ಮೇ 18ರಂದು ಸಜೀಪನಡು ಹಿಂದೂ ರುದ್ರಭೂಮಿ ಉದ್ಘಾಟನೆ

ಸಜಿಪನಡು ಗ್ರಾಮದ ಕಂಚಿನಡ್ಕಪದವಿನ 1.35 ಎಕರೆ ಸರಕಾರಿ ಜಮೀನಿನಲ್ಲಿ 45 ಲಕ್ಷ ರೂ. ವೆಚ್ಚದಲ್ಲಿ ’ದೇವಭೂಮಿ’ ಮಾದರಿಯಲ್ಲಿ ನಿರ್ಮಿಸಿರುವ ಸಾರ್ವಜನಿಕ ಹಿಂದೂ ರುದ್ರಭೂಮಿ ಮೇ 18 ರಂದು ಬೆಳಗ್ಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಹೇಳಿದ್ದಾರೆ.

ಜಾಹೀರಾತು

ಕಂಚಿನಡ್ಕಪದವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಜಿಪನಡು ಮಾತ್ರವಲ್ಲದೆ ಸಜಿಪಪಡು, ಸಜಿಪಮೂಡ, ಸಜಿಪಮುನ್ನೂರು, ಚೇಳೂರು, ಇರಾ, ಮಂಚಿ ಗ್ರಾಮಗಳಿಗೆ ಸಂಬಂಧಿಸಿದಂತೆ ಹಿಂದೂ ರುದ್ರಭೂಮಿ ಮತ್ತು ಅಭಿವೃದ್ಧಿ ಸಮಿತಿ ರಚಿಸಲಾಗಿದೆ ಎಂದರು.

ಈಗಾಗಲೇ ಧರ್ಮಸ್ಥಳ ಕ್ಷೇತ್ರ ಮತ್ತು ಇನ್ಫೋಸಿಸ್ ಸಂಸ್ಥೆ ವತಿಯಿಂದ ’ಸಿಲಿಕಾನ್ ಬಾಕ್ಸ್’ ನೆರವು ದೊರೆತಿದ್ದು, ಇದರಿಂದಾಗಿ ಸ್ಥಳೀಯ ನಾಗರಿಕರು ರುದ್ರಭೂಮಿ ಅಭಿವೃದ್ಧಿಗೆ ಕೈ ಜೋಡಿಸಿದ್ದಾರೆ. ಆಹಾರ ಸಚಿವ ಯು.ಟಿ.ಖಾದರ್ ಸಹಿತ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಳೀಯ ಸದಸ್ಯ ರವೀಂದ್ರ ಕಂಬಳಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸ್ಥಳೀಯ ಸದಸ್ಯೆ ಸವಿತಾ ಇವರ ಅನುದಾನದಲ್ಲಿ ರುದ್ರಭೂಮಿ ಎದುರು ತಡೆಗೋಡೆ ನಿರ್ಮಾಣಗೊಳ್ಳುತ್ತಿದೆ ಎಂದರು.

ಜಾಹೀರಾತು

ಈ ರುದ್ರಭೂಮಿಯನ್ನು ’ದೇವಭೂಮಿ’ಯನ್ನಾಗಿಸಲು12 ಅಡಿ ಎತ್ತರದ ಶಿವನ ವಿಗ್ರಹ, 9 ಅಡಿ ಎತ್ತರದ ಸತ್ಯಹರಿಶ್ಚಂದ್ರನ ವಿಗ್ರಹ, 46 ಅಡಿ ಎತ್ತರಕ್ಕೆ ಬೃಹತ್ ಗಾತ್ರದ ತ್ರಿಶೂಲ ಮಾದರಿ ಸಿಮೆಂಟ್ ಕಲಾಕೃತಿ ರಚಿಸಲಾಗಿದ್ದು, ದ್ವಾರ, ಹೂದೋಟ, ಪ್ರಕೃತಿ ವೀಕ್ಷಣಾ ಕೇಂದ್ರ ನಿರ್ಮಿಸಲಾಗುತ್ತಿದೆ. ಉಚಿತ ಆಂಬುಲೆನ್ಸ್ ಸೇವೆ ಒದಗಿಸಲು ಸಮಿತಿ ಸಿದ್ಧತೆ ನಡೆಸಿದೆ ಎಂದು ಅವರು ವಿವರಿಸಿದರು.

ಮೇ 18ರಂದು ಬೆಳಗ್ಗೆ ನಡೆಯುವ ರುದ್ರಭೂಮಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಕೆ.ಪ್ರಭಾಕರ ಭಟ್ ಮತ್ತಿತರ ಗಣ್ಯರು ಭಾಗವಹಿಸುವರು. ಆ ಪ್ರಯುಕ್ತ ರಾತ್ರಿ ಧಾರ್ಮಿಕ ಸಭೆ, ಸಾರ್ವಜನಿಕ ಅನ್ನಸಂತರ್ಪಣೆ, ಬಪ್ಪನಾಡು ಮೇಳದವರಿಂದ ’ಸತ್ಯ ಹರಿಶ್ಚಂದ್ರ’ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ತಿಳಿಸಿದರು. 

ಸುದ್ದಿಗೋಷ್ಠಿಯಲ್ಲಿ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಡಿ.ದೇವದಾಸ ಅಡಪ, ಪ್ರಮುಖರಾದ ಮಹಾಬಲ ರೈ ಬರ್ಕೆಗುತ್ತು, ನಾಗೇಶ ಪೂಜಾರಿ ಕುರಿಯಾಡಿ, ದೀಪಕ್ ಕೊಂಕಣ್‌ತೋಟ, ಭಾಸ್ಕರ್ ಕಂಪದಕೋಡಿ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೇ 18ರಂದು ಸಜೀಪನಡು ಹಿಂದೂ ರುದ್ರಭೂಮಿ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*