ಸಂಭ್ರಮದ ಸ್ವಾಗತದೊಂದಿಗೆ ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಸ್ವಾಗತ ಕೋರುವ ಬ್ಯಾನರ್, ಕಮಾನುಗಳು, ಸೆಖೆಯಲ್ಲಿ ಬೆವರೊರೆಸಿಕೊಳ್ಳುವ ವಿದ್ಯಾರ್ಥಿಗಳಿಗೆ ಪಾನೀಯ, ಉಪಾಹಾರ ವ್ಯವಸ್ಥೆ, ಧರ್ಮಗುರುಗಳಿಂದ ಆಶೀರ್ವಾದ.. ಹೀಗೆ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಪ್ರಥಮ ಭಾಷೆ (ಕನ್ನಡ) ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಷ್ಟೇ ಅಲ್ಲ, ಶಿಕ್ಷಣಾಭಿಮಾನಿಗಳಿಂದಲೂ ಸಂಭ್ರಮದ ಪ್ರೋತ್ಸಾಹ.

ಬಂಟ್ವಾಳ ತಾಲೂಕಿನಾದ್ಯಂತ 17 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿವೆ. ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ, ಪಾಣೆಮಂಗಳೂರು ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯ, ಮೊಡಂಕಾಪು ದೀಪಿಕಾ ಪ್ರೌಢಶಾಲೆ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಬಾಲಿಕೆಯರ ಪ್ರೌಢಶಾಲೆ, ವಿಠಲ ಪದವಿಪೂರ್ವ ಕಾಲೇಜು ವಿಟ್ಲ, ವಿಠಲ ಪ್ರೌಢಶಾಲೆ ವಿಟ್ಲ, ಬಂಟ್ವಾಳ ಎಸ್.ವಿ.ಎಸ್. ಪ್ರೌಢಶಾಲೆ, ಅಳಿಕೆ ಸತ್ಯಸಾಯಿ ಪ್ರೌಢಶಾಲೆ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ, ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜು, ಕುರ್ನಾಡು ಸರಕಾರಿ ಪದವಿಪೂರ್ವ ಕಾಲೇಜು, ಮಾಣಿ ಕರ್ನಾಟಕ ಪ್ರೌಢಶಾಲೆ, ತುಂಬೆ ಪದವಿಪೂರ್ವ ಕಾಲೇಜು,  ಕನ್ಯಾನ ಸರಕಾರಿ ಪದವಿಪೂರ್ವ ಕಾಲೇಜು, ಕಾವಳಪಡೂರು ವಗ್ಗ ಸರಕಾರಿ ಪದವಿಪೂರ್ವ ಕಾಲೇಜು, ಮೊಂಟೆಪದವು ಸರಕಾರಿ ಪದವಿಪೂರ್ವ ಕಾಲೇಜು, ಕೊಳ್ನಾಡು ಸರಕಾರಿ ಪ್ರೌಢಶಾಲೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ.

ಗುರುವಾರ ನಡೆದ  ಪರೀಕ್ಷೆಗೆ 5250 ಮಂದಿ ಹಾಜರಾಗಬೇಕಿತ್ತು. ಆದರೆ 60 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಇವರಲ್ಲಿ 40 ಹುಡುಗರು, 20 ಹುಡುಗಿಯರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಮಾಹಿತಿ ನೀಡಿದರು.

ಜಾಹೀರಾತು

ಬ್ಯಾನರ್, ಸ್ವಾಗತ  ಗೇಟ್ ಮುಂಭಾಗ ಸ್ವಾಗತದ ಬ್ಯಾನರ್, ಶಾಮಿಯಾನ, ಬಣ್ಣಬಣ್ಣದ ಬಟ್ಟೆ, ಬಲೂನುಗಳಿಂದ ಸಿಂಗರಿಸಿದ ಶಾಲಾ ಮೈದಾನ ಯಾವುದೋ ಪ್ರತಿಭೋತ್ಸವದಂತೆ ತೋರುವ ವ್ಯವಸ್ಥೆಯನ್ನು ಹೊಂದಿದ್ದ ವಗ್ಗ ಸರಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರ ಗಮನ ಸೆಳೆಯಿತು. ತಾಲೂಕಿನ ಮೊಂಟೆಪದವು ಕೇಂದ್ರದಲ್ಲಿ ಮೂರು ಧರ್ಮಗಳ ಗುರುಗಳು ಬಂದು ವಿದ್ಯಾರ್ಥಿಗಳಿಗೆ ಆಶೀರ್ವಾದ ಮಾಡಿದರು. ಬ್ಯಾಂಡ್, ವಾದ್ಯಗಳೊಂದಿಗೆ ವಿದ್ಯಾರ್ಥಿಗಳನ್ನು ಅಲ್ಲಿ ಸ್ವಾಗತಿಸಲಾಯಿತು. ಉಪಾಹಾರ, ಪಾನೀಯ ವ್ಯವಸ್ಥೆಯನ್ನೂ ಮಾಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಭ್ರಮದ ಸ್ವಾಗತದೊಂದಿಗೆ ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*