ಮೆಸ್ಕಾಂ ನಿವೃತ್ತ ಲೆಕ್ಕಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯ ಬಂಟ್ವಾಳ ವಿಭಾಗದ ಲೆಕ್ಕಾಧಿಕಾರಿಗಳಾದ ಮಂಜ ನಾಯ್ಕ ಎನ್., ಮತ್ತು ಸಾಯಿರಾಮ್ ಪವಾರ್ ಬೀಳ್ಕೊಡುಗೆ ಸಮಾರಂಭ ಬಂಟ್ವಾಳ ವಿಭಾಗೀಯ ಕಚೇರಿ ಆವರಣದಲ್ಲಿ ನಡೆಯಿತು.

ಜಾಹೀರಾತು

ಮಂಗಳೂರು ವೃತ್ತ ಅಧೀಕ್ಷಕ ಇಂಜಿನಿಯರ್ ಮಂಜಪ್ಪ ಅವರು ಇಬ್ಬರನ್ನೂ ಸನ್ಮಾನಿಸಿದರು. ತಾನು ನಿರ್ವಹಿಸುವ ಕೆಲಸ ಕಾರ್ಯಗಳಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಯಾರೇ ಪ್ರಶ್ನಿಸಿದರೂ ಅದಕ್ಕೆ ಸರಿಯಾದ ಉತ್ತರಗಳು ದೊರೆಯುವಂತಿರಬೇಕು , ಅಂತಹ ತಾರ್ಕಿಕ ವಿಚಾರಗಳಿರುವ ವ್ಯಕ್ತಿಯ ನಿರ್ಧಾರಗಳು ಇನ್ನೊಬ್ಬರಿಗೆ ಆದರ್ಶವಾಗಿರುತ್ತದೆ. ಇದಕ್ಕೆ ಸಾಕ್ಷಿ ನಿವೃತ್ತಿ ಹೊಂದುತ್ತಿರುವ ಮಂಜ ನಾಯ್ಕ ಮತ್ತು ಸಾಯಿರಾಮ್ ಪವಾರ್ ಎಂದರು.

ಕ.ವಿ.ಪ್ರನಿ.ನಿ ನೌಕರರ ಸಂಘ ಕೇಂದ್ರ ಸಮಿತಿ ಬೆಂಗಳೂರಿನ  ಪ್ರಧಾನ ಕಾರ್ಯದರ್ಶಿ ಕೆ.ಬಲರಾಮ್ ಮಾತನಾಡಿ, ಕಾರ್ಮಿಕ ಕಲ್ಯಾಣದಿಂದ ಇಲಾಖೆಗಳ ಪ್ರಗತಿಸಾಧ್ಯ. ಆಧುನಿಕ ಜಗತ್ತಿಗೆ ಹೊಂದಿಕೊಂಡಂತೆ ಮೆಸ್ಕಾಂ ಈಗಾಗಲೇ ಅನೇಕ ಆಧುನಿಕ ತಂತ್ರಾಂಶಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು ಅದಕ್ಕೆ ಮೆಸ್ಕಾಂನ ಕಾರ್ಮಿಕ ಶಕ್ತಿಯೇ ಕಾರಣ ಮೇಲಾಧಿಕಾರಿಗಳಿಂದ ಹಿಡಿದು ಮೆಸ್ಕಾಂನ ಪವರ್ ಮ್ಯಾನ್ ಗಳ ತನಕವೂ ದಕ್ಷತೆಯಿಂದ ದುಡಿಯುತ್ತಿರುವ ಪ್ರತಿಫಲವೇ ಇಲಾಖೆಯ ಸರ್ವ ಅಭಿವೃದ್ಧಿಗೆ ಕಾರಣವಾಗಿದೆ. ಈ ಹಂತ ತಲುಪಬೇಕಾದರೆ ದುಡಿಯುತ್ತಿರುವ ಶ್ರಮ ಶಕ್ತಿಗಳಿಗೆ ತಕ್ಕ ಸಂಭಾವನೆ ಹಾಗೂ ಸೌಲಭ್ಯಗಳು ಸಿಕ್ಕಾಗ ಮಾತ್ರ ಸಾಧ್ಯ. ಮೆಸ್ಕಾಂನ ಪವರ್ ಮ್ಯಾನ್ , ಲೈನ್ ಮ್ಯಾನ್ ಪ್ರತಿದಿನವೂ ಅಪಾಯದ ಅಂಚಿನಲ್ಲಿದ್ದು ಅವರಿಗೆ ಸೂಕ್ತ ಭಧ್ರತೆಯನ್ನು ಒದಗಿಸುವುದು ಇಲಾಖೆಯ ಕರ್ತವ್ಯ. ಈ ನಿಟ್ಟಿನಲ್ಲಿ ಮೆಸ್ಕಾಂನ ಕಾರ್ಯಕ್ರಮಗಳು ಶ್ಲಾಘನೀಯ. ಒಂದು ಕಾಲದಲ್ಲಿ ಬೆಸ್ಕಾಂ ನಂಬರ್ ಒನ್ ಸ್ಥಾನದಲ್ಲಿದ್ದರೆ ಪ್ರಸ್ತುತ ಮೆಸ್ಕಾಂ ಉತ್ತಮ ಕಾರ್ಯ ನಿರ್ವಹಿಸಿ ಒಂದನೇ ಸ್ಥಾನಕ್ಕೆ ಬಂದಿರುವುದು ಅಭಿನಂದನಾರ್ಹ ಎಂದು ನುಡಿದರು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ. ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ನಿವೃತ್ತ ಮುಖ್ಯ ಇಂಜಿನಿಯರ್ ಮಹದೇವಪ್ಪ, ಆರ್ಥಿಕ ಸಲಹೆಗಾರ ಆರ್.ಎಸ್.ಜಂಬಗಿ, ಮಂಗಳೂರು ಅಧೀಕ್ಷಕ ಇಂಜಿನಿಯರ್ ಕೆ.ವಿ.ಉಮೇಶ್ಚಂದ್ರ, ಉಪಲೆಕ್ಕ ನಿಯಂತ್ರಣಾಧಿಕಾರಿ ಮುರಳೀಧರ ನಾಯಕ್, ಕ.ವಿ.ಪ್ರ.ನಿ.ನಿ ನೌಕರರ ಸಂಘ ಉಪಾಧ್ಯಕ್ಷ ಎಚ್.ಎಸ್.ಗುರುಮೂರ್ತಿ, ಪ.ಜಾ.ಹಾಗೂ ಪ.ವರ್ಗಗಳ ಕಲ್ಯಾಣ ಸಂಸ್ಥೆ ಮೆಸ್ಕಾಂ ಕೇಂದ್ರ ಸಮಿತಿ ಸದಸ್ಯ ಶ್ರೀನಿವಾಸಪ್ಪ, ಶಾಖಾಧಿಕಾರಿ ರಾಮಚಂದ್ರ ಎ.  ಸಂಘಟನಾ ಕಾರ್ಯದರ್ಶಿ ಕ.ವಿ.ಪ್ರ.ನಿ.ನಿ ನೌಕರರ ಸಂಘ ಮಂಗಳೂರು ಕೆ.ಶಂಕರ್ ಪ್ರಕಾಶ್, ಪ.ಜಾ.ಹಾಗೂ ಪ.ವರ್ಗಗಳ ಕಲ್ಯಾಣ ಸಂಸ್ಥೆ ಮೆಸ್ಕಾಂ ಮಂಗಳೂರು ಅಧ್ಯಕ್ಷ ಮಾರಪ್ಪ ಉಪಸ್ಥಿತರಿದ್ದರು.

ಮೆಲ್ವಿನ್ ಪ್ರಕಾಶ್ ಪಿರೇರಾ ಪ್ರಸ್ತಾನವೆಗೈದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣ ಭಟ್ ಸ್ವಾಗತಿಸಿದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಿವಶಂಕರ್ ವಂದಿಸಿದರು. ರಾಜೀವ್ ಕಕ್ಕೆಪದವು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೆಸ್ಕಾಂ ನಿವೃತ್ತ ಲೆಕ್ಕಾಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*