ಖ್ಯಾತ ಛಾಯಾಚಿತ್ರ ಪತ್ರಕರ್ತ ಕೇಶವ ವಿಟ್ಲ ಇನ್ನಿಲ್ಲ

www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಕೇಶವ ವಿಟ್ಲ ಅವರಲ್ಲಿನ ಸಂವೇದನೆಗಳು ಎದ್ದು ಕಾಣಿಸುವುದೇ ಇಂಥ ಸನ್ನಿವೇಶಗಳಲ್ಲಿ. ಐಸ್ ಕ್ರೀಮ್ ತಿನ್ನಲು ಹೊರಟಂತಿದೆ ಈ ಹಸು. ವಿಟ್ಲದಲ್ಲಿ ಕಂಡ ಈ ದೃಶ್ಯವನ್ನು ಕೇಶವ ವಿಟ್ಲ ಅವರು ಸೆರೆಹಿಡಿದು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದರು. ರಾಜ್ಯದ ಖ್ಯಾತ ಛಾಯಾಚಿತ್ರ ಪತ್ರಕರ್ತರಲ್ಲೊಬ್ಬರು ಕೇಶವ ವಿಟ್ಲ ಬಂಟ್ವಾಳ ತಾಲೂಕಿನ ವಿಟ್ಲದವರು. ಬಂಟ್ವಾಳನ್ಯೂಸ್ ಆರಂಭದಿಂದಲೂ ಅದರ ಪ್ರೋತ್ಸಾಹಕರಾಗಿ ಮೆಚ್ಚುಗೆಯ ಮಾತುಗಳನ್ನಾಡಿ, ಆಶೀರ್ವದಿಸಿದ್ದ ಹಿರಿಯ ಸ್ನೇಹಿತ ಕೇಶವ ವಿಟ್ಲ ಅವರಿಗೆ ಬಂಟ್ವಾಳನ್ಯೂಸ್ ಶ್ರದ್ಧಾಂಜಲಿ ಅರ್ಪಿಸುತ್ತಿದೆ. ಸೋಮವಾರ ಬೆಳಗ್ಗೆ ಅವರು ನಿಧನಹೊಂದಿದ್ದಾರೆ.

ಖ್ಯಾತ ಫೊಟೋಜರ್ನಲಿಸ್ಟ್ ಗಳಲ್ಲಿ ಓರ್ವರಾದ ಕೇಶವ ವಿಟ್ಲ ಇನ್ನಿಲ್ಲ. ಸೋಮವಾರ ಬೆಳಗ್ಗೆ ಅವರು ನಿಧನಹೊಂದಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲದವರಾದ ಅವರು ನಾನಾ ಪತ್ರಿಕೆಗಳಲ್ಲಿ ಕೆಲಸ ಮಾಡಿದವರು. 57ರ ಹರೆಯದ ಅವರು ಮುಂಗಾರು ಪತ್ರಿಕೆ ಮೂಲಕ ಪತ್ರಿಕಾ ಛಾಯಾಗ್ರಾಹಕರಾಗಿ ವೃತ್ತಿಜೀವನ ಆರಂಭಿಸಿದವರು. ಬೆಂಗಳೂರಿನ ಇಂಡಿಯನ್ ಎಕ್ಸ್ ಪ್ರೆಸ್ ಬಳಗದಲ್ಲಿ ಸುದೀರ್ಘ ಕಾಲ ಕರ್ತವ್ಯ ಸಲ್ಲಿಸಿದ ಬಳಿಕ ಹವ್ಯಾಸಿ ಛಾಯಾಗರಾಹಕರಾಗಿ ನಾನಾ ಪತ್ರಿಕೆಗಳಿಗೆ ಫೊಟೋಗಳನ್ನು ಒದಗಿಸುತ್ತಿದ್ದರು. ಪತ್ರಿಕಾ ಛಾಯಾಗ್ರಾಹಕರಾಗಿರುವುದರ ಒಟ್ಟಿಗೆ ಸಂವೇದನಾಶೀಲ ವ್ಯಕ್ತಿತ್ವದವರಾಗಿದ್ದ ಕೇಶವ್, ಬದುಕಿನ ಹಲವು ಸೂಕ್ಷ್ಮಗಳನ್ನು ತನ್ನ ಫೊಟೋಗಳ ಮೂಲಕ ತೆರೆದಿಡುತ್ತಿದ್ದರು.

ಜಾಹೀರಾತು

‘ಮುಂಗಾರು’ ಪತ್ರಿಕೆ ಮೂಲಕ 1984ರಲ್ಲಿ (ಜನನ: 1961) ಪತ್ರಿಕಾ ಛಾಯಾಗ್ರಹಣ ಆರಂಭಿಸಿದ್ದ ಕೇಶವ್, ಕ್ಯಾಮೆರಾ ಕಣ್ಣಿನಿಂದ ಹೊಸ ಲೋಕ ತೋರಿಸಿಕೊಟ್ಟಿದ್ದ ಕೇಶವ ವಿಟ್ಲ Facets of Karnataka – A Pictorial Journey ಕೃತಿಯ ಮೂಲಕ ಕರ್ನಾಟಕದ ಹೊಸ ಒಳನೋಟಗಳನ್ನು ಸೆರೆಹಿಡಿದಿದ್ದರು. ರಾಜ್ಯ ಪ್ರವಾಸೋದ್ಯಮ‌ ಇಲಾಖೆ ಈ ಸಂಪುಟವನ್ನು ಪ್ರಕಟಿಸಿತ್ತು.

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಶ್ರೇಷ್ಠ ಸುದ್ದಿ ಛಾಯಾಗ್ರಾಹಕ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್‍ನ ಜೀವಮಾನ ಸಾಧನೆಗಾಗಿ ಪ್ರಶಸ್ತಿ , ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಬಲಿಯೇಂದ್ರ ಪುರಸ್ಕಾರ , ತುಳುನಾಡ ಸಿರಿ ಪ್ರಶಸ್ತಿ ಪುರಸ್ಕೃತರಾಗಿರುವ ಕೇಶವ ವಿಟ್ಲ ಅವರು ಹಲವು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದರು.

ಅವರ ಬಗ್ಗೆ ಮತ್ತಷ್ಟು :

ಜಾಹೀರಾತು

ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಖ್ಯಾತ ಛಾಯಾಚಿತ್ರ ಪತ್ರಕರ್ತ ಕೇಶವ ವಿಟ್ಲ ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*