ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿದ್ದಾರೆ. ತೊಕ್ಕೊಟ್ಟಿನಿಂದ ಮಂಗಳೂರಿಗೆ ತೆರಳುವ ದಾರಿಯ ಆಡಂಕುದ್ರು ಶಾಲೆ ಬಳಿ ಇಂದು ಬೆಳಗ್ಗೆ 9.30ಕ್ಕೆ ಘಟನೆ ನಡೆದಿದ್ದು, ಬೈಕ್ ಸವಾರ ವೇಗದಲ್ಲಿ ಬಂದು ಪಾದಚಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಈ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಆಟೋ ಚಾಲಕ ಗಾಯಗೊಂಡ ವ್ಯಕ್ತಿಯನ್ನು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ಸಂದರ್ಭ ಗಾಯಾಳು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಸಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೈಕ್ ಡಿಕ್ಕಿ, ಪಾದಚಾರಿ ಸಾವು"