ಬಸ್ ಸಂಚಾರಕ್ಕೆ ನಿರ್ಬಂಧ, ಆಟೊ ಚಾಲಕರಿಂದ ದಿಢೀರ್ ಪ್ರತಿಭಟನೆ

ಖಾಸಗಿ, ಸರಕಾರಿ ಬಸ್ ಗಳನ್ನು ಬಿ‌.ಸಿ‌.ರೋಡ್ ನ ಒಳರಸ್ತೆಗೆ ಸಂಚಾರವನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಬಿ.ಸಿ‌.ರೋಡ್-ಕೈಕಂಬ ಆಟೋ ರಿಕ್ಷಾ ಚಾಲಕರು ಸೋಮವಾರ ಇಲ್ಲಿನ ಮೇಲ್ಸೆತುವೆಯಲ್ಲಿ ದಿಢೀರನೆ ಪ್ರತಿಭಟನೆ ನಡೆಸಿದರು.

ಜಾಹೀರಾತು

ದಿಢೀರನೆ ಬಸ್ ಗಳ ಸಂಚಾರವನ್ನು ನಿರ್ಬಂಧಿಸಿರುವುದು ಸರಿಯಲ್ಲ. ಇದರಿಂದ ಆಟೋ ಚಾಲಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಟೊ ಚಾಲಕರು ದೂರಿಕೊಂಡರು.
ಬಳಿಕ ಆಟೊ‌ಚಾಲಕರು ಹೆದ್ದಾರಿ ಯಲ್ಲಿ ಬರುತ್ತಿದ್ದ ಬಸ್ ಗಳನ್ನು ತಡೆದು ನಿಲ್ಲಿಸಿ, ಬಿ.ಸಿ‌.ರೋಡಿನ ಕೆಳರಸ್ತೆಯಲ್ಲಿ ಸಂಚರಿಸುವಂತೆ ಮುಂದಾಗ ಪೊಲಿಸರು ತಡೆವೊಡ್ಡಿದರು. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಹಾಗೂ ಬಂಟ್ವಾಳ ಕ್ರೈಂ ಎಸ್ಸೈ ಸುಧಾಕರ್ ಜಿ‌.ತೋನ್ಸೆ ಧಾವಿಸಿ, ಆಟೊ ಚಾಲಕರೊಂದಿಗೆ ಮಾತುಕತೆ ನಡೆಸಿದರು.

ಬಸ್ಗಳ ಸಂಚಾರ ನಿರ್ಬಂಧಿಸಿದಕ್ಕೆ ಆಟೊ ಚಾಲಕರು ಆಕ್ಷೇಪ ವ್ಯಕ್ತಪಡಿಸಿದಾಗ, ಬಂಟ್ವಾಳ ಎಎಸ್ಪಿ ಅವರ ನಿರ್ದೇಶನ ಮೇರೆಗೆ ಬಿ.ಸಿ.ರೋಡ್ ಒಳರಸ್ತೆಯಲ್ಲಿ ಬಸ್ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಬಗ್ಗೆ ಎಎಸ್ಪಿ ಅವರೊಂದಿಗೆ ಮಾತುಕತೆಗೆ ತೆರಳುವಂತೆ ಹಾಗೂ ಪ್ರತಿಭಟನೆಯನ್ನು ಕೈಬಿಡುವಂತೆ ಎಸ್ಸೈ ಸುಧಾಕರ್ ಅವರು ಚಾಲಕರಿಗೆ ತಿಳಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಸ್ ಸಂಚಾರಕ್ಕೆ ನಿರ್ಬಂಧ, ಆಟೊ ಚಾಲಕರಿಂದ ದಿಢೀರ್ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*