ಹಟ್ಟಿಗೊಬ್ಬರ ಬಳಕೆಗೆ ಸರಕಾರದ ಪ್ರೋತ್ಸಾಹ ಅಗತ್ಯ: ರಾಜೇಶ್ ನಾಯ್ಕ್

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಮಾಣಿ (ಬಂಟ್ವಾಳ ತಾಲೂಕು): ರಾಸಾಯನಿಕ ಗೊಬ್ಬರದ ಬದಲಾಗಿ ಹಟ್ಟಿಗೊಬ್ಬರ ಬಳಕೆ ಮಾಡಲು ಸರ್ಕಾರ ಪ್ರೋತ್ಸಾಹ ನೀಡುವ ಅಗತ್ಯವಿದೆ. ಇದರಿಂದ ಗೋಸಾಕಣೆ ಹೆಚ್ಚಾಗಿ ಗೋವಿಗೆ ರಕ್ಷಣೆ ಸಿಗಲು ಸಾಧ್ಯವಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಜಾಹೀರಾತು

ಮಾಣಿ ಶ್ರೀ ರಾಮಚಂದ್ರಾಪುರ ಮಠದಲ್ಲಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನದ ಭಾರತೀಯ ಗೋಪರಿವಾರ, ಕರ್ನಾಟಕ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಪಂಚಗವ್ಯ ಪ್ರಶಿಕ್ಷಣದ ಸಮಾರೋಪದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಗೋಸಾಕಣೆ ಹಾಲಿಗಾಗಿ ಮೀಸಲಾಗದೆ, ಹಿರಿಯರ ಕಲ್ಪನೆಯಂತೆ ಪರ್ಯಾಯ ವಿಚಾರಗಳಿಗೆ ಬಳಸುವಂತಾಗಬೇಕು. ಗೋಮಯ ಹಾಗೂ ಗೋಮೂತ್ರದಲ್ಲಿ ಲಕ್ಷ್ಮಿಯನ್ನು ಕಾಣುವ ಕಾರ್ಯವಾಗಬೇಕಾಗಿದೆ ಎಂದವರು ಹೇಳಿದರು.

ಜಾಹೀರಾತು

ಹವ್ಯಕ ಮಹಾ ಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪು ಮಾತನಾಡಿ ಗೋವಿನ ಬಗ್ಗೆ ಗೋಪ್ರೇಮಿಗಳು ಸರ್ಕಾರದ ಮಟ್ಟದಲ್ಲಿ – ವಿಧಾನಸಭೆಯಲ್ಲಿ ಮಾತನಾಡಬೇಕಾಗಿದೆ. ಗೋವನ್ನು ಬಳಸಿಕೊಳ್ಳುವ ವಿಧಾನಗಳನ್ನು ತಿಳಿದು ಮುನ್ನಡೆದಾಗ ಜೀವನದಲ್ಲಿ ಯಶಸ್ವಿ ಲಭಿಸುತ್ತದೆ. ದೇಶೀ ಗೋವಿನ ಆದರ್ಶಗಳನ್ನಿಟ್ಟುಕೊಂಡು ಮುನ್ನಡೆದಾಗ ಗೋವಿನ ರಕ್ಷಣೆ ಸಾಧ್ಯ ಎಂದರು.

18 ಮಂದಿ ಶಿಬಿರಾರ್ಥಿಗಳು ಭಾಗವಹಿಸಿ ಗೌವ್ಯೋತ್ಪನ್ನ ತಯಾರಿಯ ಬಗ್ಗೆ ತರಬೇತಿ ಪಡೆದುಕೊಂಡರು. ಸುಲೋಚನಾ ಎಂ. ಅವರು ತರಬೇತಿ ನೀಡಿದರು. ಪ್ರೇಮ್ ಚಂದ್ರ ಮಂಜೇಶ್ವರ, ಜ್ಯೋತಿ ಪೈ ಉಡುಪಿ ಅನುಭವ ಹಂಚಿಕೊಂಡರು.

ಗೋಪರಿವಾರದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಗೋಪ್ರೇಮಿ ಪದ್ಮನಾಭ ಶೆಟ್ಟಿ, ಮಾತೃ ಗೋಪರಿವಾರದ ರಾಜ್ಯ ಅಧ್ಯಕ್ಷೆ ಕೆ. ಟಿ. ಶೈಲಜಾ ಭಟ್, ಮಾಣಿ ಮಠ ಸೇವಾ ಸಮಿತಿ ಅಧ್ಯಕ್ಷ ಹಾರೆಕರೆ ನಾರಾಯಣ ಭಟ್ ಉಪಸ್ಥಿತರಿದ್ದರು.

ಜಾಹೀರಾತು

ಪಂಚಗವ್ಯ ಪ್ರಶಿಕ್ಷಣ ಸಂಚಾಲಕ ಡಾ. ರವಿ ಪಾಂಡವಪುರ ಸ್ವಾಗತಿಸಿ, ಪ್ರಸ್ತಾವನೆಗೈದರು. ಭಾರತೀಯ ಗೋ ಪರಿವಾರ ರಾಜ್ಯ ಸಂಘಟನಾ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ ವಂದಿಸಿದರು. ಶ್ರೀಕಾರ್ಯದರ್ಶಿ ಶಿಶಿರ್ ಅಂಗಡಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಟ್ಟಿಗೊಬ್ಬರ ಬಳಕೆಗೆ ಸರಕಾರದ ಪ್ರೋತ್ಸಾಹ ಅಗತ್ಯ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*