ಯೋಧರಿಗೆ ಸಾಂತ್ವನ ಹೇಳುವ ಕೆಲಸವಾಗಲಿ – ಒಡಿಯೂರು ಶ್ರೀಗಳು

ಯೋದರ ತ್ಯಾಗದ ಹಿಂದೆ ನಮ್ಮ ಸುಖವಿದೆ. ಎದೆಕೊಟ್ಟು ಸೆಟೆದು ನಿಲ್ಲುವ ಕಾರ್ಯ ಯೋದರಿಂದ ನಡೆಯಲಿ. ಉಗ್ರರು ಕದ್ದು ಮಾಡಿದ ಯುದ್ಧವನ್ನು ಖಡಿಸುವ ಜತೆಗೆ ಪ್ರತ್ಯುತ್ತರ ನೀಡುವ ಕಾರ್ಯವಾಗಬೇಕು. ನೀಚ ಕೃತ್ಯಕ್ಕೆ ದೇವರ ಬಲ ಯಾವತ್ತೂ ಇರುವುದಿಲ್ಲ. ಯೋದರಿಗೆ ಸಾಂತ್ವನ ಹೇಳುವ ಕಾರ್ಯ ಸಮಾಜ ಮಾಡಬೇಕು. ಉಗ್ರರನ್ನು ಮುಗಿಸಲು ನಮ್ಮ ಸೇನೆಗೆ ಭಗವಂತ ಭೀಮ ಬಲ ನೀಡಲಿ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.


ಅವರು  ಶುಕ್ರವಾರ ಒಡಿಯೂರು ಆತ್ರೇಯ ಮಂಟಪದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆದ ಶ್ರೀ ಒಡಿಯೂರು ರಥೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ, ಸಹಾಯಕ ಹಸ್ತ ವಿತರಿಸಿ ಆಶೀರ್ವಚನ ನೀಡಿದರು.

ಜಾಹೀರಾತು

ಜೀವನ ಎಂಬ ರಥ ಸಾಗಲು ಧರ್ಮ ಪಥದ ಅಗತ್ಯವಿದೆ. ಬದುಕಿನ ಯಾತ್ರೆ ಪರಮಪದ ಸೇರುವ ರೀತಿಯಲ್ಲಿ ಸಾಗಬೇಕು.
ವಾಸ್ತವದೊಂದಿಗೆ ಬದುಕಿದಾಗ ನಿಜಾರ್ಥದಲ್ಲಿ ಬದುಕಲು ಸಾಧ್ಯ. ಕಷ್ಟಗಳನ್ನು, ಸಮಸ್ಯೆಗಳನ್ನು ಮೆಟ್ಟಿಲುಗಳ ಹಾಗೆ ಬಳಸಿ ಮುನ್ನಡೆಯಬೇಕು. ದೇಹ ಎನ್ನುವ ರಥವನ್ನು ಮನಸ್ಸೆಂಬ ಹಗ್ಗದಿಂದ ಕಟ್ಟಿ ಬುದ್ಧಿ ಎಂಬ ಸಾರಥಿಯ ಕೈಗೆ ನೀಡಿದಾಗ ಸಲೀಸಾಗಿರುತ್ತದೆ ಎಂದು ಅವರು ನುಡಿದರು.

ಸಾಧ್ವಿ ಮಾತಾನಂದಮಯೀ , ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ವಿಶಾಖಪಟ್ಟಣ ಆದಾಯ ತೆರಿಗೆ ಇಲಾಖೆ ಕಮಿಷನರ್ ಟಿ. ಎಸ್. ಎನ್. ಮೂರ್ತಿ, ಮೈಸೂರು ಪೋಲಿಸ್ ತರಬೇತಿ ಪ್ರಾಂಶುಪಾಲ ಧರಣೀದೇವಿ ಮಾಲಗತ್ತಿ, ಉದ್ಯಮಿ ಜಗನ್ನಾಥ ಶೆಟ್ಟಿ, ಮುಂಬೈ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷ ಹರೀಶ್ ಶೆಟ್ಟಿ ಐಕಳ, ಆರ್ ಟಿ ಓ ಅಧಿಕಾರಿ ಅಜಿತ್ ಕುಮಾರ್ ಪಂದಳಂ, ಗುರುದೇವ ಸೇವಾಬಳಗದ ವಾಮಯ್ಯ ಬಿ. ಶೆಟ್ಟಿ, ಎ. ಅಶೋಕ್  ಕುಮಾರ್, ಎ. ಸುರೇಶ್ ರೈ, ಕೃಷ್ಣ ಎಲ್. ಶೆಟ್ಟಿ, ಜಯಂತ್ ಜೆ. ಕೋಟ್ಯಾನ್, ಸರ್ವಾಣಿ ಪಿ. ಶೆಟ್ಟಿ, ರೇವತಿ ಡಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನಿತ್ಯಶ್ರೀ ರೈ ಪ್ರಾರ್ಥಿಸಿದರು. ಯಶವಂತ ವಿಟ್ಲ ಸ್ವಾಗತಿಸಿ ಪ್ರಸ್ತಾವನೆಗೈದರು. ಸದಾಶಿವ ಅಳಿಕೆ ಸಹಾಯಹಸ್ತ ಫಲಾನುಭವಿಗಳ ಪಟ್ಟಿ ಓದಿದರು. ಮಾತೇಶ್ ಭಂಡಾರಿ ವಂದಿಸಿದರು. ಪ್ರಕಾಶ್ ಕೆ. ಶೆಟ್ಟಿ ಪೇಟೆಮನೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯೋಧರಿಗೆ ಸಾಂತ್ವನ ಹೇಳುವ ಕೆಲಸವಾಗಲಿ – ಒಡಿಯೂರು ಶ್ರೀಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*