ಡಿಜಿಟಲ್ ಓದುವಿಕೆಯಿಂದ ಮಾಹಿತಿ, ಪುಸ್ತಕ ಓದಿನಿಂದ ಮಾನವೀಯತೆ: ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ

  • ಪುಸ್ತಕ ಪ್ರದರ್ಶನ ಮತ್ತು ಗ್ರಂಥಾಲಯ ಸದಸ್ಯತ್ವ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ

ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬಂಟ್ವಾಳ ಶಾಖಾ ಗ್ರಂಥಾಲಯ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಬಂಟ್ವಾಳ ತಾಪಂ ಎಸ್.ಜಿ.ಎಸ್.ವೈ. ತರಬೇತಿ ಕೇಂದ್ರ ಸಭಾಂಗಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಗ್ರಂಥಾಲಯ ಸದಸ್ಯತ್ವ ಆಂದೋಲನ ಕಾರ್ಯಕ್ರಮ ಭಾನುವಾರ ನಡೆಯಿತು.

ಜಾಹೀರಾತು

ಕಾರ್ಯಕ್ರಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಪುಸ್ತಕ ಪ್ರದರ್ಶನವನ್ನು ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ, ಯುವ ಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಹಾಗೂ ಆರೋಗ್ಯಕರ ಚಿಂತನೆಗಳನ್ನು ನೀಡಬೇಕಾಗಿದೆ. ಬದಲಾದ ಸನ್ನಿವೇಶದಲ್ಲಿ ಓದುಗರ ಕೊರತೆಯಾಗಿಲ್ಲ, ಅವರೆಲ್ಲರೂ ಡಿಜಿಟಲ್ ಮಾಧ್ಯಮಗಳ ಮೂಲಕ ಜ್ಞಾನಾರ್ಜನೆ ಮಾಡುತ್ತಿದ್ದಾರೆ. ಆದರೆ ಪುಸ್ತಕಗಳನ್ನು ಓದುವುದರಿಂದ ಸಿಗುವ ಲಾಭವೇ ಬೇರೆ ಎಂದರು.

ಈ ಸಂದರ್ಭ ಹಿರಿಯ ಸಾಹಿತಿ ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಇಂದು ಪುಸ್ತಕ ಕೊಳ್ಳಲು ನಾವು ಹಿಂದೇಟು ಹಾಕುತ್ತೇವೆ. ಆದರೆ ಹೋಟೆಲ್ ಇತ್ಯಾದಿಗಳಿಗೆ ಹಣ ವ್ಯಯಿಸಲು ಹಿಂದೆ ಮುಂದೆ ನೋಡುವುದಿಲ್ಲ. 100 ರೂಪಾಯಿಗೆ ನೋಬೆಲ್ ಪ್ರಶಸ್ತಿ ಪುರಸ್ಕೃತರ ಕೃತಿ ದೊರಕುತ್ತದೆ. ಪುಸ್ತಕಗಳ ಓದುವಿಕೆ ನಮಗೆ ಮಾನವತೆ, ಹೃದಯವಂತಿಕೆ, ಪ್ರೀತಿಯನ್ನು ಕಲಿಸುತ್ತದೆ. ಆಧುನಿಕ ತಂತ್ರಜ್ಞಾನ ನಮಗೆ ವಿವರಗಳನ್ನಷ್ಟೇ ನೀಡಬಹುದು, ಮಾಹಿತಿ ಒದಗಿಸಬಹುದು. ಆದರೆ ಹೃದಯವಂತಿಕೆ, ಪ್ರೀತಿ, ಮನುಷ್ಯತ್ವವನ್ನು ಗ್ರಂಥಾಲಯಗಳು ಒದಗಿಸುತ್ತವೆ ಎಂದು ಹೇಳಿದರು.

ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಮಾತನಾಡಿ ಪ್ರತಿ ಶಾಲೆಗಳಲ್ಲಿರುವ ಕಪಾಟುಗಳ ಒಳಗಿರುವ ಪುಸ್ತಕಗಳನ್ನು ಮಕ್ಕಳು ಓದಬೇಕು, ಇಲಾಖೆ ವತಿಯಿಂದ ಆ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದರು. ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಮಾತನಾಡಿದರು. ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಮಮತಾ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಖಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕಿ ನಮಿತಾ, ಇಲಾಖೆಯ ಪ್ರಣೀತಾ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ನಾನಾ ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಾದ ಮಾನಸಾ, ಜಯಲಕ್ಷ್ಮೀ, ವಿಮಲಾ, ಜಯಲಕ್ಷ್ಮೀ, ಗುಣವತಿ, ಜಯಂತಿ, ಉಮಾವತಿ ಅವರನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಡಿಜಿಟಲ್ ಓದುವಿಕೆಯಿಂದ ಮಾಹಿತಿ, ಪುಸ್ತಕ ಓದಿನಿಂದ ಮಾನವೀಯತೆ: ಡಾ. ಏರ್ಯ ಲಕ್ಷ್ಮೀನಾರಾಯಣ ಆಳ್ವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*