ಗುರಿ ಈಡೇರಿಸಲು ಪ್ರಯತ್ನಿಸಿ: ರಾಜೇಶ್ ನಾಯ್ಕ್

ವಿದ್ಯಾರ್ಥಿಗಳು ದೊಡ್ಡ ಕನಸನ್ನು ಹಾಗೂ ಗುರಿಯನ್ನು ಇಟ್ಟುಕೊಳ್ಳಬೇಕು ಹಾಗೂ ಅದನ್ನು ಈಡೇರಿಸಲು ಪ್ರಯತ್ನಿಸಬೇಕು. ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಜಾಹೀರಾತು

ಬುಧವಾರ ರಾತ್ರಿ ಸರಕಾರಿ ಪ್ರೌಢ ಶಾಲೆ ಕೊಯಿಲದಲ್ಲಿ ನಡೆದ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಮಾತನಾಡಿ ವಿದ್ಯಾರ್ಥಿಗಳು ಸಾಮರಸ್ಯದ ಮನೋಭಾವನೆಯನ್ನು ಮೈಗೂಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ತಮ್ಮದಾಗಿಸಿಕೊಳ್ಳಬೇಕು ಎಂದರು. ಮುಖ್ಯ ಅತಿಥಿಗಳಾಗಿ ಎಸ್.ವಿ.ಎಸ್. ಕಾಲೇಜಿನ ಉಪಪ್ರಾಂಶುಪಾಲೆ ಡಾ. ಎಚ್.ಆರ್. ಸುಜಾತ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ರಾಯಿ ಗ್ರಾ.ಪಂ. ಅಧ್ಯಕ್ಷ ದಯಾನಂದ ಸಪಲ್ಯ, ರಾಯಿ ಗ್ರಾ.ಪಂ. ಸದಸ್ಯೆ ಕುಸುಮಾ, ಸರಕಾರಿ ಪ್ರೌಢ ಶಾಲೆ ಕೊಯಿಲದ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಮಾಜಿ ತಾ.ಪಂ. ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ಸ.ಪ್ರೌಢ ಶಾಲೆ ಕೊಯಿಲದ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಕೊಯಿಲ ಶಾಲೆಯ ಮುಖ್ಯೋಪಾದ್ಯಾಯ ಸುಧೀರ್ ಜಿ. ಕೊಯಿಲ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೇದಾನಂದ ಕಾರಂತ, ರಾಯಿ ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಭಂಡಾರಿ ಉಪಸ್ಥಿತರಿದ್ದರು.

ಶಿಬಿರಾರ್ಥಿಗಳು ಪ್ರಾರ್ಥಿಸಿದರು. ಎನ್‌ಎಸ್‌ಎಸ್ ಶಿಬಿರಾಧಿಕಾರಿ ಕವಿತಾ ಯಾದವ್ ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಶಾಲಿನಿ ಬಿ. ಧನ್ಯವಾದ ನೆರವೇರಿಸಿದರು. ಸಹಶಿಬಿರಾಧಿಕಾರಿ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಬಿರಾಧಿಕಾರಿಗಳಾದ ಅನಿತಾ ಜೇಕಬ್, ಉಪನ್ಯಾಸಕರಾದ ಭಾರತಿ ವಸಂತಕುಮಾರ್, ದೀಪಿಕಾಪ್ರಿಯಾ, ವಿಜೇತಾ ನಾಯಕ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುರಿ ಈಡೇರಿಸಲು ಪ್ರಯತ್ನಿಸಿ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*