ಹಿರಿಯ ರಂಗಕಲಾವಿದ, ಚಿತ್ರನಟ ಪುರುಷೋತ್ತಮ್ ಉಳ್ಳಾಲ್ ಇನ್ನಿಲ್ಲ

ತುಳು ರಂಗಭೂಮಿ ಮತ್ತು ಚಲನಚಿತ್ರ ರಂಗದ ಹಿರಿಯ ನಟರಾದ ಪುರುಷೋತ್ತಮ್ ಉಳ್ಳಾಲ್(60) ಗುರುವಾರದಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಜಾಹೀರಾತು

ಪುರುಷೋತ್ತಮ್ ಅವರು ಮೂಲತ: ಉಳ್ಳಾಲದ ಬಂಡಿಕೊಟ್ಯ ನಿವಾಸಿಯಾಗಿದ್ದು ಇತ್ತೀಚಿಗಷ್ಟೇ ಕುಂಪಲದ ನೂತನ ಮನೆಗೆ ಸ್ಥಳಾಂತರ ಗೊಂಡಿದ್ದರು. ಖಾಸಗಿ ಬಸ್ಸು ನಿರ್ವಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು ವೃತ್ತಿಪರ ಕಲಾವಿದರಲ್ಲದಿದ್ದರೂ ಹವ್ಯಾಸಿ ಕಲಾವಿದರಾಗಿ ಕಳೆದ ಮೂರು ದಶಕಗಳಿಂದಲೂ ತುಳು ರಂಗಭೂಮಿಯಲ್ಲಿ ಸಕ್ರಿಯವಾಗಿ ನಟನೆಯಲ್ಲಿ ತೊಡಗಿಸಿಕೊಂಡಿದ್ದರು. ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರ  ತಂಡದಲ್ಲೂ ಗುರುತಿಸಿಕೊಂಡಿದ್ದರು.  ಖಳನಾಯಕ, ಪೊಲೀಸ್ ಅಧಿಕಾರಿ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ತುಳು ಪೌರಾಣಿಕ ನಾಟಕ”ಅಪ್ಪೆ ಮೂಕಾಂಬಿಕ”ದಲ್ಲಿ ಪರುಷೋತ್ತಮ್ ಅವರು ನಿರ್ವಹಿಸಿದ ಮೂಕಾಸುರನ ಪಾತ್ರ ಜನರ ಮನಸ್ಸಲ್ಲಿ ಇಂದಿಗೂ ಅಚ್ಚಲಿಯದೆ ಉಳಿದಿದೆ. ಉಳಿದಂತೆ ಕೊಡಿಯಾಲ್ ಬೈಲ್ ಅವರ ಮಾಮುಗಾವಂದಿ ಮಾಮಿ, ಅಸಲ್ ಏರು..?, ನಾಟಕಗಳು ಮತ್ತು ಒರಿಯರ್ದೊರಿ ಅಸಲ್,ಕಡಲ ಮಗೆ ಚಲನ ಚಿತ್ರಗಳಲ್ಲಿ ನಟಿಸಿ ಗಮನಸೆಳೆದಿದ್ದರು. ಬಂಡಿಕೊಟ್ಯ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾಗಿದ್ದ ಅವರು ಬಂಡಿಕೊಟ್ಯ ಮಲರಾಯ ದೇವಸ್ಥಾನದ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಅವರ ಅಗಲಿಕೆಗೆ ಅನೇಕ ಗಣ್ಯರು ,ರಂಗ ಮತ್ತು ಚಲನಚಿತ್ರ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

ಮೂವರು ಮಕ್ಕಳೂ ವಿವಾಹಿತರಾಗಿದ್ದು ಹಿರಿಯ ಪುತ್ರ ಪ್ರಖ್ಯಾತ್ ವಿದೇಶದಲ್ಲಿದ್ದು ಅವರು ಬಂದ ನಂತರ ಶನಿವಾರ ಮೃತರ ಅಂತ್ಯ ಕ್ರಿಯೆ ನಡೆಯಲಿದೆ. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಿರಿಯ ರಂಗಕಲಾವಿದ, ಚಿತ್ರನಟ ಪುರುಷೋತ್ತಮ್ ಉಳ್ಳಾಲ್ ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*