ಕಲ್ಲಡ್ಕ ಕ್ರೀಡಾಕೂಟದಲ್ಲಿ ಈ ಬಾರಿ ಅಣುಪರೀಕ್ಷೆ, ಪಟೇಲ್, ವಾಜಪೇಯಿ ಸ್ಮರಣೆ

  • ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಭಾಗಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಿ.9ರಂದು ಸಂಜೆಯಿಂದ ರಾತ್ರಿವರೆಗೆ 3316 ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ಕ್ರೀಡಾಕೂಟ ನಡೆಯಲಿದ್ದು, ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಸಹಿತ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸುಮಾರು 19 ನಾನಾ ರೀತಿಯ ಕವಾಯತುಗಳು, ಪ್ರದರ್ಶನಗಳು ಇರಲಿದ್ದು, ಈ ಬಾರಿ ಸರದಾರ್ ವಲ್ಲಭಭಾಯಿ ಪಟೇಲ್, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೆನಪು, ಪೋಖರಣ್ ಅಣುಪರೀಕ್ಷೆಯ ಪ್ರದರ್ಶನ ಮತ್ತು ಶಬರಿಮಲೆ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದ ಘಟನಾವಳಿಗಳ ಸನ್ನಿವೇಶಗಳು ಪ್ರದರ್ಶನಗೊಳ್ಳಲಿವೆ.

ಜಾಹೀರಾತು

ಈ ವಿಷಯವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಗುರುವಾರ ಸಂಜೆ ಕಲ್ಲಡ್ಕದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲ ತಿಳಿಸಿದರು.

ಸುಮಾರು 30 ಕ್ಕೂ ಅಧಿಕ ವರ್ಷಗಳಿಂದ ವಿದ್ಯಾಕೇಂದ್ರ ಕಾರ್ಯಾಚರಿಸುತ್ತಿದ್ದು, ಗುರುಕುಲ ಮಾದರಿಯ ವಿದ್ಯಾಭ್ಯಾಸ, ಭಾರತೀಯ ಸಂಸ್ಕೃತಿಯೊಂದಿಗೆ ಸಂಸ್ಕಾರವನ್ನು ಕೌಶಲಯುಕ್ತ ವಿದ್ಯಾಭ್ಯಾಸ ಮತ್ತು ಜಗತ್ತನ್ನು ಎದುರಿಸುವ ಧೈರ್ಯವನ್ನು ಒದಗಿಸುವ ಪ್ರೇರಣೆಯನ್ನು ವಿದ್ಯಾಸಂಸ್ಥೆ ನೀಡುತ್ತದೆ ಎಂದ ಅವರು, ಕ್ರೀಡಾಕೂಟವೆಂದರೆ ಸ್ಪರ್ಧೆಯಲ್ಲ. ಒಬ್ಬರಿಗೊಬ್ಬರು ಪೂರಕವಾಗಿ ಪ್ರತಿಭಾ ಪ್ರದರ್ಶನ ನೀಡುತ್ತಾರೆ. ಇವರಲ್ಲಿ 20 ಅಂಗವಿಕಲ, ವಿಕಲಚೇತನ ವಿದ್ಯಾರ್ಥಿಗಳೂ ಇದ್ದಾರೆ ಎಂದರು.

ಸಂಚಲನ, ಶಿಶುನೃತ್ಯ, ಘೋಷ್ ಪ್ರದರ್ಶನ, ಜಡೆಕೋಲಾಟ, ನಿಯುದ್ಧ, ಯೋಗಾಸನ, ಚಿತ್ತಾರ, ಕೋಲ್ಮಿಂಚು ಪ್ರದರ್ಶನ, ನೃತ್ಯ ಭಜನೆ, ದೀಪಾರತಿ, ಮಲ್ಲಕಂಭ, ಘೋಷ್ ಟಿಕ್ ಟಿಕ್ ಪ್ರದರ್ಶನ, ನೃತ್ಯವೈವಿಧ್ಯ, ಚಕ್ರ ಸಮತೋಲನ, ಬೆಂಕಿ ಸಾಹಸ, ಚೆಂಡೆವಾದ್ಯ, ಕಾಲ್ಚಕ್ರ, ಕೂಪಿಕಾ, ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರಂಗೋಲಿಯ ಚಿತ್ತಾರ, ಅಣಕು ಪ್ರದರ್ಶನಗಳು ಈ ಬಾರಿಯ ಹೈಲೈಟ್ಸ್.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್, ಪದವಿ ಕಾಲೇಜು ಉಪನ್ಯಾಸಕ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಕ್ರೀಡಾಕೂಟದಲ್ಲಿ ಈ ಬಾರಿ ಅಣುಪರೀಕ್ಷೆ, ಪಟೇಲ್, ವಾಜಪೇಯಿ ಸ್ಮರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*