ಕಾವ್ಯಾ ಸಾವು, ಸೂಕ್ತ ತನಿಖೆಗೆ ಯುವವಾಹಿನಿ ಮನವಿ

ದ.ಕ. ಜಿಲ್ಲೆಯ ಮೂಡಬಿದ್ರೆಯವಿದ್ಯಾರ್ಥಿನಿ 15ರ ಹರೆಯದ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿ ಕಾವ್ಯ ಸಾವಿಗೀಡಾಗಿರುವುದು ಹಲವಾರು ರೀತಿಯ ಸಂಶಯವನ್ನು ಹುಟ್ಟು ಹಾಕಿದೆ ಎಂದು ಬಂಟ್ವಾಳ ಯುವವಾಹಿನಿ ಹೇಳಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿ ಬಂಟ್ವಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗಿದೆ.

ಜಾಹೀರಾತು

ಸೋಮವಾರ ಸುಮಾರು 75ಕ್ಕೂ ಅಧಿಕ ಯುವವಾಹಿನಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಆಗಮಿಸಿ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿದರು.

ಈ ಬಗ್ಗೆ ಸೂಕ್ತವಾದ ರೀತಿಯಲ್ಲಿ ತನಿಖೆಯಾಗಬೇಕು ಹಾಗೂ ವಿದ್ಯಾರ್ಥಿಯ ಹೆತ್ತವರಿಗೆ ನ್ಯಾಯ ಒದಗಬೇಕು.  ಮುಂದಿನ ದಿನಗಳಲ್ಲಿ ಉಗ್ರ ರೀತಿಯ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್‍ಯವಾಗುತ್ತದೆ ಎಂಬ ಮನವಿ ಪತ್ರವನ್ನು ಬಂಟ್ವಾಳ ತಾಲೂಕಿನ ತಹಶೀಲ್ದಾರರ ಮೂಲಕ ದ.ಕ. ಜಿಲ್ಲಾಧಿಕಾರಿಯವರಿಗೆ ಸಲ್ಲಿಸಲಾಯಿತು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಕಾರ್‍ಯದರ್ಶಿ ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿ ಲೋಕೇಶ್ ಪೂಜಾರಿ ಪಿ.ಜೆ., ಸಲಹೆಗಾರರಾದ ಬಿ, ತಮ್ಮಯ, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಬಿ. ಶ್ರೀಧರ್ ಅಮೀನ್, ರಾಜೇಶ್ ಸುವರ್ಣ, ರಾಮಚಂದ್ರ ಸುವರ್ಣ, ಪ್ರೇಮನಾಥ ಕೆ., ಬಿಲ್ಲವ ಮುಖಂಡರಾದ ಬಿ. ವಿಶ್ವನಾಥ, ನೋಣಯ್ಯ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಸಾಮಾಜಿಕ ಕಾರ್ಯಕರ್ತರಾದ ಪ್ರಭಾಕರ ದೈವಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾವ್ಯಾ ಸಾವು, ಸೂಕ್ತ ತನಿಖೆಗೆ ಯುವವಾಹಿನಿ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*