ಸರಪಾಡಿ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಭಾನುವಾರ ಸರಪಾಡಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಥಮ ವರ್ಷದ ಅಂಗವಾಗಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.

ಜಾಹೀರಾತು

ತಿರುಪತಿ ಶ್ರೀ ವೆಂಕಟೇಶ್ವರ ವೇದ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಬ್ರಹ್ಮ ಶ್ರೀ ವಿ.ಗಣೇಶ್ ಪ್ರಸಾದ್ ಮಾರ್ಗದರ್ಶನದಲ್ಲಿ ತಿರುಪತಿಯ ಪುರೋಹಿತ ವೃಂದದ ನೇತೃತ್ವದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ  ಕೈಂಕರ್ಯಗಳು ನಡೆಯಿತು.

ತಿರುಪತಿಯಿಂದ ಆಗಮಿಸಿದ ಶ್ರೀ ತಿರುಪತಿ ವೆಂಕಟರಮಣ ಮತ್ತು ಶ್ರೀ ದೇವಿ, ಭೂ ದೇವಿಯ ಮೂರ್ತಿಯನ್ನು ಬೆಳಗ್ಗೆ ಪೂಪಾಡಿಕಟ್ಟೆ-ಪೆರ್ಲ ಬೀಯಪಾದೆ-ಎಕ್ಕಡೇಲು-ಸರಪಾಡಿ ಮಾರ್ಗವಾಗಿ ಬ್ಯಾಂಡ್, ವಾದ್ಯ, ಕೊಂಬು, ಚೆಂಡೆ ವಾದನದಲ್ಲಿ ಮೆರವಣಿಗೆ ಮೂಲಕ ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ತರಲಾಯಿತು. ಬಳಿಕ ಧಾರ್ಮಿಕ ಪೂಜಾ ಕಾರ್ಯಕ್ರಮ ನಡೆದವು.

ಜಾಹೀರಾತು

ಸಂಚಾಲಕ ರವೀಂದ್ರ ಟಿ.ಸಿ. ಮಾವಿನಕಟ್ಟೆ ಮತ್ತು ವಿಶ್ವನಾಥ ಗೌಡ ದಂಪತಿ ಸೇವಾ ಕರ್ತೃಗಳಾಗಿ ಕಲ್ಯಾಣೋತ್ಸವ ನಡೆಸಿಕೊಟ್ಟರು.

ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವೇ.ಮೂ.ಶಿವ ಪ್ರಸಾದ ಐತಾಳ ಆರಮನೆ ನೇತೃತ್ವದಲ್ಲಿ ದ್ವಾದಶ ನಾಳೀಕೆರ ಯಾಗ ನಡೆಯಿತು. ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ದೇವಸ್ಥಾನದ ಆಡಳಿತ ಮೊಕ್ತೇಸರ ಡಾ| ಎಚ್. ಶಂಕರ ನಾರಾಯಣ ರಾವ್, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಸ್. ನರಸಿಂಹ ಐತಾಳ್, ಅರಮನೆ, ಅಧ್ಯಕ್ಷ ಎಸ್. ದಯಾನಂದ ಐತಾಳ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಗೌರವಾಧ್ಯಕ್ಷ, ಜಿ.ಪಂ.ಸದಸ್ಯ ಬಿ. ಪದ್ಮಶೇಖರ ಜೈನ್ ಬಲ್ಲೋಡಿಗುತ್ತು, ಅಧ್ಯಕ್ಷ ಗಣೇಶ್ ಪೈ ಸರಪಾಡಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳಾದ ನಾರಾಯಣ ಶೆಟ್ಟಿ ಹೊಳ್ಳರಗುತ್ತು, ಪುಷ್ಪರಾಜ್ ಬಂಗೇರ ಹಲ್ಲಂಗಾರು,ಧನಂಜಯ ಶೆಟ್ಟಿ ನಾಡಬೆಟ್ಟು, ಸುರೇಶ ಶೆಟ್ಟಿ ಹಾಲಾಡಿ, ಪದ್ಮಪ್ಪ ಪೂಜಾರಿ ಹೆಗ್ಗಡೆಕೋಡಿ,ರಾಮಚಂದ್ರ ದರ್ಖಾಸು, ಚಂದ್ರಶೇಖರ ನಾಯ್ಕ, ಕಲ್ಯಾಣೊತ್ಸವ ಸಮಿತಿಯ ಪದಾಧಿಕಾರಿಗಳಾದ ಎಚ್. ಸುಂದರ ಶೆಟ್ಟಿ ಹೊಳ್ಳರ ಗುತ್ತು, ಎಚ್. ಸುಧಾಕರ ಶೆಟ್ಟಿ ಹೆಗ್ಗಡೆಕೋಡಿ, ಪ್ರದೀಪ್ ರೈ ಮಾವಿನಕಟ್ಟೆ, ಬಾಲಕೃಷ್ಣ ಪೂಜಾರಿ ಕೊಟ್ಟುಂಜ, ಮನೋಹರ  ಪೂಜಾರಿ ಬೊಳ್ಳೂರು,  ಚಂದ್ರಹಾಸ ಶೆಟ್ಟಿ ಹೊಳ್ಳರಗುತ್ತು, ಶಶಿಕಾಂತ ಶೆಟ್ಟಿ ಆರುಮುಡಿ, ವರದರಾಜ ಅಲ್ಲಿಪಾದೆ ಮತ್ತಿತರರು ಉಪಸ್ಥಿತರಿದ್ದರು. ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಪೂಜೆ, ಶ್ರೀ ವೆಂಕಟರಮಣ ದೇವರಿಗೆ ರಂಗಪೂಜೆ ನಡೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಪಾಡಿ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*