ಈ ಪ್ರಪಂಚಕ್ಕೆ ವಿದಾಯಹೇಳಿದರು.

ಜಾಹೀರಾತು

1956 ರಿಂದ 1997ನೇ ಇಸವಿವರೆಗೆ ನಾಲ್ಕು ದಶಕಗಳಷ್ಟು ದೀರ್ಘಕಾಲವಧಿಯಲ್ಲಿಹಲವಾರು ಪತ್ರಿಕೆಗಳಲ್ಲಿಅಂಕಣಕಾರರಾಗಿ ಪ.ಗೋ. ಬರೆದ ಅಂಕಣ ಸಾಹಿತ್ಯವು ಸುಮಾರು ನಾಲ್ಕುಸಾವಿರ ಪುಟಗಳಿಗೂ ಮಿಕ್ಕಿದೆ. ಬೆಳ್ಳಿಯಸೆರಗು ಎಂಬ ಸಾಮಾಜಿಕ ಕಾದಂಬರಿ, ಗ ನ್ಬೋಸ್ಟ್ರೀಟ್ ಎಂಬ ಮತ್ತು ಓ.ಸಿ.67 ಎಂಬ ಪತ್ತೇದಾರಿ ಕಾದಂಬರಿಗಳನ್ನು ಕನ್ನಡ ಸಾರಸ್ವತಲೋಕಕ್ಕೆ ಅರ್ಪಿಸಿದ ಹೆಗ್ಗಳಿಕೆ ಅವರದ್ದು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮಾನ್ಯತೆ ಪಡೆದು ಕರ್ನಾಟಕ ರಾಜ್ಯ ವಾರ್ತಾ ಮತ್ತು ವಿದ್ಯುತ್ಸ ಚಿವರಿಂದ ವಿಧ್ಯುಕ್ತವಾಗಿ ಉದ್ಘಾಟಿಸಿ 6 ಅಕ್ಟೋಬರ್ 1976 ರಂದು ಪ್ರಾರಂಭಗೊಂಡ ಅಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಸದಸ್ಯ ಹಾಗೂ ಸಂಘದ ಪ್ರಥಮ ಕಾರ್ಯದರ್ಶಿಯಾಗಿದ್ದವರು ಪ.ಗೋಪಾಲಕೃಷ್ಣ. ಪ್ರತಿವರ್ಷ ಅತ್ಯುತ್ತಮ ಗ್ರಾಮೀಣ ವರದಿಗಾರಿಕೆಗಾ ಗಿ ಪ.ಗೋ. ಪ್ರಶಸ್ತಿ ನೀಡಲಾಗುತ್ತಿರುವುದೂ ಇಲ್ಲಿ ಸ್ಮರಣಾರ್ಹ.

ಹೊಸದಿಗಂತ ಪತ್ರಿಕೆಯಲ್ಲಿ ವಿಚಿತ್ರ ಸೃಷ್ಟಿಗಳ ಲೋಕದಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು. 2005ರಲ್ಲಿ ಅದು ಪುಸ್ತಕವಾಗಿ ಪ್ರಥಮ ಮುದ್ರಣ ಕಂಡಿತು. ತಾಲೂಕಿನ ಪತ್ರಿಕೋದ್ಯಮದ ಪ್ರಯೋಗಗಳಲ್ಲಿ ಒಂದಾಗಿರುವ ಬಂಟ್ವಾಳನ್ಯೂಸ್  ನಲ್ಲಿ ಇದೀಗ ಮರುಪ್ರಕಟವಾಗುತ್ತಿದೆ. ಮೇ.4ರಂದು ಮೊದಲ ಕಂತು. ಇದನ್ನು ಒದಗಿಸಿದ ಪ.ಗೋ. ಅವರ ಪುತ್ರ ಗಲ್ಫ್ ನಲ್ಲಿ ಉದ್ಯೋಗಿಯಾಗಿದ್ದು ಸದಾ ಕನ್ನಡ ಸಾಹಿತ್ಯಪರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಹಾಗೂ ಬಂಟ್ವಾಳನ್ಯೂಸ್ ನ ಪ್ರೋತ್ಸಾಹಕರಾಗಿರುವ ಪ.ರಾಮಚಂದ್ರ ಅವರಿಗೆ ಬಂಟ್ವಾಳನ್ಯೂಸ್ ಆಭಾರಿಯಾಗಿದೆ. ಪ.ಗೋ. ಅವರು ನಮ್ಮನ್ನಗಲಿ ಸುಮಾರು ಇಪ್ಪತ್ತು ವರ್ಷಗಳಾದವು. ಆದರೆ ಅವರ ಬರೆಹಗಳು ಇಂದಿಗೂ ಪ್ರಸ್ತುತ. ಪತ್ರಕರ್ತರ ಕಷ್ಟ ಕಾರ್ಪಣ್ಯಗಳನ್ನು ಚೆನ್ನಾಗಿ ಬಿಂಬಿಸಿರುವ ವಿಶೇಷ ಸೃಷ್ಟಿಗಳ ಲೋಕದಲ್ಲಿ ಪೂರ್ತಿಯಾಗಿ ಪ.ಗೋ. ಅವರ ಸೃಷ್ಟಿ ಹಾಗೂ ಅನುಭವಕಥನ.

ಜಾಹೀರಾತು

ಮೇ.4ರಿಂದ ಪ್ರತಿ ಗುರುವಾರ ಬಂಟ್ವಾಳನ್ಯೂಸ್ ನಲ್ಲಿ ಪ್ರಕಟ. ಪ್ರತಿ ಗುರುವಾರ ಬಂಟ್ವಾಳನ್ಯೂಸ್ ಕ್ಲಿಕ್ ಮಾಡಲು ಮರೆಯದಿರಿ.

  • ಹರೀಶ ಮಾಂಬಾಡಿ, ಸಂಪಾದಕ, ಬಂಟ್ವಾಳನ್ಯೂಸ್

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೇ.4ರಿಂದ ಪ.ಗೋ. ಅವರ ‘ವಿಶೇಷ ಸೃಷ್ಟಿಗಳ ಲೋಕದಲ್ಲಿ’ ಅಂಕಣ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*