ಅನರ್ಹ ಬಿಪಿಎಲ್ ಕಾರ್ಡ್ 25ರೊಳಗೆ ಒಪ್ಪಿಸಿ ಅಥವಾ ಪರಿಣಾಮ ಎದುರಿಸಿ – ತಹಶೀಲ್ದಾರ್

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲವು ಬಿಪಿಎಲ್ ಪಡಿತರ ಚೀಟಿಗಳು ಅನರ್ಹರಿಗೆ ದೊರಕುತ್ತಿದ್ದು, ಅವುಗಳ ಸವಲತ್ತುಗಳನ್ನು ಉಪಯೋಗಿಸುವುದು ಕಂಡುಬಂದಿದ್ದು, ಅವುಗಳನ್ನು ಹೊಂದಿರುವವರು ಸ್ವಯಂಪ್ರೇರಿತರಾಗಿ ಫೆ.25ರೊಳಗೆ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತಂದೊಪ್ಪಿಸಬೇಕು, ಇಲ್ಲವಾದರೆ, ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಸೂಚಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕೆಲವು ಪಡಿತರ ಚೀಟಿದಾರರು ಸುಳ್ಳು ಮಾಹಿತಿ ನೀಡಿ ಪಡಿತರ ಚೀಟಿ ಪಡೆದಿದ್ದರೆ, ಇನ್ನು ಕೆಲವರು ಬಿಪಿಎಲ್ ಪಡಿತರ ಚೀಟಿ ಪಡೆದ ನಂತರ ಬಿಪಿಎಲ್ ಗೆ ಅನರ್ಹರಾಗಿರುವುದು ಕಂಡುಬಂದಿದೆ. ನಾಲ್ಕು ಚಕ್ರದ ಬಿಳಿ ನಂಬರ್ ಪ್ಲೇಟ್ ವಾಹನ ಹೊಂದಿರುವವರು, ಕುಟುಂಬದಲ್ಲಿ ಸರಕಾರಿ ಅಥವಾ ಅರೆಸರಕಾರಿ ಉದ್ಯೋಗ ಹೊಂದಿರುವವರು, ಆದಾಯ ತೆರಿಗೆ ಪಾವತಿಸುವವರು, ಪಡಿತರ ಚೀಟಿ ವಿಳಾಸದಲ್ಲಿ ವಾಸ್ತವ್ಯದಲ್ಲಿ ಇರುವವರು, ಒಂದೇ ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿರುವವರು, ಮರಣ ಹೊಂದಿದವರ, ಕುಟುಂಬದಲ್ಲಿ ವಾಸವಿಲ್ಲದೇ ಇರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು, 7.5 ಎಕ್ರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವವರು, ವಾರ್ಷಿಕ ಆದಾಯ 1,2 ಲಕ್ಷಕ್ಕಿಂತ ಹೆಚ್ಚು ಹೊಂದಿರುವ ಕುಟುಂಬ, ನಗರ ಪ್ರದೇಶಗಳಲ್ಲಿ 1 ಸಾವಿರ ಚ.ಅಡಿಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಮನೆ ಹೊಂದಿರುವವರಿಗೂ ಬಿಪಿಎಲ್ ಪಡಿತರ ಚೀಟಿ ಹಾಗೂ ಅಂತ್ಯೋದಯ ಚೀಟಿ ಇರುವುದು ಕಂಡುಬಂದರೆ ಅವುಗಳನ್ನು ಫೆ.25ರೊಳಗೆ ತಂದೊಪ್ಪಿಸಬೇಕು ಎಂದು ಅವರು ತಿಳಿಸಿದ್ದಾರೆ.

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅನರ್ಹ ಬಿಪಿಎಲ್ ಕಾರ್ಡ್ 25ರೊಳಗೆ ಒಪ್ಪಿಸಿ ಅಥವಾ ಪರಿಣಾಮ ಎದುರಿಸಿ – ತಹಶೀಲ್ದಾರ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*