ಜೂನ್, ಜುಲೈನಲ್ಲಿ ತಾಲೂಕಿನಾದ್ಯಂತ ಕಂದಾಯ, ಪಿಂಚಣಿ ಅದಾಲತ್

ಜೂನ್ ಮತ್ತು ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಾನಾ ಕಡೆಗಳಲ್ಲಿ ಕಂದಾಯ ಅದಾಲತ್ ನಡೆಸಲು ಆಡಳಿತ ತೀರ್ಮಾನಿಸಿದ್ದು, ಕುರಿತು ಬಂಟ್ವಾಳ ತಹಶೀಲ್ದಾರ್ ರಶ್ಮಿ ನಡೆಯುವ ಸ್ಥಳದ ವಿವರ ನೀಡಿದ್ದಾರೆ.

ಜಾಹೀರಾತು

13ರಂದು ಪಾಣೆಮಂಗಳೂರು ಹೋಬಳಿಯ ಇರಾ, ಮಂಚಿ, ಫಜೀರು, ಕುರ್ನಾಡು ಗ್ರಾಪಂ ವ್ಯಾಪ್ತಿಯ ಇರಾ, ಮಂಜಿ, ಫಜೀರು ಕುರ್ನಾಡು ಗ್ರಾಪಂಗೊಳಪಡುವ ಅದಾಲತ್ ಇರಾ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ.

20ರಂದು ಬಂಟ್ವಾಳ ಹೋಬಳಿಯ ರಾಯಿ ಗ್ರಾಪಂನ ಬಿ.ಕಸಬಾ, ಅಮ್ಟಾಡಿ, ಕುರಿಯಾಳ, ಅರಳ, ರಾಯಿ, ಕೊಯಿಲ ಗ್ರಾಮಗಳಿಗೆ ರಾಯಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅದಾಲತ್ ನಡೆಯುವುದು. 27ರಂದು ವೀರಕಂಭ ಗ್ರಾಪಂನಲ್ಲಿ ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ, ವಿಟ್ಲಪಡ್ನೂರು ಗ್ರಾಮಗಳಿಗೆ ಒಳಪಡುವ ಅದಾಲತ್, ಜುಲೈ 3ರಂದು ಮೇರಮಜಲು ಗ್ರಾಪಂ ಸಭಾಭವನದಲ್ಲಿ ಮೇರಮಜಲು, ಕೊಡ್ನಣ್, ಪುದು, ತುಂಬೆ, ಕಳ್ಳಿಗೆ ಗ್ರಾಮಕ್ಕೊಳಪಡುವ ಅದಾಲತ್ ನಡೆಯಲಿದೆ. ಜುಲೈ 10ರಂದು ಸರಪಾಡಿ ಪಂಚಾಯತ್ ನಲ್ಲಿ ಸರಪಾಡಿ, ಮಣಿನಾಲ್ಕೂರು, ನಾವೂರು, ದೇವಸ್ಯಪಡೂರು, ಕಾವಳಮುಡೂರು, ಕಾಡಬೆಟ್ಟು, ಕುಡಂಬೆಟ್ಟು ಗ್ರಾಮಗಳಿಗೆ ಒಳಪಡುವ ಕಂದಾಯ, ಪಿಂಚಣಿ ಅದಾಲತ್ ನಡೆಯುವುದು.

ಜುಲೈ 17ರಂದು ವಿಟ್ಲ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಪುಣಚ, ಕೇಪು, ಅಳಿಕೆ, ಪೆರುವಾಯಿ, ಮಾಣಿಲ, ವಿಟ್ಲ ಕಸಬಾ, ವಿಟ್ಲಮುಡ್ನೂರು ಗ್ರಾಮಗಳಿಗೆ ಒಳಪಡುವ ಅದಾಲತ್, ಜುಲೈ 24ರಂದು ಕಡೇಶ್ವಾಲ್ಯ ಗ್ರಾಪಂ ಸಭಾಭವನದಲ್ಲಿ ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ ಗ್ರಾಪಂಗೆ ಒಳಪಡುವ ಅದಾಲತ್ ಮತ್ತು ಜುಲೈ 31ರಂದು ಕೆದಿಲದಲ್ಲಿ ಪೆರ್ನೆ, ಬಿಳಿಯೂರು, ಕೆದಿಲ, ಅನಂತಾಡಿ, ನೆಟ್ಲಮುಡ್ಣುರು, ಇಡ್ಕಿದು, ಕುಳ, ಮಾಣಿ ಪೆರಾಜೆ ಗ್ರಾಮಗಳಿಗೆ ಒಳಪಟ್ಟ ಕಂದಾಯ ಮತ್ತು ಪಿಂಚಣಿ ಅದಾಲತ್ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜೂನ್, ಜುಲೈನಲ್ಲಿ ತಾಲೂಕಿನಾದ್ಯಂತ ಕಂದಾಯ, ಪಿಂಚಣಿ ಅದಾಲತ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*