ಹೂಳೆತ್ತಿದರೆ ಬಂಟ್ವಾಳಕ್ಕೆ ದೊರಕಲಿದೆ ಭರಪೂರ ನೀರು

ಸರಪಾಡಿಯಲ್ಲಿರುವ ಎಂಆರ್ ಪಿಎಲ್ ಡ್ಯಾಂನಲ್ಲಿ ನೀರು ಶೇಖರಣೆಗೊಂಡಿದ್ದರೂ ಹರಿವಿಗೆ ನದಿಯಲ್ಲಿ ಹೂಳು ಸಮಸ್ಯೆಯಾಗಿದೆ. ಇದನ್ನು ನಿವಾರಿಸಿದರೆ, ಬಂಟ್ವಾಳದಲ್ಲಿರುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಹೇಳಿದ್ದಾರೆ.

ಜಾಹೀರಾತು

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅವರು ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿರುವ ಜಾಕ್ ವೆಲ್, ಎಂಆರ್‌ಪಿಎಲ್ ಸರಪಾಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ನೀರಿನ ಲಭ್ಯತೆ ಹಾಗೂ ಅದನ್ನು ಕೆಳಭಾಗಕ್ಕೆ ಹರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಬಂಟ್ವಾಳದ ಜನರು ನೀರಿನ ಸಮಸ್ಯೆಯ ಬಗ್ಗೆ ಚಿಂತಿತರಾಗಬೇಕಾಗಿಲ್ಲ. ನೀರಿನ ಗಂಭೀರ ಸಮಸ್ಯೆ ಇಲ್ಲಿಲ್ಲ. ಮಿತಬಳಕೆ ಮಾಡಿದರಷ್ಟೇ ಸಾಕು, ಇನ್ನೊಂದು ಹದಿನೈದು ದಿನಗಳಿಗಾಗುವಷ್ಟು ನೀರು ಇಲ್ಲಿದೆ ಎಂದು ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಈ ಸಂದರ್ಭ ಸುದ್ದಿಗಾರರಿಗೆ ತಿಳಿಸಿದರು.

ಕಳೆದ ಕೆಲವು ದಿನಗಳಿಂದ ಘಟ್ಟ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾದ ಪರಿಣಾಮ ಕುಮಾರಧಾರ ನದಿಯ ಮೂಲಕ ನೀರಿನ ಹರಿವು ಕೊಂಚ ಆರಂಭಗೊಂಡಿದ್ದು, ಆದರೆ ಅದು ಎಂಆರ್‌ಪಿಎಲ್ ಡ್ಯಾಂನಲ್ಲಿ ಸ್ಟಾಕ್‌ಗೊಂಡಿದೆ. ಹೀಗಾಗಿ ಅಲ್ಲಿನ ಮರಳನ್ನು ಡ್ರಜ್ಜಿಂಗ್ ಯಂತ್ರದ ಮೂಲಕ ತೆರವುಗೊಳಿಸಿದರೆ ನೀರಿನ ಸಮಸ್ಯೆಗೆ ಪರಿಹಾರ ದೊರಕಬಹುದು ಎಂದರು.

ಜಾಹೀರಾತು

ಈ ಸಂದರ್ಭದಲ್ಲಿ ಸಹಾಯಕ ಕಮೀಷನರ್ ರವಿಚಂದ್ರನಾಯಕ್, ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ‌ಸೋಜ, ಇಂಜಿನಿಯರ್ ಡೊಮಿನಿಕ್ ಡಿ.ಮೆಲ್ಲೊ, ಪುರಸಭಾ ಸದಸ್ಯ ಎ. ಗೋವಿಂದ ಪ್ರಭು, ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಪ್ರಮುಖರಾದ ರಮಾನಾಥ ರಾಯಿ, ಪವನ್ ಕುಮಾರ್ ಶೆಟ್ಟಿ, ಮಂಜು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹೂಳೆತ್ತಿದರೆ ಬಂಟ್ವಾಳಕ್ಕೆ ದೊರಕಲಿದೆ ಭರಪೂರ ನೀರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*