ಚಂದ್ರಶೇಖರ ಪಾತೂರು ಪುಸ್ತಕ – ಬದುಕಿನ ಬೆಲೆಯನೇನಾದರೂ ಬಲ್ಲಿರಾ ಬಿಡುಗಡೆ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಕವಿ, ಸಾಹಿತಿ ಚಂದ್ರಶೇಖರ ಪಾತೂರು ಅವರ ಅಂಕಣ ಬರಹಗಳ ಸಂಕಲನ ಬದುಕಿನ ಬೆಲೆಯನೇನಾದರೂ ಬಲ್ಲಿರಾ ಪುಸ್ತಕವನ್ನು ಭಾನುವಾರ ಸಂಜೆ ಬಂಟ್ವಾಳ ಪ್ರವಾಸಿ ಮಂದಿರ ಬಳಿ ಇರುವ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು.
ಸಮುದಾಯದ ಎಲ್ಲ ಸ್ತರದ ಜನರೊಂದಿಗೆ ಬೆರೆಯುವ ಚಂದ್ರಶೇಖರ ಪಾತೂರು ಅವರು ಬರೆದಿರುವ ವಿಚಾರಗಳು ಮತ್ತು ಪುಸ್ತಕದ ಆಶಯವನ್ನು ಓದುಗರು ಅರ್ಥಮಾಡಿಕೊಳ್ಳಲಿ ಎಂದು ಸಚಿವರು ಈ ಸಂದರ್ಭ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕ, ಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಮಾತನಾಡಿ, ಬದುಕಿನ ಬೆಲೆಯ ಹುಡುಕಾಟವನ್ನು ಪುಸ್ತಕ ಅನಾವರಣಗೊಳಿಸಿದೆ ಎಂದರು. ಮದುವೆ ಮನೆಯಲ್ಲಿ ಕೈತೊಳೆಯದೆ ಬಟ್ಟಲೆತ್ತಿಕೊಂಡು ಊಟ ಮಾಡುವ ವಿಚಾರ, ಕುರುವೆ ವ್ಯಾಪಾರ, ಮನೆಯಲ್ಲಿ ಊಟಕ್ಕೆ ಕಾಯುವ ಪತ್ನಿ ಹೀಗೆ ದೈನಂದಿನ ಬದುಕಿನಲ್ಲಿ ನಾವು ನಿರ್ಲಕ್ಷ್ಯ ಮಾಡುವ ವಿಚಾರಗಳು ಪುಸ್ತಕದಲ್ಲಿ ಅಡಕಗೊಂಡಿವೆ. ಗ್ರಾಮೀಣ ಭಾಗದಲ್ಲಿ ಈಗಲೂ ಸಂಬಂಧಗಳು ಗಟ್ಟಿಯಾಗಿ ಬೆಸೆದುಕೊಂಡಿವೆ ಆದರೆ ಅವು ನೆಲೆತಪ್ಪಿದಲ್ಲಿ ಗ್ರಾಮದ ಬದುಕೂ ಆತಂಕದ ಸ್ಥಿತಿಗೆ ಬರಬಲ್ಲದು ಎಂದು ಹೇಳಿದರು.

ಚಿತ್ತಾರ ಬಳಗದ ಸಂಚಾಲಕ ಸತೀಶ್ ಇರಾ ಉಪಸ್ಥಿತರಿದ್ದರು. ಆಕೃತಿ ಆಶಯ ಪಬ್ಲಿಕೇಶನ್ಸ್‌ನ ಕಲ್ಲೂರು ನಾಗೇಶ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಲೇಖಕ ಚಂದ್ರಶೇಖರ ಪಾತೂರು ವಂದಿಸಿದರು. ಉಪನ್ಯಾಸಕ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಆಕೃತಿ ಆಶಯ ಪಬ್ಲಿಕೇಶನ್ಸ್ ಮತ್ತು ಚಿತ್ತಾರ ಬಳಗದ ವತಿಯಿಂದ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚಂದ್ರಶೇಖರ ಪಾತೂರು ಪುಸ್ತಕ – ಬದುಕಿನ ಬೆಲೆಯನೇನಾದರೂ ಬಲ್ಲಿರಾ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*