ನೋಡ ಬನ್ನಿ ಪೊಳಲಿ, ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳಿ

  • ಹರೀಶ ಮಾಂಬಾಡಿ

ಸುದ್ದಿ, ಲೇಖನಗಳಿಗೆ ಕ್ಲಿಕ್ ಮಾಡಿರಿ www.bantwalnews.com

ಜಾಹೀರಾತು

ರಾತ್ರಿ, ಹಗಲೆಂಬ ಪರಿವೆ ಇಲ್ಲ, ಪೊಳಲಿಯತ್ತ ಹರಿಯುತ್ತಿದೆ ಭಕ್ತಜನಸಾಗರ. ಇದು ಸೋಮವಾರ ಮಾರ್ಚ್ 4ರಿಂದ ಆರಂಭಗೊಂಡು, ಮುಂದಿನ ಬುಧವಾರ ಮಾರ್ಚ್ 13ರವರೆಗೆ ನಡೆಯುವ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಭ್ರಮದ ಕ್ಷಣಗಳು. 10ರಂದು ಪ್ರತಿಷ್ಠೆ, 13ರಂದು ನಡೆಯುವ ಬ್ರಹ್ಮಕಲಶಾಭಿಷೇಕ ಸಮಾರಂಭಕ್ಕೆ ಭಕ್ತರ ದಂಡೇ ಬರುತ್ತಿದೆ.

ಒಂದೆಡೆ ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ. ಇನ್ನೊಂದೆಡೆ ವಿಶಾಲವಾದ ಚಪ್ಪರದಡಿ ಅನ್ನಪ್ರಸಾದ. ಮತ್ತೊಂದೆಡೆ ದೇವರ ದರ್ಶನ ಹಾಗೂ ಜೀರ್ಣೋದ್ಧಾರಗೊಂಡ ದೇಗುಲದ ವೈಭವ ನೋಡಲು ಕುತೂಹಲಿಗರು. ವಿಶಾಲವಾದ ಉಗ್ರಾಣದಲ್ಲಿ ಅಕ್ಕಿ, ತರಕಾರಿಗಳ ಸಾಲು, ಪಾಕಶಾಲೆಯಲ್ಲಿ ಸಿದ್ಧವಾಗುತ್ತಿರುವ ತಿಂಡಿ, ಪಾನೀಯ, ಅನ್ನಪ್ರಸಾದ. ಎಲ್ಲವೂ ಅಚ್ಚುಕಟ್ಟು. ಒಂದು ಕಡ್ಡಿ, ಕಸವೂ ಬೀಳದಂತೆ ಎತ್ತಿಡುವ ಸ್ವಯಂಸೇವಕರು. ಎಲ್ಲವೂ ಪೊಳಲಿಯಮ್ಮನ ಪಾದಕಮಲಗಳಿಗೆ ಅರ್ಪಣೆ ಎಂಬ ಸಂಘಟಕರು. ಹೀಗೆ ಪೊಳಲಿಯಲ್ಲಿದೆ ವ್ಯವಸ್ಥಿತ ಸಂಘಟನೆ.

ಜಾಹೀರಾತು

ದೇವಸ್ಥಾನದ ಜೀರ್ಣೋದ್ಧಾರದ ಬಳಿಕ ನಡೆಯುವ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ವೈದಿಕರ ತಂಡ ಸಕಲ ಧಾರ್ಮಿಕ ಕಾರ್ಯಗಳಲ್ಲಿ ನಿರತವಾಗಿದ್ದರೆ, ಹೊರಗೆ ವಾಹನ ನಿಲುಗಡೆಯಿಂದ ನೀರು ಪೂರೈಕೆವರೆಗೆ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಸ್ವಯಂಸೇವಕರು ತೊಡಗಿಸಿಕೊಂಡಿದ್ದಾರೆ. ಒಳಗೆ ಪ್ರವೇಶಿಸುವಾಗಲೇ ಬಣ್ಣ ಬಣ್ಣದ ವಸ್ತ್ರಾಲಂಕಾರದೊಂದಿಗೆ ಚಪ್ಪರಗಳು ನಿರ್ಮಾಣಗೊಂಡು ಬಿಸಿಲಿಗೆ ಆಸರೆಯಾದರೆ, ಹಗಲು, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಉಪನ್ಯಾಸಗಳು ನೋಡುಗನ ಕಣ್ಣನ್ನಷ್ಟೇ ಅಲ್ಲ, ವೈಚಾರಿಕ ಅರಿವನ್ನೂ ಒದಗಿಸುತ್ತದೆ.

ಜಾಹೀರಾತು

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಸ್ವಚ್ಛತೆಗೆ ಗರಿಷ್ಠ ಆದ್ಯತೆ ದ್ರವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಅಳವಡಿಸಲಾಗಿದೆ. ಸುಮಾರು ೫೦ ಸಾವಿರ ಲೀಟರ್ ಸಾಮರ್ಥ್ಯದ ದ್ರವ ತ್ಯಾಜ್ಯ ಘಟಕವನ್ನು ಸ್ಥಾಪಿಸಲಾಗಿದ್ದು, ಇಲ್ಲಿ ಕೈತೊಳೆದ ನೀರು, ಅಡುಗೆ ತಯಾರಿ ವಸತಿಗೃಹ, ಕಲ್ಯಾಣ ಮಂಟಪದ ತ್ಯಾಜ್ಯ ನೀರು, ಶೌಚಗೃಹಗಳ ತ್ಯಾಜ್ಯನೀರನ್ನು ಎಲ್ಲೂ ಹೊರಗೆ ಹರಿಯಲು ಬಿಡದೆ ಸಂಸ್ಕರಣೆ ಮಾಡಲಾಗುತ್ತದೆ.

ಪೊಳಲಿ ಮಾತೆಯ ಎದುರು ಶ್ರೀಮಂತ, ಬಡವ ಎಂಬ ತಾರತಮ್ಯವಿಲ್ಲ. ಪೊಳಲಿಯಲ್ಲಿ ನಿಂತು ನಾನೇ, ನನ್ನಿಂದಲೇ ಎನ್ನುವವರನ್ನು ಭಕ್ತರು ಮರುಕದಿಂದ ನೋಡುತ್ತಾರೆ. ಏಕೆಂದರೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಯ ಎದುರು ಎಲ್ಲರೂ ತೃಣಮಾತ್ರರು ಎಂಬ ಸಿದ್ಧಾಂತದಡಿ ಭಕ್ತರು ಇಲ್ಲಿ ನಡೆದುಕೊಳ್ಳುತ್ತಾರೆ.

ಜಾಹೀರಾತು

12ರಂದು ಸಿಎಂ ಭೇಟಿ:

ಪ್ರತಿದಿನ ಧಾರ್ಮಿಕ ಕಾರ್ಯಕ್ರಮದಲ್ಲಿ ನಾನಾ ಸ್ವಾಮೀಜಿಗಳು, ಗಣ್ಯರು ಭಾಗವಹಿಸುತ್ತಾರೆ. ಹಲವು ವಿಚಾರ ಪ್ರಚೋದಕ ಭಾಷಣಗಳು ಇಲ್ಲಿ ನಡೆಯುತ್ತವೆ.  ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಅಂದು ಸಂಜೆ 6ರಿಂದ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಅಧ್ಯಕ್ಷತೆಯನ್ನು ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆ ವಹಿಸುವರು.

ಜಾಹೀರಾತು

ಚಿತ್ರಕೃಪೆ: ವಾಮನ ಪೂಜಾರಿ, ಪೊಳಲಿ, https://www.facebook.com/SriPolali/

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೋಡ ಬನ್ನಿ ಪೊಳಲಿ, ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*