ಸರಕಾರಿ ಶಾಲೆ ಉಳಿಸಲು ಬಲೇ ಚಾ ಪರ್ಕ

ಬಂಟ್ವಾಳ: ಶತಮಾನದತ್ತ ಸಾಗುತ್ತಿರುವ ಇಲ್ಲಿನ ಬಿ.ಮೂಡ ಗ್ರಾಮದ ಅಜ್ಜಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮತ್ತಷ್ಟು ಸಶಕ್ತಗೊಳಿಸಿ ವಿದ್ಯಾಥಿಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಮ್ಮ ಊರು ನಮ್ಮ ಶಾಲೆ, ಶಾಲೆಯತ್ತ ನಮ್ಮ ಚಿತ್ತ, ನಮ್ಮ ಹೆಜ್ಜೆ ಎನ್ನುವ ಧ್ಯೇಯ ವಾಕ್ಯದಡಿ ಬಲೇ ಚಾಪರ್‍ಕ ಎನ್ನುವ ವಿನೂತನ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.

ಜಾಹೀರಾತು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ವಿಶೇಷ ಅತಿಥಿಯಾಗಿ ಚಿತ್ರನಟ ದೇವದಾಸ್ ಕಾಪಿಕಾಡ್ ಅವರು ಭಾಗವಹಿಸಿ ಕನ್ನಡ ಭಾಷೆಯ ಜೊತೆಗೆ ವ್ಯಾವಹಾರಿಕವಾಗಿ ಪ್ರಗತಿ ಹೊಂದಲು ಇಂದಿನ ದಿನಗಳಲ್ಲಿ ಇಂಗ್ಲೀಷ್ ಅಗತ್ಯವಿದೆ ಎಂದ ಅವರು ಶಾಲೆಯ ಅಭಿವೃದ್ದಿಗಾಗಿ ತಾನು ಸಹಕರಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಮಾತನಾಡಿ ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ವಿನೂತನವಾದ ಪ್ರಯೋಗಗಳು ನಮ್ಮ ಶಾಲೆಯಲ್ಲಿ ಆಗುತ್ತಿದೆ. ಅನೇಕ ಪೋಷಕರು ಖಾಸಗಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಶಾಲೆಯನ್ನು ಬಲಪಡಿಸುತ್ತಿದ್ದಾರೆ ಇಂತಹ ಕಾರ್ಯಗಳು ನಮಗೆಲ್ಲರಿಗೂ ಮಾದರಿ ಎಂದರು. ವಿದ್ಯಾರ್ಥಿಗಳ ಪೋಷಕರು ಸರಕಾರಿ ಶಾಲೆ ಹಾಗೂ ಖಾಸಗಿ ಶಾಲೆಯನ್ನು ಪರಸ್ಪರ ತುಲನೆ ಮಾಡಿ ನೋಡಬೇಕು, ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಓದಿಸಿದರೆ ವರ್ಷಕ್ಕೆ ಕನಿಷ್ಟ ೩ ಲಕ್ಷ ರುಪಾಯಿಯನ್ನು ಉಳಿಸಲು ಸಾಧ್ಯವಿದೆ ಎಂದು ಅವರು ವಿಟ್ಲ ಹಾಗೂ ದಡ್ಡಲಕಾಡು ಶಾಲೆಯಲ್ಲಿ ಗ್ರಾಮಸ್ಥರ ಸಹಕಾರದಿಂದಲೇ ಇಂದು ಸೆಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು. ಶಾಲಾಭಿವೃದ್ದಿ ಸಮಿತಿಯ ಗೌರವಾಧ್ಯಕ್ಷ ಡಾ. ರಮೇಶಾನಂದ ಸೋಮಾಯಾಜಿ ಅಧ್ಯಕ್ಷತೆ ವಹಿಸಿದ್ದರು.

ಜಾಹೀರಾತು

ಪುರಸಭಾ ಸದಸ್ಯೆ ವಿದ್ಯಾವತಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್, ಮುಖ್ಯೋಪಧ್ಯಾಯಿನಿ ಕುಶಲ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಶುಭ, ಸುರೇಖ, ಪ್ರಮುಖರಾದ ಬೇಬಿ ಕುಂದರ್, ಸತೀಶ್ ಕುಲಾಲ್, ಡಿ.ಎಂ.ಕುಲಾಲ್, ರಮೇಶ್ ನಾಯಕ್ ರಾಯಿ, ಉಮನಾಥ ರೈ ಮೇರಾವು, ಶಿವಪ್ರಸಾದ್ ಶೆಟ್ಟಿ, ಬಿ.ಎಂ. ತುಂಬೆ, ರಾಜೇಶ್ ಸುವರ್ಣ, ಭಾಸ್ಕರ ರಾವ್, ಲಿಂಗಪ್ಪ ಮಾಸ್ತರ್, ದಯನಂದ ರೈ, ರಮೆಶ್ ಶೆಣೈ, ಹೆಚ್.ಎನ್.ಹೆಬ್ಬಾರ್, ಚೆನ್ನಕೇಶವ ಮತ್ತಿತರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಶ್ರೀಧರ ಅಮೀನ್ ಅಗ್ರಬೈಲು ಸ್ವಾಗತಿಸಿದರು, ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರ ಬಿ.ರಾಮಚಂದ್ರ ರಾವ್ ಪ್ರಸ್ತಾವಿಸಿದರು, ಶಾಲಾ ಶಿಕ್ಷಕ ನವೀನ್ ಪಿ.ಎಸ್. ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಕಾರಿ ಶಾಲೆ ಉಳಿಸಲು ಬಲೇ ಚಾ ಪರ್ಕ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*