ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ವಿದ್ಯಾಭಾರತಿ ಅಖಿಲಭಾರತ ಶಿಕ್ಷಾ ಸಂಸ್ಥಾನ್ ವಿದ್ಯಾಭಾರತಿ ಕರ್ನಾಟಕ, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಜಂಟಿ ಆಶ್ರಯದಲ್ಲಿ ಎರಡು ದಿನಗಳ ಕಾಲ  ವಿದ್ಯಾಭಾರತಿ ಸಂಸ್ಥಾನದ ಪ್ರಾಥಮಿಕ, ಪ್ರೌಢ ಹಾಗೂ ಪಿಯುಸಿ ವಿಭಾಗದ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಕಲ್ಲಡ್ಕ ಶ್ರೀರಾಮ ವಿದ್ಯಾಲಯದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಜಾಹೀರಾತು

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಕಿಶೋರ್ ಕುಮಾರ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ವ್ಯಕ್ತಿಯ  ದೇಹಕ್ಕೆ ವ್ಯಾಯಮ, ಸ್ಮರಣ ಶಕ್ತಿ ಹಾಗೂ ಕ್ರಿಯಾಶೀಲತೆ ಹೆಚ್ಚುವುದರೊಂದಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ. ಕ್ರೀಡಾಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯವಂತ  ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ರಾಜ್ಯಗಳ ಕ್ರೀಡಾಪಟುಗಳು ಇಲ್ಲಿ ಸೇರುವ ಮೂಲಕ ಮಿನಿ ಭಾರತ ನಿರ್ಮಾಣಗೊಂಡಿದೆ. ವಿದ್ಯಾಭಾರತಿ ಮಾನವೀಯ ಸೇವೆಯನ್ನು ನೀಡುವುದರೊಂದಿಗೆ ದೇಶ ಕಟ್ಟುವ ಕಾಯಕದಲ್ಲೂ ತೊಡಗಿಸಿಕೊಂಡಿದೆ. ಹೊರ ರಾಜ್ಯಗಳಿಂದ ಬಂದಿರುವ ವಿದ್ಯಾರ್ಥಿಗಳು ಇಲ್ಲಿ ಇರುವಷ್ಟು ದಿನಗಳ ಕಾಲ ಕನ್ನಡ ಓದಲು ಬರೆಯಲು ಪ್ರಯತ್ನಿಸಿ ಎಂದು ತಿಳಿಸಿದರು.

ವಿದ್ಯಾಭಾರತಿ ಕರ್ನಾಟಕದ ಅಧ್ಯಕ್ಷ ಎಂ.ಜೆ.ಸುಂದರ್‌ರಾಮ್, ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರ ಸಹ ಸಂಘಟನಾ ಕಾರ್ಯದರ್ಶಿ ಜಿ.ಆರ್. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಿದ್ಯಾಭಾರತಿ ಕಾರ್ಯದರ್ಶಿ ವಸಂತ ಮಾಧವ ಸ್ವಾಗತಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ ವಂದಿಸಿದರು. ವಿದ್ಯಾರ್ಥಿನಿ ಸಂಜಿತ  ಪ್ರತಿಜ್ಞಾ ವಿಧಿ ಭೋದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*