ನಂತೂರು ಭಾರತೀ ಪದವಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಶ್ರೀ ಭಾರತೀ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರದ ವಿಟ್ಲ ಸಮೀಪದ ಚಂದಳಿಕೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಪ್ರತಿದಿನವೂ ಶೈಕ್ಷಣಿಕ, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಡಿ.9ರಂದು ಬೆಳಗ್ಗೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಶೇಖರ ಗೌಡ ಕಾಯರ್‌ಮಾರು ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಸಮೀಕ್ಷೆಗಾಗಿ ವಿಟ್ಠಲ ವಿದ್ಯಾ ಸಂಘದ ಸದಸ್ಯ ಪದ್ಮಯ್ಯ ಗೌಡ ಅವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ನಾಲ್ಕು ಗುಂಪುಗಳಾಗಿ ವಿಂಗಡಿಸಿ, ನಾಲ್ಕು ರಸ್ತೆಗಳಲ್ಲಿ ತೆರಳಿ ಮಾಹಿತಿ ಕಲೆಹಾಕಿದರು. ನಿಯರಿತಾ ಸ್ವಾಗತಿಸಿ, ವೀನಾ ವಂದಿಸಿದರು. ಜಾಹ್ನವಿ ನಿರೂಪಿಸಿದರು.

ಜಾಹೀರಾತು

ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಭಟ್ ಬದನಾಜೆ ಅಧ್ಯಕ್ಷತೆ ವಹಿಸಿದ್ದರು. ವಿಟ್ಲದ ಬಂಟ್ವಾಳ ತಾ| ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಮೋಹನ್ ಕಾಯರ್‌ಮಾರ್ ಅವರು ಹೈನುಗಾರಿಕೆ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಯುವಕೇಸರಿ ಅಬೀರಿ ಅತಿಕಾರಬಲು ಅಧ್ಯಕ್ಷ ಸುಶಾಂತ್ ಸಾಲಿಯಾನ್ ಚಂದಳಿಕೆ, ವಿಟ್ಲಮುಡ್ನೂರು ಗ್ರಾ.ಪಂ.ಸದಸ್ಯ ಮಹಾಬಲೇಶ್ವರ ಭಟ್ ಆಲಂಗಾರು, ಗೋವಿಂದ ಭಟ್ ಕಜೆಹಿತ್ತಿಲು, ವಿಟ್ಲ ಲಯನ್ಸ್ ಕ್ಲಬ್ ಉಪಾಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ, ಶಿಲ್ಪಾ ಫರ್ನಿಚರ್‍ಸ್ ಮಾಲಕ ನರೇಂದ್ರ ಸಿ., ಎಸ್‌ಡಿಎಂಸಿ ಸದಸ್ಯ ಕೆ.ಎಚ್.ಪ್ರವೀಣ್ ಕುಮಾರ್, ಜಯರಾಮ್ ನಿಡ್ಯ, ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಈಶ್ವರಪ್ರಸಾದ್ ಎ., ಮುಖ್ಯ ಶಿಬಿರಾಧಿಕಾರಿ ಅಶೋಕ್ ಎಸ್. ಮತ್ತಿತರರು ಉಪಸ್ಥಿತರಿದ್ದರು. ಸ್ನೇಹಾ ಸ್ವಾಗತಿಸಿ, ಗಾಯತ್ರಿ ವಂದಿಸಿದರು. ಸುಶ್ಮಿತಾ ನಿರೂಪಿಸಿದರು.

ಡಿ.10ರಂದು ಬೆಳಗ್ಗೆ ಯುವಕೇಸರಿ ಅಬೀರಿ ಅತಿಕಾರಬಲು ಗೌರವ ಸಲಹೆಗಾರ ವಿಟ್ಠಲ ಪೂಜಾರಿ ಅತಿಕಾರಬಲು ಧ್ವಜಾರೋಹಣ ನೆರವೇರಿಸಿದರು. ಶೈಕ್ಷಣಿಕ ಕಾರ್ಯಕ್ರಮದಲ್ಲಿ ಶುಭಾಂಗಿ ಪದ್ಮರಾಜ್ ಶಿಂಧೆ ಅವರು ವಸ್ತು ಕೌಶಲ್ಯದ ಬಗ್ಗೆ ತರಬೇತಿ ನೀಡಿದರು. ಚಂದಳಿಕೆ ಶಾಲೆ ಶಿಕ್ಷಕಿ ಪುಷ್ಪಾವತಿ ಉಪಸ್ಥಿತರಿದ್ದರು. ಶ್ರೇಯಾ ಸ್ವಾಗತಿಸಿ, ಹಿತಾಕ್ಷಿ ವಂದಿಸಿದರು. ವೆಂಕಟೇಶ್ ಕೆ.ಎಂ. ನಿರೂಪಿಸಿದರು.

ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಮಜಿ ಶಾಲೆ ಮುಖ್ಯೋಪಾಧ್ಯಾಯ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಎಸ್.ಕೆ.ನಾರಾಯಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ವೈದ್ಯಾಽಕಾರಿ ಡಾ.ಗೀತಪ್ರಕಾಶ್ ಸಾಮಾಜಿಕ ಸ್ವಾಸ್ಥ ರಕ್ಷಣೆ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಕಾರ್ತಿಕ್ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಲೋಕೇಶ್ ವಿಟ್ಲ, ನಿವೃತ್ತ ಶಿಕ್ಷಕ ಬಿ.ಶ್ಯಾಮ ಭಟ್, ಕಡೇಶಿವಾಲಯ ಸರಕಾರಿ ಶಾಲೆ ಶಿಕ್ಷಕ ಶಿವರಾಮ ಭಟ್, ಮುಖ್ಯ ಶಿಬಿರಾಽಕಾರಿ ಅಶೋಕ್ ಎಸ್. ಮತ್ತಿತರರು ಉಪಸ್ಥಿತರಿದ್ದರು. ಅನುಷಾ ಸ್ವಾಗತಿಸಿ, ರಶ್ಮಿ ವಂದಿಸಿದರು. ಸ್ವಾತಿ ಎಂ.ಆರ್. ನಿರೂಪಿಸಿದರು.

ಜಾಹೀರಾತು

ಡಿ.11ರಂದು ಬೆಳಗ್ಗೆ ಚಂದಳಿಕೆ ವಿದ್ಯಾವರ್ಧಕ ಸಂಘದ ಸದಸ್ಯ ಶ್ರೀನಿವಾಸ ಚಂದಳಿಕೆ ಧ್ವಜಾರೋಹಣ ನೆರವೇರಿಸಿದರು. ಶೈಕ್ಷಣಿಕ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮೋಹನ ಎ.ಮೈರ ಅವರು ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದರು. ನ್ಯಾಯವಾದಿ ಗೋವಿಂದಮೂರ್ತಿ, ಚಂದಳಿಕೆ ವಿದ್ಯಾವರ್ಧಕ ಸಂಘದ ಸದಸ್ಯ ಸನತ್ ಚಂದಳಿಕೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಒಕ್ಕೂಟದ ಅಧ್ಯಕ್ಷ ಜನಾರ್ದನ ಪದ್ಮಶಾಲಿ, ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಈಶ್ವರಪ್ರಸಾದ್ ಎ., ಮುಖ್ಯ ಶಿಬಿರಾಧಿಕಾರಿ ಅಶೋಕ್ ಎಸ್. ಮತ್ತಿತರರು ಉಪಸ್ಥಿತರಿದ್ದರು. ಸುಶ್ಮಿತಾ ಸ್ವಾಗತಿಸಿ, ಕಾರ್ತಿಕ್ ವಂದಿಸಿದರು. ಸ್ನೇಹಾ ನಿರೂಪಿಸಿದರು.

ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ . ಚಂದಳಿಕೆ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಾಸುದೇವ, ವಿಟ್ಲ ಹವ್ಯಕ ವಲಯ ದಿಗ್ದರ್ಶಕ ಸತೀಶ ಪಂಜಿಗದ್ದೆ, ನಿವೃತ್ತ ಸೈನಿಕ ಹರೀಶ್ ಶೆಟ್ಟಿ, ತ್ರಿಶೂಲ್ ಫ್ರೆಂಡ್ಸ್ ಅಧ್ಯಕ್ಷ ಮಹೇಶ್ ಭಂಡಾರಿ ಕಲ್ಲಕಟ್ಟ, ಚಂದಳಿಕೆ ಮುದೂರೂ ಫ್ರೆಂಡ್ಸ್ ಅಧ್ಯಕ್ಷ ಕೃಷ್ಣ ಮುದೂರು, ಚಂದಳಿಕೆ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ನೋಣಯ್ಯ ಪೂಜಾರಿ, ಭವಾನಿ ಸ್ಯಾನಿಟರಿ ಮಾಲಕ ಗಂಗಾಧರ ಸಿ., ಮುಖ್ಯ ಶಿಬಿರಾಽಕಾರಿ ಅಶೋಕ್ ಎಸ್. ಮತ್ತಿತರರು ಉಪಸ್ಥಿತರಿದ್ದರು. ಅರ್ಪಿತಾ ಸ್ವಾಗತಿಸಿ, ಸ್ವಾತಿ ವಂದಿಸಿದರು. ಜಾಹ್ನವಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂತೂರು ಭಾರತೀ ಪದವಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*