ಅಮೈ ನಿವಾಸಿ ಆರೆಸ್ಸೆಸ್ ವಿಟ್ಲ ತಾಲೂಕಿನ ಸಂಘಚಾಲಕ ವೆಂಕಟೇಶ್ವರ ಅಮೈ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನಹೊಂದಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿರುವ ಅವರು ಪ್ರಸ್ತುತ ವಿಟ್ಲ ತಾಲೂಕಿನ ಸಂಘಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಪ್ರಾಥಮಿಕ ಶಾಲೆಯ ಅಧ್ಯಕ್ಷರಾಗಿ, ಮೈತ್ರೇಯಿ ಗುರುಕುಲ ಸಹಿತ ಹಲವು ಸಾಮಾಜಿಕ ಸಂಘ, ಸಂಸ್ಥೆಗಳಲ್ಲಿ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಿದ್ದರು.
ಜಾಹೀರಾತು
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆರೆಸ್ಸೆಸ್ ಮುಖಂಡ ವೆಂಕಟೇಶ್ವರ ಅಮೈ ನಿಧನ"