ಗಾಬರಿ ಬೇಡ, ಬಂಟ್ವಾಳದಲ್ಲಿ ನೀರಿದೆ, ಮಿತವಾಗಿ ಬಳಸಿದರೆ ತೊಂದರೆ ಇಲ್ಲ – ಶಾಸಕ ರಾಜೇಶ್ ನಾಯ್ಕ್

  • 10 ದಿನಕ್ಕಾಗುವಷ್ಟು ಸ್ಟಾಕ್ ಈಗಿದೆ, ಬೇರೆ ಮೂಲಗಳಿಂದದ ಪಡೆಯಲು ಪ್ರಯತ್ನ ಸಾಗಿದೆ

ಜಾಹೀರಾತು

Read More for News:

ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ದಿನವೊಂದಕ್ಕೆ 8 ಎಂ.ಎಲ್.ಡಿ. ನೀರು ಬೇಕಾಗುತ್ತದೆ. ಆದರೆ ಈಗ ಲಭ್ಯವಿರುವ ನೀರಿನ ಸ್ಟಾಕ್ ನೋಡಿದರೆ, 5 ಎಂಎಲ್ ಡಿಯಷ್ಟು ಪೂರೈಕೆ ಮಾಡಲು ಆಗುತ್ತದೆ. ಆದರೂ ಆತಂಕ ಬೇಡ. ಬೇರೆ ಮೂಲಗಳಿಂದ ನೀರು ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ.

ಹೀಗಂದವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ.

ಜಾಹೀರಾತು

ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯಕ್ ಹಾಗೂ ಅಧಿಕಾರಿಗಳು ಬುಧವಾರ ಜಕ್ರಿಬೆಟ್ಟುವಿನ ಇಂಟಕ್‌ವೆಲ್‌ಗೆ ಭೇಟಿ ಪಂಪಿಂಗ್ ವ್ಯವಸ್ಥೆಯನ್ನು ವೀಕ್ಷಿಸಿದರು. ನಗರವಾಸಿಗಳಿಗೆ ನೀರು ಪೂರೈಸಲು ಇರುವ ನೀರಿನ ಲಭ್ಯತೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ನೀರು ಶುದ್ದೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಕಳೆದ ಒಂದು ತಿಂಗಳಿನಿಂದ ಬಂಟ್ವಾಳ ತಾಲೂಕು ವ್ಯಾಫ್ತಿಯಲ್ಲಿ ಜನರ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಓಡಾಟ ನಡೆಸುತ್ತಿದ್ದು ನೀರಿನ ಸಮಸ್ಯೆ ತಲೆದೋರದಂತೆ ಪ್ರಯತ್ನ ನಡೆಸಿದ್ದೇವೆ. ಕೆಲ ದಿನಗಳಿಂದ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. ಮಂಗಳವಾರ ಸಂಜೆಯಿಂದ ಡ್ರೆಜ್ಜಿಂಗ್ ಮೂಲಕ ನೀರು ಪಂಪ್ ಮಾಡಲಾಗುತ್ತಿದ್ದು 8 ಗಂಟೆಗಳ ಪಂಪಿಂಗ್‌ನಲ್ಲಿ 5 ಎಂಎಲ್‌ಡಿ ನೀರು ಸಂಗ್ರಹಗೊಂಡಿದ್ದು ಅದನ್ನು ನಗರದ ಜನರಿಗೆ ಒದಗಿಸಲಾಗಿದೆ. ಬಂಟ್ವಾಳಕ್ಕೆ 8 ಎಂಎಲ್‌ಡಿ ನೀರಿನ ಅಗತ್ಯತೆ ಇದ್ದು 10 ರಿಂದ 12 ಗಂಟೆ ನೀರಿನ ಪಂಪಿಗ್ ಮಾಡಬೇಕಾಗುತ್ತದೆ. ನೀರಿಲ್ಲ ಎಂದು ಜನರು ಆತಂಕ ಪಡುವುದು ಬೇಡ, ಮೇಲ್ಭಾಗದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದು ಬಂಡೆಗಳು ಅಡ್ಡಲಾಗಿರುವುದರಿಂದ ನೀರು ಕೆಳ ಭಾಗಕ್ಕೆ ಹರಿದು ಬರುತ್ತಿಲ್ಲ. ನೀರು ಪಂಪ್ ಮಾಡಿದರೆ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬಹುದು ಎಂದರು.  ಪುರಸಭೆಯ ಜನರಿಗೆ ನೀರು ಪೂರೈಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತಿದ್ದು  ಜನರಿಗೆ ತೊಂದರೆಯಾಗದಂತೆ ನೀರು ಕೊಡುತ್ತೇವೆ ಎಂದ ಅವರು ಮಿತವಾಗಿ ಬಳಸುವಂತೆ ಮನವಿ ಮಾಡಿಕೊಂಡರು.

ಜಾಹೀರಾತು

ಈ ಸಂದರ್ಭ ಪುರಸಭೆಯ ಸದಸ್ಯ ಗೋವಿಂದ ಪ್ರಭು, ಮಾಜಿ ಸದಸ್ಯ ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ, ಕ.ನ.ನೀ.ಸ.ಒ.ಮಂಡಳಿ ಇಂಜಿನಿಯರ್ ಶೋಭಾಲಕ್ಷ್ಮಿ, ಪುರಸಭೆ ಎಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಮೊದಲಾದವರು ಹಾಜರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗಾಬರಿ ಬೇಡ, ಬಂಟ್ವಾಳದಲ್ಲಿ ನೀರಿದೆ, ಮಿತವಾಗಿ ಬಳಸಿದರೆ ತೊಂದರೆ ಇಲ್ಲ – ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*