ಅವಿಭಜಿತ ಜಿಲ್ಲಾ ಮಟ್ಟದ ಬಂಟೆರೆ ಕಲಾಪಂಥ, ಸಾಂಸ್ಕೃತಿಕ ವೈಭವ

www.bantwalnews.com Editor: Harish Mambady

ಬಂಟ್ವಾಳ ವರದಿ:

ಜಾಹೀರಾತು

ಬಂಟವಾಳ ಬಂಟರ ಸಂಘದ ವಾರ್ಷಿಕೋತ್ಸವ ಸಾಂಸ್ಕೃತಿಕ ವೈಭವದೊಂದಿಗೆ ಜ.13ರ ಭಾನುವಾರ ಇಡೀ ದಿನ ತುಂಬೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಬಂಟವಾಳ ಬಂಟರ ಭವನದಲ್ಲಿ ನಡೆಯಿತು.

ಬೆಳಗ್ಗೆ 10 ಗಂಟೆಯಿಂದ ಬಂಟೆರೆ ಕಲಾಪಂಥ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಭಾಗವತ ಪಟ್ಲ ಸತೀಶ್ ಶೆಟ್ಟಿ ಮಾರ್ಗದರ್ಶನದಲ್ಲಿ ಆರಂಭಗೊಂಡಿತು. ವಿಶಿಷ್ಟ ಶೈಲಿಯಲ್ಲಿ ನಡೆದ ಈ ಉದ್ಘಾಟನಾ ಸಮಾರಂಭದಲ್ಲಿ ಬಂಟರ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, ಉಪಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಕೋಶಾಧಿಕಾರಿ ಜಗದೀಶ ಶೆಟ್ಟಿ ಇರಾಗುತ್ತು, ಸಹಕಾರ್ಯದರ್ಶಿ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಮಹಿಳಾ ವಿಭಾಗ ಅಧ್ಯಕ್ಷೆ ಆಶಾ ಪಿ. ರೈ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಸಾಂಸ್ಕೃತಿಕ ಸಮಿತಿ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಚಲನಚಿತ್ರ ನಟಿ ನೀತೂ ಶೆಟ್ಟಿ ಭಾಗವಹಿಸಿದರು.

ಜಾಹೀರಾತು

ಜಿಲ್ಲೆಯ ವಿವಿಧ 10 ತಂಡಗಳು ತಲಾ 20 ನಿಮಿಷಗಳ ಪ್ರದರ್ಶನ ನೀಡಿದ್ದು, ಸುರತ್ಕಲ್ ತಂಡ ಪ್ರಥಮ ಕಾರ್ಕಳ ತಂಡ ದ್ವಿತೀಯ ಸ್ಥಾನ ಗಳಿಸಿದವು. ರಾತ್ರಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕೆ.ಕೆ.ಪೂಂಜ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗ್ರಿಗುತ್ತು ವಿವೇಕ್ ಶೆಟ್ಟಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಕೆ.ಪ್ರಕಾಶ್ ಶೆಟ್ಟಿ ಮತ್ತು ರತ್ನಾಕರ ಶೆಟ್ಟಿ ಮುಂಡ್ಕೂರು, ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸಿದರು. ಈ ಸಂದರ್ಭ ಮಾತನಾಡಿದ ಗುರುಕಿರಣ್, ಬಂಟರು ಕಲೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ, ಬಂಟರ ಕಲಾ ಪಂಥದ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಟ್ಟುಗೂಡಿಸಿದಂತಾಗಿದೆ. ಕಾರ್ಯಕ್ರಮ ಸಂಘಟಿಸಿದ ತಾಲೂಕು ಬಂಟರ ಸಂಘದ ಕೆಲಸ ಅದ್ಭುತವಾಗಿದೆ ಎಂದರು. ಪ್ರಕಾಶ್ ಶೆಟ್ಟಿ ಮಾತನಾಡಿ, ಬಂಟರಸಮುದಾಯವನ್ನು ಜಗತ್ತೇ ಗುರುತಿಸಿದೆ. ಪ್ರಪಂಚದ ಹೆಚ್ಚಿನ ದೇಶಗಳಲ್ಲಿ ಬಂಟರು ತಮ್ಮ ಸಾಧನೆ ಮೂಲಕ ಛಾಪು ಮೂಡಿಸಿದ್ದಾರೆ ಎಂದರು.

ಕದ್ರಿ ನವನೀತ ಶೆಟ್ಟಿ ಇಡೀ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅವಿಭಜಿತ ಜಿಲ್ಲಾ ಮಟ್ಟದ ಬಂಟೆರೆ ಕಲಾಪಂಥ, ಸಾಂಸ್ಕೃತಿಕ ವೈಭವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*