ಬಂಟ್ವಾಳ: ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ ನಿ , ಪಾಣೆಮಂಗಳೂರು ಮುಂದಿನ 5 ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ 13 ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಯ 13 ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ.
ಜಾಹೀರಾತು
ಸಂಘದ ಮುಖ್ಯ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಜಯಶಂಕರ ಬಾಸ್ರಿತ್ತಾಯ ವೆಂಕಟೇಶ್ವರ ಭಟ್ , ಶ್ರೀನಿವಾಸ ಭಟ್ , ಜ್ಞಾನೇಶ್ವರ ಪ್ರಭು , ವಿಜಯ ರೈ , ಪ್ರದೀಪ್ ಶೆಟ್ಟಿ ಆಯ್ಕೆಯಾಗಿರುತ್ತಾರೆ . ಹಿಂದುಳಿದ ಪ್ರವರ್ಗ ‘ ಎ ‘ ಸ್ಥಾನದಿಂದ ಕೇಶವ ಪಿ ಮತ್ತು ಸುರೇಶ್, ಮಹಿಳಾ ಮೀಸಲು ಕ್ಷೇತ್ರದಿಂದ ಮಮತಾ ಮತ್ತು ಮೋಹಿನಿ ಬಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಗಣೇಶ್ ಚುನಾಯಿತರಾಗಿರುತ್ತಾರೆ. ಪರಿಶಿಷ್ಟ ಜಾತಿ ಕ್ಷೇತ್ರದಿಂದ ರತ್ನಾ ಮತ್ತು ಪರಿಶಿಷ್ಟ ಪಂಗಡ ಸ್ಥಾನದಿಂದ ನಾಗಪ್ಪ ನಾಯ್ಕ ಆಯ್ಕೆಯಾಗಿರುತ್ತಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು ರೈತರ ಸೇವಾ ಸಹಕಾರ ಸಂಘ: ಬಿಜೆಪಿ ಬೆಂಬಲಿತರ ಆಯ್ಕೆ"