ವಿಷ ಸೇವಿಸಿ ಅಡಕೆ ವ್ಯಾಪಾರಿ ಆತ್ಮಹತ್ಯೆ

www.bantwalnews.com report

ಬಂಟ್ವಾಳದ ಬಿ.ಸಿ.ರೋಡ್ ಸಮೀಪ ಕಂಚುಕಾರಪೇಟೆ ನೇತ್ರಾವತಿ ಸೇತುವೆ ಬಳಿ ಅಡಕೆ ವ್ಯಾಪಾರಿ ಮನೋಹರ ಶೆಟ್ಟಿ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಂದಿನಂತೆ ಬೈಪಾಸಿನ ಮನೆಯೊಂದಕ್ಕೆ ಬೆಳಗ್ಗೆ ಹಾಲು ಕೊಟ್ಟ ಬಳಿಕ ನಂದಾವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ ಮನೋಹರ್, ಸಂಜೆಯಾದರೂ ಮರಳಲಿಲ್ಲ. ಇದರಿಂದ ಆತಂಕಿತರಾದ ಮನೆಯವರು ಗೆಳೆಯರ ಬಳಿ ವಿಚಾರಿಸಿದಾಗ, ಹುಡುಕಾಟ ನಡೆಸಲಾಯಿತು. ಸಂಜೆ ಹೊತ್ತಿಗೆ ಅವರ ಬೈಕ್ ಕಂಚುಕಾರಪೇಟೆ ನೇತ್ರಾವತಿ ಸೇತುವೆ ಬಳಿ ಕಂಡುಬಂತು. ಪಕ್ಕದಲ್ಲೇ ಶವ ಇತ್ತು. ಅದರೊಂದಿಗೆ ಡೆತ್ ನೋಟ್ ಬರೆದಿಟ್ಟಿದ್ದ ಮನೋಹರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ಐದು ವರ್ಷಗಳ ಹಿಂದೆ ಅವರ ತಮ್ಮ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಅವಿವಾಹಿತರಾಗಿದ್ದ ಮನೋಹರ್, ಸ್ನೇಹಜೀವಿಯಾಗಿದ್ದು, ತನ್ನ ಸರಳ ನಡೆ, ನುಡಿಯಿಂದ ಜನಾನುರಾಗಿಯಾಗಿದ್ದರು. ಬಂಟ್ವಾಳ ಎಸ್.ವಿ.ಎಸ್.ಕಾಲೇಜು ಬಳಿಯ ಕಂಚಿಲ್ದಗದ್ದೆ ನಿವಾಸಿಯಗಿರುವ ಅವರ ಶವ ಮಹಜರು ಸರಕಾರಿ ಆಸ್ಪತ್ರೆಯಲ್ಲಿ ನಡೆಯಿತು. ಈ ಸಂದರ್ಭ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಷ ಸೇವಿಸಿ ಅಡಕೆ ವ್ಯಾಪಾರಿ ಆತ್ಮಹತ್ಯೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*