ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವಿನ ಅವಕಾಶ: ಉತ್ತರಪ್ರದೇಶ ಸಚಿವ ಮಹೇಂದ್ರ ಸಿಂಗ್

ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವಿನ ಅವಕಾಶ ಇದೆ ಎಂದು ಪಕ್ಷದ ಮತ್ತು ಖಾಸಗಿ ಸಂಸ್ಥೆಗಳ ಸರ್ವೆ ಹೇಳಿದೆ. ಅದಕ್ಕಾಗಿ ಹಗಲು ರಾತ್ರಿ ಕೆಲಸ ಮಾಡುವುದು ನಿಮ್ಮ ಕಾರ್ಯ ಎಂದು ಉತ್ತರ ಪ್ರದೇಶದ ಸಚಿವ ಮಹೇಂದ್ರ ಸಿಂಗ್ ಹೇಳಿದರು.

ಜಾಹೀರಾತು

ಪಕ್ಷದ ಬಂಟ್ವಾಳ ಕ್ಷೇತ್ರ ಕಾರ್ಯಲಯದಲ್ಲಿ ನಡೆದ ಚುನಾವಣಾ ಪ್ರಭಾರಿಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸಜ್ಜನ ವ್ಯಕ್ತಿತ್ವದ ಸಮರ್ಥ ಅಭ್ಯರ್ಥಿಯಾದರಾಜೇಶ್ ನಾಯ್ಕ್ರನ್ನು ಗೆಲ್ಲಿಸುವ ಮೂಲಕ ಜನವಿರೋಧಿಯಾದ ಕಾಂಗ್ರೇಸ್ ಸರಕಾರವನ್ನು  ಬದಲಾಯಿಸಿ ಬಿಜೆಪಿ ಗೆಲ್ಲಿಸಬೇಕೆಂದು ಕಾರ್ಯಕತರಲ್ಲಿ ಮನವಿ ಮಾಡಿದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ನಮ್ಮ ಕಾರ್ಯಕರ್ತರು ಸಂಘಟನಾತ್ಮಕ ಶಕ್ತಿಯಿಂದ ಬಾರಿ ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ರನ್ನು ಶಾಸಕರನ್ನಾಗಿ ಮಾಡಬೇಕು ಎಂದರು.

ಜಾಹೀರಾತು

ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ಮಾತನಾಡಿ ಕಳೆದ ನಾಲ್ಕುವರೆ ವರ್ಷಗಳಿಂದ ಬಂಟ್ವಾಳ ಕ್ಷೇತ್ರದ 59 ಗ್ರಾಮಗಳ 249 ಬೂತ್ಗಳ ಮತದಾರರ ಒಡನಾಟವನ್ನರಿಸಿಕೊಂಡಿದ್ದೇನೆ. ಜನರ ಸಂಕಷ್ಟದ ನಾಡಿ ಮಿಡಿತವನ್ನು ಅರಿತಿದ್ದೇನೆ. ಕಾನೂನು ಸುವ್ಯವಸ್ಥೆಯ ಬಲಪಡಿಸಿ ಸಾಮರಸ್ಯದ ಭಯಮುಕ್ತ ಬಂಟ್ವಾಳದ ನಿರ್ಮಾಣಕ್ಕೆ ನಾವೆಲ್ಲರೂ ಚುನಾವಣೆಯ ಮೂಲಕ ಹೋರಾಡಬೇಕು ಅದಕ್ಕಾಗಿ ನಮ್ಮ ನಮ್ಮ ಮತಗಟ್ಟೆಯನ್ನು ಗೆಲ್ಲಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ದೇವದಾಸ ಶೆಟ್ಟಿ ,ಪ್ರಧಾನಕಾರ್ಯದರ್ಶಿಗಳಾದ ಮೋನಪ್ಪ ದೇವಸ್ಯ,ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ,ಬೊಲ್ಲುಕಲ್ಲು ನಾರಾಯಣ ಪೂಜಾರಿ,ಕಾರ್ಯದರ್ಶಿಗಳಾದ ರಮನಾಥ ರಾಯಿ,ಸೀತಾರಾಮ ಪೂಜಾರಿ,ಗಣೇಶ್ ರೈ ಮಾಣಿ, ಪ್ರಕಾಶ್ ಅಂಚನ್,ರಂಜಿತ್ ಮೈರ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವಿನ ಅವಕಾಶ: ಉತ್ತರಪ್ರದೇಶ ಸಚಿವ ಮಹೇಂದ್ರ ಸಿಂಗ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*