- ನಮ್ಮ ತ್ಯಾಜ್ಯ ನಮ್ಮ ಹೊಣೆ: ಬಂಟ್ವಾಳ ತಾಲೂಕು ಮಟ್ಟದ ಕಾರ್ಯಾಗಾರ
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ದ.ಕ ಜಿ.ಪಂಚಾಯತ್ ,ಸ್ವಚ್ಛ ಭಾರತ್ ಮಿಷನ್ , ತಾ.ಪಂ ಬಂಟ್ವಾಳ ಇದರ ವತಿಯಿಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಫೆ.2 ರಂದು ಏರ್ಪಡಿಸಲಾದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಮ್ಮ ತ್ಯಾಜ್ಯ – ನಮ್ಮ ಹೊಣೆ” ಪರಿಕಲ್ಪನೆಯಲ್ಲಿ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆಯ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ನಿಷೇಧ ಮಾಡಲು ಇಚ್ಛಾಶಕ್ತಿ ಬೇಕು. ಪ್ಲಾಸ್ಟಿಕ್ ದುಷ್ಪರಿಣಾಮ ನಮಗೇ ಗೊತ್ತಿರಬೇಕು. ಒಂದು ಪ್ಲಾಸ್ಟಿಕ್ ಸುಡುವುದು ಹಾಗೂ ನೂರು ಸಿಗರೇಟ್ ಒಟ್ಟಿಗೇ ಸುಡುವುದೂ ಒಂದೇ ಎಂಬ ಅರಿವು ನಮಗಿರಬೇಕು ಎಂದ ಅವರು, ನಮ್ಮ ಇತಿಮಿತಿಯಲ್ಲಿ ಗ್ರಾಮ ಪಂಚಾಯತ್ ಹೇಗೆ ಮಾದರಿಯಾಗಿ ಪ್ಲಾಸ್ಟಿಕ್ ನಿಷೇಧ ಮಾಡಬಹುದು, ಘನ ಮತ್ತು ದ್ರವ ಸಂಪನ್ಮೂಲಗಳನ್ನು ಹೇಗೆ ನಿರ್ವಹಣೆ ಮಾಡಬಹುದು ಎಂಬ ಮಾಹಿತಿಯನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ್ದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ ಹಾಗೂ ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಕಾರ್ಯನಿರ್ವಹಿಸಿದಾಗ ಸ್ವಚ್ಛತಾ ಆಂದೋಲನ ಯಶಸ್ವಿಯಾಗುವುದು. ಸಾರ್ವಜನಿಕರು ಸ್ಚಚ್ಛತಾ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳುವ ಮೂಲಕ ಗ್ರಾಮದ ನೈರ್ಮಲ್ಯವನ್ನು ತಾವೇ ಮಾಡಿಕೊಳ್ಳಲು ಸಾಧ್ಯವಾಗುವುದು ಎಂದು ಹೇಳಿದರು.
ಕುಂದಾಪುರದ ವಂಡ್ಸೆ ಗ್ರಾ,ಪಂ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ತ್ಯಾಜ್ಯ ಸಂಗ್ರಹ ಹಾಗೂ ವಿಲೇವಾರಿಯ ಬಗ್ಗೆ ಮಾಹಿತಿ ನೀಡಿದರು. ಸ್ವಚ್ಛಭಾರತ ಮಿಶನ್ ಜಿಲ್ಲಾ ಸಂಯೋಜಕಿ ಮಂಜುಳಾ ಜಿ. ಕಾರ್ಯಕ್ರಮ ಸಂಯೋಜಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಕಮಲಾಕ್ಷಿ ಕೆ ಪೂಜಾರಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ ಸದಸ್ಯರಾದ ರತ್ನಾವತಿ ಜಯರಾಮ ಶೆಟ್ಟಿ, ಯಶವಂತ ಪೂಜಾರಿ ಪೊಳಲಿ, ಲಕ್ಷ್ಮೀ ಗೋಪಾಲ ಆಚಾರ್ಯ ಬಾಳ್ತಿಲ , ಕೆ.ಸಂಜೀವ ಪೂಜಾರಿ ಸಜಿಪ, ಹೈದರ್ ಕೈರಂಗಳ, ಆದಂ ಕುಂಞ, ವನಜಾಕ್ಷಿ, ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಆರೋಗ್ಯಾಧಿಕಾರಿ ದೀಪಾ ಪ್ರಭು, ಶಿಕ್ಷಣ ಇಲಾಖೆಯ ರತ್ನಾವತಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Be the first to comment on "ಜನರು ಬಳಕೆ ಮಾಡುವುದು ನಿಲ್ಲಿಸಿದರೆ ಪ್ಲಾಸ್ಟಿಕ್ ಉತ್ಪಾದನೆಯೇ ನಿಲ್ಲಲು ಸಾಧ್ಯ"