ಬಿಡುಗಡೆ 1 ಕೋಟಿ ರೂ, ಖರ್ಚು 97.83 ಲಕ್ಷ, ಉಳಿಕೆ 2.2 ಲಕ್ಷ ರೂ.

  • ಬಂಟ್ವಾಳ ತಾಲೂಕು ಪಂಚಾಯತ್‌ ಜಮಾಬಂಧಿ

ತಾಲೂಕಿನ 2017-18ನೆ ಸಾಲಿಗೆ ಬಿಡುಗಡೆಯಾದ 1 ಕೋಟಿ ರೂ. ವೆಚ್ಚದಲ್ಲಿ ಒಟ್ಟು 142 ಕಾಮಗಾರಿಗೆ 97.83 ಲಕ್ಷ ರೂ. ಖರ್ಚು ಆಗಿದ್ದು, 2.2 ಲಕ್ಷ ರೂ. ಉಳಿಕೆಯಾಗಿದೆ ಎಂದು ಮಂಗಳವಾರ ನಡೆದ ಬಂಟ್ವಾಳ ತಾಲೂಕು ಪಂಚಾಯತ್‌ನ ಜಮಾಬಂಧಿಯಲ್ಲಿ ಮಂಡಿಸಲಾಯಿತು.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಜಮಾಬಂಧಿಯ ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ವಹಿಸಿದ್ದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಎಂ.ಬಿ.ನಾಯಕ್ ಅವರು ಜಮಾಬಂಧಿಯನ್ನು ನಡೆಸಿ ಮಾತನಾಡಿ, ಗ್ರಾಮ ಸಭೆಗಳಲ್ಲಿ ಇಲಾಖಾ ಅಧಿಕಾರಿಗಳು ಸರಕಾರದ ಯೋಜನೆಯ ಬಗ್ಗೆ ಗ್ರಾಮಸ್ಥರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ಅಲ್ಲದೆ, ಗ್ರಾಪಂಗಳಲ್ಲಿ ಯೋಜನೆಯ ಬಗ್ಗೆ ಕರಪತ್ರವನ್ನು ಫಲಕಗಳಲ್ಲಿ ಅಳವಡಿಸಿದರೆ ಉತ್ತಮ ಎಂದು ಸಲಹೆ ನೀಡಿದರು. ನರೇಗ ಯೋಜನೆಯಲ್ಲಿ ಶಾಲಾ ಆವರಣದಲ್ಲಿ ಕೈತೋಟ ಹಾಗೂ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

ಶಿಕ್ಷಣ ಇಲಾಖೆಗಳು ನರೇಗಾ ದ ಅನುದಾನ ಬಳಸಿಕೊಂಡು ಅಕ್ಷರ ಕೈತೋಟ ಎಲ್ಲಾ ಶಾಲೆಗಳಲ್ಲಿ ನಿರ್ಮಾಣ ಮಾಡಬೇಕು. ಒಂದು ಸ್ವಚ್ಚತೆ ಮತ್ತು ಶಾಲೆಯ ಮಕ್ಕಳಿಗೆ ತರಕಾರಿ ಬಳಕೆ ಯಾಗುವ ನಿಟ್ಟಿನಲ್ಲಿ ಯೋಜನೆ ಜಾರಿಮಾಡಲಾಗಿದೆ, ಸಮರ್ಪಕವಾಗಿ ನಿರ್ವಹಿಸಲು ಜಿ.ಪಂ.ಯೋಜನಾ ನಿರ್ದೇಶಕ ಎಂ.ಬಿ.ನಾಯಕ್ ಸೂಚನೆ ನೀಡಿದರು.

ಜಾಹೀರಾತು

ವಿಕಲ ಚೇತನ ಮಕ್ಕಳಿಗೆ ಕೆಲವೊಂದು ಶಾಲೆಯಲ್ಲಿ ಸರಕಾರದ ಯೋಜನೆಗಳು ಪಾಲನೆ ಅಗುತ್ತಿಲ್ಲ. ತಾಲೂಕಿನ ವಿಶೇಷ ಚೇತನ ಮಕ್ಕಳನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಕೆಲ ವಿಶೇಷಚೇತನ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಈ ಬಗ್ಗೆ ಇಲಾಖೆ ಯಾವುದೇ ಮುತುವರ್ಜಿ ವಹಿಸಿದಂತೆ ಕಾಣುತ್ತಿಲ್ಲ. ಅದಲ್ಲದೆ, ಕೆಲ ಖಾಸಗಿ ಶಾಲೆಯಲ್ಲಿ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ ಎಂದು ತಾಪಂ ಸದಸ್ಯ ಕೈರಂಗಳ ಸಭೆಯ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರು, ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿಶೇಷ ಮಕ್ಕಳಿಗೆ ಶಿಕ್ಷಣ ಉಚಿತವಾಗಿದ್ದು, ಖಾಸಗಿ ಶಾಲೆಗಳ ಬಗ್ಗೆ ಮಾಹಿತಿ ಕಲೆಹಾಕಲಾಗುವುದು ಎಂದರು.

ಇದಕ್ಕೆ ಎಂ.ಬಿ. ನಾಯಕ್ ಪ್ರತಿಕ್ರಿಯಿಸಿ, ನಿಯಮ ಪಾಲನೆಯಾಗದ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಿ, ಅದಲ್ಲದೆ, ವಿಶೇಷ ಚೇತನ ಮಕ್ಕಳಿಗಾಗಿ ತಾಲೂಕು ಮಟ್ಟದಲ್ಲಿ ಶಿಬಿರವನ್ನು ಏರ್ಪಡಿಸುವಂತೆ ಸಲಹೆ ನೀಡಿದರು.

ಜಾಹೀರಾತು

ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ಆಶ್ರಯದಲ್ಲಿ ವಿಶೇಷ ಚೇತನ ಮಕ್ಕಳನ್ನು ಸರ್ವೇ ಕಾರ್ಯ ಕೈಗೊಂಡಿದ್ದು, ಅವರಿಗೆ ಬೇಕಾದ ಸಲಕರಣೆಗಳನ್ನು ಪಟ್ಟಿ ಮಾಡಿ ತಾಪಂಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಮೂರು ಇಲಾಖೆಗಳಾದ ಶಿಕ್ಷಣ, ಸಿಡಿಪಿಒ ಹಾಗೂ ಪಶುಸಂಗೋಪನೆ ಇಲಾಖೆಗೆ ಸಂಬಂಧಿಸಿದ ಅನುದಾನ ಮತ್ತು ವೇತನ ತಾಂತ್ರಿಕ ಸಮಸ್ಯೆ ಯಿಂದ ವರ್ಗಾವಣೆಯಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರು ಸಭೆಯ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂ.ಬಿ.ನಾಯಕ್, ಉಭಯ ತಾಲೂಕಿನ ಪ್ರಾರಂಭ ಅಕ್ಷರವು “ಬಿ” ಆದ ಕಾರಣದಿಂದ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಕುರಿತು ಜಿಪಂ ಸಿಇಒ ಅವರು ರಾಜ್ಯದ ಹಣ ಇಲಾಖೆಗೆ ಖುದ್ದಾಗಿ ತೆರಳಿ ಸಮಸ್ಯೆಯ ಮನವರಿಕೆ ಮಾಡಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆ ಪುನರಾವರ್ತನೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಾಹೀರಾತು

ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ತಾಪಂ ವ್ಯಾಪ್ತಿಯ ಎಲ್ಲ ಕಾಮಗಾರಿಗಳು ತಾಪಂ ಸದಸ್ಯ ಹಾಗೂ ಅಧಿಕಾರಿಗಳ ಸಹಕಾರದಿಂದ ಪೂರ್ಣಗೊಳಿಸಲು ಸಾಧ್ಯವಾಗಿದೆ. ಕೆಲವೊಂದು ಸಮಸ್ಯೆಗಳು ಎದುರಾದಾಗ ಅದನ್ನು ಮಾತುಕತೆಯ ಮೂಲಕ ಬಗೆ ಹರಿಸುವ ಕಾರ್ಯಮಾಡಲಾಗಿದೆ ಎಂದರು. ವೇದಿಕೆಯಲ್ಲಿ ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಉಪಸ್ಥಿತರಿದ್ದರು. ತಾಪಂ ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿಡುಗಡೆ 1 ಕೋಟಿ ರೂ, ಖರ್ಚು 97.83 ಲಕ್ಷ, ಉಳಿಕೆ 2.2 ಲಕ್ಷ ರೂ."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*