ತನ್ನ ಅವಧಿಯಲ್ಲಿ ಮಂಜೂರಾದ ಕಾಮಗಾರಿ ಪ್ರಗತಿಯಲ್ಲಿ – ರಮಾನಾಥ ರೈ

ಸಿಆರ್‌ಎಫ್ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ತನ್ನ ಶಾಸಕತ್ವದ ಅವಧಿಯಲ್ಲಿ 8 ಕಾಮಗಾರಿಗಳು ಮಂಜೂರುಗೊಂಡಿದ್ದು, ಮೊದಲ ಹಂತದ 6 ಕಾಮಗಾರಿಗಳು ಪ್ರಗತಿಯಲ್ಲಿದೆ. ಉಳಿದಂತೆ 2ನೇ ಹಂತದ ಮಂಜೂರಾತಿ ಆದ 2 ಕಾಮಗಾರಿಗಳು ಶೀಘ್ರದಲ್ಲಿ ಅನುಷ್ಠಾನವಾಗಲಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಜಾಹೀರಾತು

ಬುಧವಾರ ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್ವಾಳದ ತುಂಬ್ಯ ಜಂಕ್ಷನ್ ನಿಂದ ಸೊರ್ನಾಡುವಿನವರೆಗೆ ಸಿಆರ್ ಎಫ್ ನಡಿ ರಸ್ತೆ ಅಭಿವೃದ್ಧಿಗೆಂದು ೪ ಕೋಟಿ ರೂ ಮಂಜೂರುಗೊಂಡಿದ್ದು, ಕಾಮಗಾರಿ ನಡೆಯುತ್ತಿದೆ. ಮೂಡುಬಿದಿರೆ – ಬಂಟ್ವಾಳ ರಸ್ತೆ ಅಭಿವೃದ್ಧಿಗೆಂದು ೧೩ ಕೋಟಿ ರೂಗಳನ್ನು ಈಗಾಗಲೇ ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಡೆಸಲಿದೆ ಎಂದರು.

ಚುನಾವಣಾ ಸಂದರ್ಭ ಮಂಜೂರುಗೊಂಡ ಕಾಮಗಾರಿಗಳು ಸರಿಯಾಗಿ ಅನುಷ್ಠಾನಗೊಂಡು ಜನರ ಕೈಗೆ ತಲುಪುವಂತೆ ಮಾಡುವುದು ತನ್ನ ಜವಾಬ್ದಾರಿ ಎಂದ ಅವರು, ಲೋಕೋಪಯೋಗಿ ಇಲಾಖೆ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಪತ್ರ ಬರೆದಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು. ಅದರಂತೆ ೬ ಕೋಟಿ ರೂಗಳ ಕಾಮಗಾರಿ ರಸ್ತೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಆಗಲಿದ್ದು, ಬಂಟ್ವಾಳ ತಾಲೂಕಿನ ನೆಲ್ಲಿಗುಡ್ಡೆ – ಕೆದ್ದಳಿಕೆ – ಎನ್.ಸಿ.ರೋಡ್ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ೧ ಕೋಟಿ, ಮಾಣಿ ಗ್ರಾಮದ ದಡಿಕೆಮಾರ್ ರಸ್ತೆ ಅಭಿವೃದ್ಧಿಗೆ ೧ ಕೋಟಿ, ಅಣ್ಣಳಿಕೆ ಕರಿಮಲೆ ರಸ್ತೆ ತಡೆಗೋಡೆ ಹಾಗೂ ರಸ್ತೆ ಅಭಿವೃದ್ಧಿಗೆ ೧.೪ ಕೋಟಿ, ಮಧ್ವ – ಬರ್ಕಟಿ – ಪೆರುವಾರು ಮತ್ತು ಕಾಜೊಟ್ಟು ಕೊಪ್ಪಳದೊಟ್ಟು ಗ್ರಾಮೀಣ ರಸ್ತೆ ಅಭಿವೃದ್ಧಿಗೆ ೭೦ ಲಕ್ಷ ರೂ, ಸರಪಾಡಿ ಗ್ರಾಮದ ಸರಪಾಡಿ ಬಯೂರು ಬಜ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ೪೦ ಲಕ್ಷ ರೂ ಬಿಡುಗಡೆ ಆಗಿದ್ದು ತನ್ನ ಪ್ರಯತ್ನದಿಂದ ಎಂದರು.

ನನ್ನ ಅವಧಿಯಲ್ಲಿ ಮಂಜೂರುಗೊಂಡ ಬೆಂಜನಪದವಿನ ತಾಲೂಕು ಕ್ರೀಡಾಂಗಣ ಮತ್ತು ಬಂಟ್ವಾಳದ ಸಮಗ್ರ ಒಳಚರಂಡಿ ಯೋಜನೆ ಅನುಷ್ಠಾನಕ್ಕೆ ಸತತ ಪ್ರಯತ್ನದಲ್ಲಿರುವುದಾಗಿ ಹೇಳಿದ ಅವರು, ಸಜಿಪನಡು ಗ್ರಾಮದ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಪೈರೋಲಿಸಿಸಿ ಯಂತ್ರ ಅಳವಡಿಸುವ ಕುರಿತು ಮಂಜೂರಾತಿ ದೊರಕಿದೆ. ಈ ಕುರಿತು ಪುರಸಭೆ ಅಧಿಕಾರಿಗಳೊಂದಿಗೆ ಮಾತನಾಡಿ ಯಂತ್ರವನ್ನು ಸ್ಥಾಪಿಸುವ ಕುರಿತು ಪ್ರಯತ್ನಿಸಲಾಗುವುದು ಎಂದರು. ಪುರಸಭೆ ಚುನಾಯಿತ ಆಡಳಿತ ಇಲ್ಲದೇ ಇರುವ ಕಾರಣ ಇದು ವಿಳಂಬವಾಗಿದ್ದು, ನಿರ್ಮಲ ಬಂಟ್ವಾಳದ ತನ್ನ ಕನಸನ್ನು ನನಸುಗೊಳಿಸುವ ಪ್ರಯತ್ನ ನಡೆಸಲಾಗುವುದು ಎಂದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಪ್ರಮುಖರಾದ ಸದಾಶಿವ ಬಂಗೇರ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತನ್ನ ಅವಧಿಯಲ್ಲಿ ಮಂಜೂರಾದ ಕಾಮಗಾರಿ ಪ್ರಗತಿಯಲ್ಲಿ – ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*