ಕೆದ್ದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ


ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರಗಿತು.
ಮಾಜಿ ಸಚಿವ ಬಿ.ರಮಾನಾಥ ರೈ ಒಂದನೇ ತರಗತಿಗೆ ದಾಖಲಾದ ಮಕ್ಕಳಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿ, ಮೆರವಣಿಗೆಯನ್ನು ಉದ್ಘಾಟಿಸಿ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಮಕ್ಕಳಿಗೆ ಫಲ ಪುಷ್ಪ-ಹಾರಾರ್ಪಣೆ,ಆರತಿ ಬೆಳಗಿಸುವಿಕೆ ,ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಗಳೊಂದಿಗೆ ಕೆದ್ದಳಿಕೆ ಶಾಲಾ ಪ್ರಾರಂಭೋತ್ಸವ ಸಂಪನ್ನಗೊಂಡಿತು.

ವಾದ್ಯ-ಬ್ಯಾಂಡ್‌ಗಳ ನಿನಾದ, ವಿವಿಧ ವೇಷ ಭೂಷಣಗಳ ಕುಣಿತ, ವಿವಿಧ ಘೋಷಣೆಗಳ ಆಕರ್ಷಣೆಯೊಂದಿಗೆ ನೂತನವಾಗಿ ಒಂದನೇ ತರಗತಿಗೆ ಸೇರ್ಪಡೆಗೊಂಡ ಮಕ್ಕಳನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು. ಇದೇ ವೇಳೆ ದಿಬ್ಬಣ ಮೆರವಣಿಗೆಯಲ್ಲಿ ಬಂದ ಮಕ್ಕಳನ್ನು ಶಾಲಾ ಬಳಿ ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಪನ್ನೀರು ಸಿಂಪಡಿಸಿ , ಹೂ ಹಾಕಿ ಸ್ವಾಗತಿಸಿದರು. ಬಳಿಕ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಹಣ್ಣು ಹಂಪಲು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಊರವರಿಂದ ಶಾಲೆಗೆ ಹೊರೆಕಾಣಿಕೆ ನೀಡಲಾಯಿತು. ತರಕಾರಿಗಳು, ಅಕ್ಕಿ, ತೆಂಗಿನಕಾಯಿ ಮೊದಲಾದ ಹೊರೆಕಾಣಿಕೆ ಶಾಲೆಗೆ ಸಮರ್ಪಣೆಯಾಯಿತು.

ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್ ಹೊರೆ ಕಾಣಿಕೆ ಉಗ್ರಾಣವನ್ನು ಉದ್ಘಾಟಿಸಿದರು.ಗ್ರಾ.ಪಂ. ಅಧ್ಯಕ್ಷ ಸಂತೋಷ್ ಪೂಂಜ, ಮಾಜಿ ಅಧ್ಯಕ್ಷ ಬಾಲಕೃಷ್ಣ ಅಂಚನ್, ಗ್ರಾ.ಪಂ.ಸದಸ್ಯರಾದ ಸತೀಶ್ ಪಡಂತ್ರಬೆಟ್ಟು ,ಮೋಹನ ಆಚಾರ್ಯ, ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ದಿವಾಕರ ದಾಸ್, ಪ್ರಗತಿಪರ ಕೃಷಿಕ, ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚಂದ್ರಾವತಿ, ಸದಸ್ಯರಾದ ರಾಜಗೋಪಾಲ, ಯೋಗೀಶ ಆಚಾರ್ಯ, ವಿಶಾಲಾಕ್ಷಿ, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಈ ಸಂದರ್ಭ ರೈ ಅವರು ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮತ್ತು ಉಚಿತ ಲೇಖನ ಪುಸ್ತಕಗಳನ್ನು ವಿತರಿಸಿದರು.

ಜಾಹೀರಾತು

ಶಾಲಾ ಮುಖ್ಯ ಶಿಕ್ಷಕಿ ಉಮಾ ಡಿ.ಗೌಡ ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಾವಳಕಟ್ಟೆ ಪ್ರಸ್ತಾವಿಸಿದರು. ಶಿಕ್ಷಕ ಚಂದಪ್ಪ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೆದ್ದಳಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*