ಬಂಟ್ವಾಳದ ಹಲವೆಡೆ ಗಣೇಶೋತ್ಸವಗಳಿಗೆ ಸಂಭ್ರಮದ ಚಾಲನೆ

www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮೂರ್ತಿ ತಯಾರಿಯ ಜಾಗದಿಂದ ಪೂಜೆ ಮಾಡುವ ಜಾಗದವರೆಗೆ ಬ್ಯಾಂಡು ವಾದ್ಯಗಳೊಂದಿಗೆ ವೈಭವದ ಮೆರವಣಿಗೆ, ಪ್ರತಿಷ್ಠಾಪನೆ ಬಳಿಕ ಪೂಜೆ, ಪ್ರಸಾದ ವಿತರಣೆ, ಸಂಜೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಕೆಲವೆಡೆ ಶೋಭಾಯಾತ್ರೆ ಮೂಲಕ ವಿಸರ್ಜನೆಗೆ ತಯಾರಿ.

ಜಾಹೀರಾತು

ಬಂಟ್ವಾಳ ತಾಲೂಕಿನ ನಾನಾ ಕಡೆಗಳಲ್ಲಿ ಗಣೇಶೋತ್ಸವ ಗುರುವಾರ ಆರಂಭಗೊಂಡದ್ದು ಹೀಗೆ. ಕೆಲವೆಡೆ ಒಂದು, ಎರಡು, ಮೂರು, ನಾಲ್ಕು, ಐದು ಹೀಗೆ ವಿಧವಿಧದಲ್ಲಿ ಗಣೇಶನನ್ನು ಪೂಜಿಸುವ ಕಾರ್ಯಕ್ರಮವನ್ನು ಭಕ್ತರು ಏರ್ಪಡಿಸಿದ್ದರು. ತಾಲೂಕಿನ ಹಲವೆಡೆ ಸಾರ್ವಜನಿಕ ಗಣೇಶೋತ್ಸವಗಳು ನಡೆದರೆ, ಹಿಂದು ಬಾಂಧವರ ಮನೆಗಳಲ್ಲಿ ಗಣೇಶ ಪೂಜೆ ನಡೆದವು. ಕೆಲವೆಡೆ ಮೂರ್ತಿಯನ್ನು ತಂದು ಪೂಜಿಸಿದರೆ, ಶ್ರದ್ಧಾಳುಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ, ಹೋಮಗಳನ್ನು ನಡೆಸಿದರು.

ಬಂಟ್ವಾಳ ಪರಿಸರದಲ್ಲಿ ಬಿ.ಸಿ.ರೋಡ್, ಬಂಟ್ವಾಳ, ಫರಂಗಿಪೇಟೆ, ಕಲ್ಲಡ್ಕ ಸಹಿತ ಹಲವೆಡೆ ಗಣೇಶೋತ್ಸವ ಆಚರಣೆಗಳು ನಡೆದವು. ವಾಮದಪದವು, ವಿಟ್ಲ, ಕಂಬಳಬೆಟ್ಟು ಸಹಿತ ತಾಲೂಕಿನ ಹಲವೆಡೆ ವೈಭವದ ಕಾರ್ಯಕ್ರಮಗಳು ನಡೆಯುತ್ತಿವೆ. ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ 43ನೇ ಗಣೇಶೋತ್ಸವ  ಮೆರವಣಿಗೆ 14ರಂದು 3.30ಕ್ಕೆ ಆರಂಭಗೊಳ್ಳಲಿದ್ದು, ಕೊಳಕೀರು ಗಣೇಶ ಕೆರೆಯಲ್ಲಿ  ವಿಗ್ರಹ ವಿಸರ್ಜನೆ,ಧ್ವಜಾವತರಣ ನಡೆಯಲಿದೆ. ಶ್ರೀ ದೇವರ ಭವ್ಯ ಶೋಭಾಯಾತ್ರೆಯಲ್ಲಿ   ವಿಶೇಷವಾಗಿ ಶ್ರೀರಾಮ ವಿದ್ಯಾ ಕೇಂದ್ರದ 5 ಕುಣಿತ ಭಜನಾ  ತಂಡಗಳು ಭಾಗವಹಿಸಲಿವೆ.

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ 43ನೇ ಗಣೇಶೋತ್ಸವ

ಯುವ ಸಂಗಮ ಸೇವಾ ಟ್ರಸ್ಟ್( ರಿ.) ಶೇಡಿಗುರಿ ಬೊಂಡಾಲ ಇವರ ವತಿಯಿಂದ ಆರಾಧಿಸಿದ 25 ನೇ ವರ್ಷದ ಗಣಪ pic: Kishore Peraje

ಬಂಟ್ವಾಳ ತಾಲೂಕಿನ ಪೆರಾಜೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಶ್ರೀ ದೇವಿ ಟ್ರಸ್ಟ್ ನ ವತಿಯಿಂದ 9ನೇ ವರ್ಷ, ನೇರಳಕಟ್ಟೆಯಲ್ಲಿ 23ನೇ ವರ್ಷ, ಕಲ್ಲಡ್ಕದ ಗೋಳ್ತಮಜಲಿನ ಗಣೇಶ ಮಂದಿರದಲ್ಲಿ 27ನೇ ವರ್ಷ, ಬಿ.ಸಿ.ರೋಡಿನ ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ 39ನೇ ವರ್ಷ, ಜಕ್ರಿಬೆಟ್ಟಿನಲ್ಲಿ ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ 15ನೇ ವರ್ಷ,  ಸಜೀಪ ಮುನ್ನೂರು ಯುವಕ ಸಂಘ  ವತಿಯಿಂದ 45  ನೇ ವರ್ಷ ನರಿಕೊಂಬುವಿನಲ್ಲಿ 36ನೇ ವರ್ಷ, ಬೊಂಡಾಲದ  ಯುವ ಸಂಗಮ ವತಿಯಿಂದ ರಜತ ವರ್ಷ ಆಚರಣೆಗಳು ಕಂಡುಬಂದವು.

ಜಾಹೀರಾತು

ಜಕ್ರಿಬೆಟ್ಟಿನಲ್ಲಿ:

ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಇವರ ವತಿಯಿಂದ ಆರಾಧಿಸಿದ 15 ನೇ ವರ್ಷದ ಗಣೇಶ.

ಜಕ್ರಿಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ  ಸೆ. 17ರ ತನಕ ಐದು ದಿನಗಳ ಕಾಲ ನಡೆಯಲಿದೆ. ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ಅಧ್ಯಕ್ಷ ಜಿಪಂ ಸದಸ್ಯ ಬಿ. ಪದ್ಮಶೇಖರ ಜೈನ್‌ ನೇತೃತ್ವದಲ್ಲಿ ಗುರುವಾರ ಸಾರ್ವಜನಿಕ ಗಣೇಶೋತ್ಸವವನ್ನು ಉದ್ಘಾಟಿಸಲಾಯಿತು. ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಮಿತಿ ಉಪಾಧ್ಯಕ್ಷರಾದ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್, ಸಂಪತ್ ಕುಮಾರ್ ಶೆಟ್ಟಿ, ಪ್ರಕಾಶ್ ಕಾರಂತ್, ಚಂದ್ರಹಾಸ ಶೆಟ್ಟಿ, ಸೀತಾರಾಮ ಶೆಟ್ಟಿ, ಮಾಧವ ಮಾವೆ ನೇತೃತ್ವದಲ್ಲಿ ಪ್ರತಿ ದಿನವೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಇಲ್ಲಿ ನಡೆಯಲಿದ್ದು, ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠೆ ಮತ್ತು ಮಹಾಪೂಜೆ ಸಮಸ್ತ ಭಕ್ತರ ಸಮ್ಮುಖದಲ್ಲಿ ನಡೆಯಿತು.


ಗಣೇಶೋತ್ಸವದ ಅಂಗವಾಗಿ ಧಾರ್ಮಿಕ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಾರ್ವಜನಿಕರಿಗೆ ಐದು ದಿನಗಳ ಕಾಲವೂ ಉಪಹಾರ ಮತ್ತು ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಜಾಹೀರಾತು

ಬಿ.ಸಿ.ರೋಡಿನಲ್ಲಿ:

ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿಸಿರೋಡು ಇಲ್ಲಿ ಆಚರಿಸಲ್ಪಟ್ಟ 39 ನೇ ವರ್ಷದ ಗಣಪ.

ಬಿ.ಸಿ.ರೋಡಿನಲ್ಲಿ ಹಿಂದು ಧಾರ್ಮಿಕ ಸೇವಾ ಸಮಿತಿ ವತಿಯಿಂದ ಎಂ.ಸತೀಶ ಭಂಡಾರಿ ಅಧ್ಯಕ್ಷತೆಯಲ್ಲಿ 39ನೇ ವರ್ಷದ ಗಣೇಶೋತ್ಸವದ ನಿಮಿತ್ತ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 16ರಂದು ಭಾನುವಾರ ಸಂಜೆ ಶೋಭಾಯಾತ್ರೆ ನಡೆಯಲಿದೆ. ಸುರೇಶ್ ಕುಮಾರ್ ಕೈಕಂಬ, ಬಿ.ಇಂದ್ರೇಶ್, ಭಾಸ್ಕರ ಟೈಲರ್, ರಾಜೇಶ್ ಕುಮಾರ್ ಬಿ.ಸಿ.ರೋಡ್, ಎನ್. ಶ್ರೀಧರ ಶೆಣೈ, ಶಿವಕುಮಾರ್ ಸಹಿತ ಸಮಿತಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯುತ್ತಿವೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳದ ಹಲವೆಡೆ ಗಣೇಶೋತ್ಸವಗಳಿಗೆ ಸಂಭ್ರಮದ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*