ಜೂನ್ ಮೊದಲವಾರದವರೆಗೆ ಕಾಲೇಜು ಆರಂಭ ಮುಂದೂಡಲು ಮನವಿ

ಬಂಟ್ವಾಳ: ಜೂನ್ ತಿಂಗಳ ಮೊದಲ ವಾರದವರೆಗೆ ಸರಕಾರಿ ಪಿಯು ಕಾಲೇಜುಗಳಲ್ಲಿ ಪದವಿಪೂರ್ವ ಕಾಲೇಜುಗಳ ಆರಂಭವನ್ನು ಮುಂದೂಡಲು ತಾಪಂ ಸದಸ್ಯ ಪ್ರಭಾಕರ ಪ್ರಭು ಒತ್ತಾಯಿಸಿದ್ದಾರೆ.

ತಾಲೂಕಿನ ಹಲವೆಡೆ ನೀರಿಲ್ಲದೆ ಜನರು ಪರದಾಡುತ್ತಿದ್ದು, ಶಾಲಾ ಕಾಲೇಜುಗಳು ಆರಂಭಗೊಂಡರೆ ಮಕ್ಕಳಿಗೂ ಸಮಸ್ಯೆ.

ಕರಾವಳಿಯ . ಮತ್ತು ಉಡುಪಿ ಜಿಲ್ಲೆಗಳಲ್ಲಿ ವರ್ಷ ತೀವ್ರ ತರವಾದ ಕುಡಿಯುವ ನೀರಿನ ಬವಣೆ ಉದ್ಬವಿಸಿದ್ದು, ಜಿಲ್ಲೆಯ ನಾನಾ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆ. ಪಿಯು ಕಾಲೇಜುಗಳಲ್ಲಿನ ಬಹುತೇಕ ಕುಡಿಯುವ ನೀರಿಗೆ ಸಂಬಂಧಿಸಿದ ಕೊಳವೆ ಬಾವಿಗಳು ಈಗಾಗಲೇ ಭತ್ತಿ ಹೋಗಿದ್ದು, ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಗಾಗಿ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ್ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳ ಆಡಳಿತಗಳು ನೀರಿನ ಅಭಾವದಿಂದ ತತ್ತರಿಸಿ ಹೋಗಿವೆ. ಬೇಸಿಗೆಯ ಕಾಲದ ಇತ್ತೀಚಿನ ತಾಪಮಾನ ಸಹ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹವಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರ ತನಕ ಕರಾವಳಿ ಜಿಲ್ಲೆಗೆ ಮುಂಗಾರು ಪ್ರಾರಂಭವಾಗುವ ಲಕ್ಷಣ ಕಡಿಮೆ ಎಂದು ತಿಳಿಸಿದೆ.

ಜಾಹೀರಾತು

ಎಲ್ಲಾ ಅಂಶಗಳನ್ನು ಮನಗಂಡು ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಸಭೆ ಸೇರಿ ಈಗಾಗಲೇ ಆರಂಭವಾಗ ಬೇಕಿದ್ದ ತರಗತಿಗಳನ್ನು ಸ್ವಲ್ಪ ಸಮಯಕ್ಕೆ ಮೂಂದೂಡಿ ಪ್ರಕಟಣೆ ಹೊರಡಿಸಿವೆ. ಪ್ರಸ್ತುತ ನೀರಿನ ಅಭಾವ ಪರಿಸ್ಥಿತಿಯನ್ನು ಅವಲೋಕಿಸಿ ಸರಕಾರಿ ಪಿಯುಸಿ ಕಾಲೇಜುಗಳ ಪ್ರಿನ್ಸಿಪಾಲರ ಸಂಘ ಕೂಡ ಸ್ವಲ್ಪ ಸಮಯ ತರಗತಿ ಆರಂಭಿಸುವುದನ್ನು ಮುಂದೂಡಲು ಮನವಿ ಸಲ್ಲಿಸಿದೆ. ಕೆಲವೊಂದು ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶೌಚಾಲಯ ಬಳಕೆಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಎದುರುಸುತ್ತಿವೆ. ಹೀಗಾಗಿ ಈಗಾಗಲೇ ಆರಂಭವಾಗಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳ ಪಿಯುಸಿ ತರಗತಿಗಳನ್ನು ತಕ್ಷಣದಿಂದ ಸ್ವಲ್ಪ ಮಟ್ಟಿಗೆ ಸ್ಥಗಿತಗೊಳಿಸಿ,  ಕನಿಷ್ಠ ಜೂನ್  ತಿಂಗಳ ಮೊದಲ ವಾರದವರೆಗೆ ಮುಂದೂಡಲು ವಿನಂತಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೂನ್ ಮೊದಲವಾರದವರೆಗೆ ಕಾಲೇಜು ಆರಂಭ ಮುಂದೂಡಲು ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*