ಪಿಂಚಣಿದಾರರ ವಾರ್ಷಿಕ ಮಹಾಸಭೆಯಲ್ಲಿ ಹಿರಿಯ ಸದಸ್ಯರಿಗೆ ಸನ್ಮಾನ

ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಪಿಂಚಣಿದಾರರ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಉಪಪ್ರಾಂಶುಪಾಲ ಮತ್ತು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ತುಕಾರಾಮ ಪೂಜಾರಿ, ನಿವೃತ್ತ ಉಪನ್ಯಾಸಕ ಮಧುಕರ ಮಲ್ಯ, ಬಂಟ್ವಾಳ ತಾಲೂಕು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಪಿಂಚಣಿದಾರರ ದ.ಕ.ಜಿಲ್ಲಾ ಪ್ರತಿನಿಧಿ ಮೋಹನ್ ನಂಬಿಯಾರ್, ಉಪಾಧ್ಯಕ್ಷರಾದ ಎ.ಲಿಂಗಪ್ಪ ಕೈಕುಂಜೆ , ವಿ.ಸೋಮಪ್ಪ, ಎನ್.ಕೃಷ್ಣರಾಜ ಶೆಟ್ಟಿ , ಸಂಘಡನಾ ಕಾರ್ಯದರ್ಶಿಗಳಾದ ರಮೇಶ್ ಭಟ್, ಚಂದ್ರಶೇಖರ ಗಟ್ಟಿ ಉಪಸ್ಥಿತರಿದ್ದರು.  ಲೋಕನಾಥ ಶೆಟ್ಟಿ, ಕೆ.ಚಂದು ನಾಯಕ್, ಎಂ.ರಾಘವನ್ ನಾಯರ್ ಮತ್ತು ದಿನಕರ್ ಸನ್ಮಾನಿತರ ನ್ನು ಪರಿಚಯಿಸಿದರು.

ಜಾಹೀರಾತು

ಹಿರಿಯ ಪಿಂಚಣಿದಾರ ಸದಸ್ಯರುಗಳಾದ ಎ. ರಾಮಚಂದ್ರ ಭಟ್ ಮೊಡಂಕಾಪು, ಎನ್. ರಾಮಚಂದ್ರ ನರಿಕೊಂಬು, ದೇಜಪ್ಪ ಕೋಡಿ ನರಿಕೊಂಬು, ಬಿ.ರಾಮಚಂದ್ರ ರಾವ್ ಅಲೆತ್ತೂರು, ಕೆ.ಪರಮೇಶ್ವರ ಕರಿಂಗಾಣ, ಕೆ. ರಾಘವಾಚಾರ್ ಸಂಚಯಗಿರಿ, ಕೆ.ನಾರಾಯಣ ನಾಯಕ್ ಕರ್ಪೆ, ತುಕ್ರ ಗಟ್ಟಿ ಸಜಿಪಮುನ್ನೂರು, ನಾರಾಯಣ ಶೆಟ್ಟಿ ಪೂಂಜೆರೆಕೋಡಿ, ಕೆ.ನೇಮು ಮೊಡಂಕಾಪು, ಬಿ.ಕೃಷ್ಣ ಮಂಜೇಶ್ವರ ಮತ್ತು ರವೀಂದ್ರ ನಾಯಕ್ ಮೊಗರ್ನಾಡು ಅವರುಗಳನ್ನು ಸನ್ಮಾನಿಸಲಾಯಿತು.

ಪ್ರಧಾನ ಕಾರ್ಯದರ್ಶಿ ನೀಲೋಜಿ ರಾವ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಜಲಜಾಕ್ಷಿ ಕುಲಾಲ್ ಲೆಕ್ಕಪತ್ರ ಮಂಡಿಸಿದರು. ಎನ್.ಶಿವಶಂಕರ್ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ದಾಮೋದರ್ ವಂದಿಸಿ ಸೇಸಪ್ಪ ಮಾಸ್ತರ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಿಂಚಣಿದಾರರ ವಾರ್ಷಿಕ ಮಹಾಸಭೆಯಲ್ಲಿ ಹಿರಿಯ ಸದಸ್ಯರಿಗೆ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*