ಮತ್ತೊಂದು ಪ್ರಾರ್ಥನಾ ಮಂದಿರದತ್ತ ಕಳ್ಳರ ಕಣ್ಣು

ಬಂಟ್ವಾಳ ತಾಲೂಕಿನ ದೇವಸ್ಥಾನಗಳ ಮೇಲೆ ಕಳ್ಳರ ಕಣ್ಣು ಬಿದ್ದಂತಿದೆ. ವಾರದ ಹಿಂದಷ್ಟೇ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಗಡಿಭಾಗದಲ್ಲಿರುವ ಹೊಕ್ಕಾಡಿಗೋಳಿ ಸಮೀಪದ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಎರಡು ಸಿಸಿ ಕ್ಯಾಮೆರಾ ಸಹಿತ ಕಾಣಿಕೆ ಡಬ್ಬಿ ಹಣ ಎಗರಿಸಿ ಪರಾರಿಯಾಗಿದ್ದರು. ಎರಡು ದಿನಗಳ ಹಿಂದೆ ಕಡೇಶ್ವಾಲ್ಯ ದೇವಾಲಯದಲ್ಲಿ ಕಳ್ಳರು ಲಗ್ಗೆ ಹಾಕಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ,ನಗದು ಕಳವುಗೈದ ಪ್ರಕರಣದ ಬೆನ್ನಲ್ಲೆ ಅರಳ ದೇವಾಲಯದಲ್ಲಿ ಕಳವಿಗೆ ವಿಫಲ ಯತ್ನ ನಡೆದಿದೆ.

ಆದರೆ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು, ವಿವಿಧೆಡೆ ತಡಕಾಡಿದರೂ ಯಾವುದೇ ಚಿನ್ನಾಭರಣ ಕಳವಾಗಿಲ್ಲ. ಒಂದು ಕಾಣಿಕೆ ಡಬ್ಬಿಯನ್ನಷ್ಟೇ ಕೊಂಡು ಹೋಗಿದ್ದಾರೆ ಎಂದು ಬಂಟ್ವಾಳನ್ಯೂಸ್ ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕಿನ ಪ್ರಮುಖ ಕಾರಣಿಕದ ದೇವಸ್ಥಾನ ಎಂಬ ಪ್ರತೀತಿಗೆ ಒಳಗಾಗಿರುವ ಕಡೇಶ್ವಾಲ್ಯದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ ಬಳಿಕ ಮತ್ತೊಂದು ಘಟನೆ ನಡೆದಿರುವುದು ಹಾಗೂ ಸಿಸಿ ಕ್ಯಾಮರಾ ಇದ್ದರೂ ಪ್ರಯೋಜನವಾಗದಿರುವುದು ಸಾರ್ವಜನಿಕರಲ್ಲಿ ಹಾಗೂ ಭಕ್ತಾಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ.
ಹಲವು ಪ್ರಕರಣಗಳು ರಾಶಿ ಬಿದ್ದಿರುವ ಹೊತ್ತಿನಲ್ಲೇ ಕೆಲ ದಿನಗಳಿಂದ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳ್ಳರು ಚಟುವಟಿಕೆಯಿಂದಿರುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ. ಬಿ.ಸಿ.ರೋಡಿನ ದೇವಸ್ಥಾನವೊಂದರಲ್ಲಿ ಕಳವು ಕೃತ್ಯ ನಡೆದಿದ್ದ ಸಂದರ್ಭ ಪೊಲೀಸರು ಎಲ್ಲ ದೇವಸ್ಥಾನಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಬೇಕು ಎಂಬ ಸೂಚನೆಯನ್ನು ದೇವಳಗಳ ಆಡಳಿತ ಪ್ರಮುಖರಿಗೆ ನೀಡಿದ್ದರು. ಅದರಂತೆ ಕ್ಯಾಮರಾ ಅಳವಡಿಸಿದರೂ ಚುರುಕಾಗಿರುವ ಕಳ್ಳರು ಅದರ ಫೂಟೇಜ್ ಗಳು ಪೊಲೀಸರ ಕೈಗೆ ಸಿಗದಂತೆ ಹೊತ್ತೊಯ್ಯುವುದು ಸವಾಲಾಗಿ ಪರಿಣಮಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮತ್ತೊಂದು ಪ್ರಾರ್ಥನಾ ಮಂದಿರದತ್ತ ಕಳ್ಳರ ಕಣ್ಣು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*