ಬಿ.ಸಿ.ರೋಡ್ ಚಿಕ್ಕಯ್ಯನಮಠ ಸಮೀಪ ದೇವಸ್ಥಾನದ ಬಳಿ ಮೃತದೇಹವೊಂದು ಸೋಮವಾರ ಬೆಳಗ್ಗೆ ನೇತ್ರಾವತಿ ನದಿಯಲ್ಲಿ ತೇಲುತ್ತಿರುವುದು ಕೆಲ ಹೊತ್ತು ಆತಂಕಕ್ಕೆ ಕಾರಣವಾಯಿತು.
ಸ್ಥಳೀಯರು ಕೂಡಲೇ ಪೊಲೀಸರಿಗೆ ಹಾಗೂ ಸ್ಥಳೀಯ ಪುರಸಭಾ ಸದಸ್ಯ ಮಹಮ್ಮದ್ ಇಕ್ಬಾಲ್ ಗೂಡಿನಬಳಿ ಅವರಿಗೆ ಮಾಹಿತಿ ರವಾನಿಸಿದರು. ಮುಳುಗುತಜ್ಞ ಸತ್ತಾರ್ ಮತ್ತು ಸಂಗಡಿಗರು ಶವವನ್ನು ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ಶವದ ಪ್ರಾಥಮಿಕ ಮಹಜರು ನಡೆಸಿದಾಗ ದೊರಕಿದ ಮಾಹಿತಿಯಂತೆ ಗಿರೀಶ್ ನಾಯಕ್ ಎಂದು ಹೆಸರು ಕಂಡುಬಂದಿದೆ. ಒಂದು ದಿನದ ಹಿಂದೆ ವಾಕಿಂಗ್ ತೆರಳುತ್ತಿದ್ದ ಸಂದರ್ಭ ಆಯತಪ್ಪಿ ಬಿದ್ದಿರಬಹುದು ಎಂದು ಸಂಶಯಿಸಲಾಗಿದ್ದು, ಪೂರ್ಣ ಮಾಹಿತಿ ತನಿಖೆಯಿಂದಲಷ್ಟೇ ಗೊತ್ತಾಗಲಿದೆ. ಶವ ಮಹಜರು ಸಂದರ್ಭ ವಿಲೇಜ್ ಅಕೌಂಟೆಂಟ್ ಯೋಗಾನಂದ, ಕಂದಾಯ ಇಲಾಖೆ ಸಿಬ್ಬಂದಿ ಸದಾಶಿವ ಕೈಕಂಬ ಸಹಿತ ಹಲವರು ಜತೆಗಿದ್ದರು. ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಸಾಗಿದೆ.
ಜಾಹೀರಾತು
Pic: SR BCROAD
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ"