ಭಾರತದ ಸಂಸ್ಕೃತಿ, ಪರಂಪರೆ ವಿಶ್ವಮಾನ್ಯ: ಶತಾವಧಾನಿ ಆರ್. ಗಣೇಶ್

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಕಲ್ಲಡ್ಕ : ಭಾರತೀಯ ಸಂಸ್ಕೃತಿ, ಪರಂಪರೆ ವಿಶ್ವಮಾನ್ಯವಾಗಿದೆ. ನಾವು ಅದನ್ನು ಅರಿತು ಬೆಳೆಸಬೇಕು ಎಂದು ಶತಾವಧಾನಿ ಆರ್. ಗಣೇಶ್ ಹೇಳಿದರು.

ಜಾಹೀರಾತು

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪದವಿ ಕಾಲೇಜಿನಲ್ಲಿ ನಡೆದ ವಿಶ್ವವ್ಯಾಪಿ ಭಾರತ ಎಂಬ ವಲಯ ಮಟ್ಟದ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ನಮ್ಮ ಸಂಸ್ಕೃತಿಯ ವಿಶ್ವವ್ಯಾಪಕತೆಯ ಬಗೆಗೆ ನಮಗೆ ಅರಿವಿಲ್ಲದಿರುವುದು ದುರಂತ. ಉದ್ಧೇಶಪೂರ್ವಕವಾಗಿ ಪಠ್ಯಪುಸ್ತಕಗಳಿಂದ ಇದನ್ನು ಕೈಬಿಡಲಾಗಿದೆ. ಇಂತಹ ದುರುದ್ಧೇಶಪೂರಿತ ವ್ಯಕ್ತಿಗಳೇ ಶಿಕ್ಷಣ ಇಲಾಖೆಯನ್ನು ನಿರ್ವಹಿಸಿತ್ತಿರುವುದು ಖೇದಕರ. ಆದರೆ ಯಾವುದೋ ಒಂದು ಹಂತದಲ್ಲಿ ನೈಜತೆ ಅರಿವಿಗೆ ಬರಲೇಬೇಕಲ್ಲವೇ ಅದಕ್ಕಾಗಿ ಈ ವಿಚಾರ ಸಂಕಿರಣ ಎಂದರು.

ಜಾಹೀರಾತು

ದಿನಪೂರ್ತಿ ನಡೆದ ವಿಚಾರ ಸಂಕಿರಣದ 2ನೇಯ ಅವಧಿಯಲ್ಲಿ ಮಹಾರಾಷ್ಟ್ರದ ಔರಂಗಬಾದ್ ವಿಶ್ವವಿದ್ಯಾನಿಲಯದ ಡಾ| ಶರದ್ ಹೆಬ್ಬಾಳ್ಕರ್ ಭಾರತೀಯ ಸಂಸ್ಕೃತಿಯ ವಿಶ್ವಸಂಚಾರ ಎಂಬ ವಿಷಯ ಮಂಡಿಸಿದರು.

ಪ್ರಜ್ಞಾಪ್ರವಾಹ ಸಂಯೋಜಕ ರಘನಂದನ್, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಹಾಗೂ ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಉಪಸ್ಥಿತರಿದ್ದರು.

ವಿಚಾರ ಸಂಕಿರಣದಲ್ಲಿ ಭಾರತೀಯ ಸಂಸ್ಕೃತಿಯ ವಿಶ್ವಸಂಚಾರದ ವಿವಿಧ ಆಯಾಮಗಳನ್ನು ಬಿಂಬಿಸುವ ನೂರಾರು ಪ್ರದರ್ಶಿನಿಗಳು, ಹತ್ತಾರು ಸ್ತಬ್ಧಚಿತ್ರಗಳು ನೋಡುಗರ ಗಮನ ಸೆಳೆದವು. ಮಂಗಳೂರು ವಿಶ್ವವಿದ್ಯಾನಿಲಯದ ೩೫ ಕಾಲೇಜುಗಳಿಂದ ೧೫೨ ವಿದ್ಯಾರ್ಥಿಗಳು, ೪೬ ಉಪನ್ಯಾಸಕರು, ತುಮಕೂರು, ಬೆಂಗಳೂರು, ರಾಣಿಚೆನ್ನಮ್ಮ, ಮೈಸೂರು, ಶಿವಮೊಗ್ಗ, ಗುಲ್ಬರ್ಗ, ಕರ್ನಾಟಕ ವಿಶ್ವವಿದ್ಯಾನಿಲಯ ಈ ರೀತಿ ಇತರೇ ೧೩ ವಿಶ್ವವಿದ್ಯಾನಿಲಯಗಳ ೫೩ ವಿದ್ಯಾರ್ಥಿಗಳು, ೧೪ ಉಪನ್ಯಾಸಕರು ಅಲ್ಲದೇ ೩೯ ಪ್ರತಿನಿಗಳು ಹಾಗೂ ಶ್ರೀರಾಮ ವಿದ್ಯಾಸಂಸ್ಥೆಯ ೧೩೫ ಉಪನ್ಯಾಸಕರು, ೩೬೦ ವಿದ್ಯಾರ್ಥಿಗಳನ್ನೊಳಗೊಂಡು ಒಟ್ಟು ೮೪೭ ಮಂದಿ ಭಾಗವಹಿಸಿದ್ದಾರೆ.

ಜಾಹೀರಾತು

ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಸ್ವಾಗತಿಸಿ, ಸಂಸ್ಥೆಯ ಸಂಚಾಲಕ ವಸಂತ ಮಾದವ ವಂದಿಸಿ, ಪದವಿ ವಿಭಾಗದ ಕನ್ನಡ ಉಪನ್ಯಾಸಕ ಯತಿರಾಜ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾರತದ ಸಂಸ್ಕೃತಿ, ಪರಂಪರೆ ವಿಶ್ವಮಾನ್ಯ: ಶತಾವಧಾನಿ ಆರ್. ಗಣೇಶ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*