ಬಿ.ಸಿ.ರೋಡ್ ಅಭಿವೃದ್ಧಿ ನಕಾಶೆ ತಯಾರಿಗೆ ಪರಿಶೀಲನೆ

ಬಿ.ಸಿ.ರೋಡ್ ಫ್ಲೈಓವರ್ ತಳಭಾಗದ ರೂಪ ಬದಲು, ಪೊಳಲಿ ದ್ವಾರದಿಂದ ನಾರಾಯಣಗುರು ವೃತ್ತದವರೆಗಿನ ಜಾಗಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.


ಬಿ.ಸಿ.ರೋಡ್ ಫ್ಲೈಓವರ್ ತಳಭಾಗದಲ್ಲಿ ಇಂಟರ್ ಲಾಕ್ ಅಳವಡಿಸುವುದು, ಹೂದೋಟ ನಿರ್ಮಿಸುವುದರ ಮೂಲಕ ಸುಂದರಗೊಳಿಸುವುದಷ್ಟೇ ಅಲ್ಲ, ಸಾರ್ವಜನಿಕರ ಬೇಡಿಕೆಯಾಗಿದ್ದ ಸರ್ವೀಸ್ ರೋಡ್ ಸಹಿತ ಹಲವು ರಸ್ತೆಗಳ ಪಕ್ಕ ದಾರಿದೀಪ ಹಾಕುವ ಮೂಲಕ ಮತ್ತೆ ಬೆಳಕು ಮೂಡಿಸುವ ಕಾರ್ಯಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮುಂದಾಗಿದ್ದಾರೆ. ಈ ಕುರಿತು ಪುರಸಭೆಯಲ್ಲಿ ಅಕ್ಟೋಬರ್ ೧ರಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಶಾಸಕರು ಇದನ್ನು ಪ್ರಸ್ತಾಪಿಸಿದ್ದಲ್ಲದೆ, ಅ.೨ರಂದು ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲೂ ಒತ್ತಿ ಹೇಳಿದ್ದರು. ಅದಾದ ಬಳಿಕ ಸಭೆ ನಡೆದಿದ್ದು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್ ಅವರಿಗೆ ಈ ಕಾರ್ಯಯೋಜನೆಯನ್ನು ಕಾರ್ಯಗತಗೊಳಿಸುವ ಹೊಣೆ ನೀಡಲಾಗಿತ್ತು.

ಜಾಹೀರಾತು

ಏನಾಗಲಿದೆ:
ಎಲ್ಲ ಅಂದುಕೊಂಡಂತೆ ನಡೆದರೆ, ಬಿ.ಸಿ.ರೋಡಿನ ಕೈಕಂಬದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ಎಲ್ಲೆಲ್ಲಿ ಮುಸ್ಸಂಜೆಯಾಗುವ ಹೊತ್ತಿಗೆ ಕತ್ತಲಾಗಿ ಸಾರ್ವಜನಿಕರಿಗೆ ನಡೆಯಲೂ ಕಷ್ಟವಾಗುತ್ತದೋ ಅಲ್ಲೆಲ್ಲ ದಾರಿದೀಪ ಅಳವಡಿಸಲಾಗುತ್ತದೆ. ರಸ್ತೆ ಹೊಂಡಗಳನ್ನು ಮುಚ್ಚಲಾಗುತ್ತದೆ. ಮೇಲ್ಸೇತುವೆ ಕೆಳಭಾಗದಲ್ಲಿ ಇಂಟರ್ ಲಾಕ್ ಹಾಕಲಾಗುತ್ತದೆ. ಹಾಗೂ ಹೂದೋಟ ನಿರ್ಮಿಸಲಾಗುತ್ತದೆ. ಬಿ.ಸಿ.ರೋಡಿನ ನೂತನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದೊಳಗೆ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ ಗಳು ಪ್ರವೇಶಿಸುವ ನಿಟ್ಟಿನಲ್ಲಿ ಬಸ್ ನಿಲ್ದಾಣದ ಎದುರು ವೃತ್ತ ನಿರ್ಮಿಸಲಾಗುತ್ತದೆ.

ಜಾಹೀರಾತು

ಮಂಗಳೂರಿನ ವಿನ್ಯಾಸತಜ್ಞ ಧರ್ಮರಾಜ್ ಅವರೊಂದಿಗೆ ಸ್ಥಳ ಪರಿಶೀಲನೆಯನ್ನು ನಡೆಸಲಾಯಿತು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ವೈ. ಉಮೇಶ್ ಭಟ್, ಕಿರಿಯ ಇಂಜಿನಿಯರ್ ಅರುಣ್ ಪ್ರಕಾಶ್, ನವೀನ್, ಪುತ್ತೂರು ಕೆ.ಎಸ್.ಆರ್.ಟಿ.ಸಿ ಡಿಸಿ ವಿಭಾಗೀಯ ನಿಯಂತ್ರಕ ನಾಗರಾಜ್ ಶಿರಾಲಿ, ಕೆ.ಎಸ್.ಆರ್.ಟಿ.ಸಿ ಬಿ.ಸಿ.ರೋಡ್ ವಿಭಾಗ ಮಾನ್ಯೇಜರ್ ಇಸ್ಮಾಯಿಲ್, ಸಿಬ್ಬಂದಿ ರಮೇಶ್ ಶೆಟ್ಟಿ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ಬಿಜೆಪಿ ಪ್ರಮುಖರಾದ ಬಿ.ದೇವದಾಸ ಶೆಟ್ಟಿ, ರಮಾನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಸೀತಾರಾಮ ಪೂಜಾರಿ, ನಂದರಾಮ ರೈ, ಪ್ರವೀಣ್ ಗಟ್ಟಿ, ಯಶವಂತ ನಾಯ್ಕ ಉಪಸ್ಥಿತರಿದ್ದರು.

ಬಿ.ಸಿ.ರೋಡ್ ಬ್ಯೂಟಿಯಾಗಲು ನಡೆಯಲಿದೆ ಮೇಕಪ್

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಸಿ.ರೋಡ್ ಅಭಿವೃದ್ಧಿ ನಕಾಶೆ ತಯಾರಿಗೆ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*