ಎಸ್.ವಿ.ಎಸ್. ದೇವಳ ಶಾಲೆ ಶಿಕ್ಷಕ ರಕ್ಷಕ ಸಂಘ ಮಹಾಸಭೆ

ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಅತಿಥಿಯಾಗಿದ್ದ ಪುರಸಭೆಯ ಹಿರಿಯ ಸದಸ್ಯ, ಶಾಲಾ ಸಂಚಾಲಕ ಎ.ಗೋವಿಂದ ಪ್ರಭು ಮಾತನಾಡಿ,ಪ್ರಸ್ತುತ ಸಾಲಿನಲ್ಲಿ ಯೋಗ ಸಹಿತ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳನ್ನು ಪ್ರೆರೇಪಿಸಲಾಗುತ್ತಿದೆ, ಶಾಲೆಯ ಅಭಿವೃದ್ದಿಯಲ್ಲಿ ಪೋಷಕರ ಸಹಕಾರವು ಅತ್ಯಗತ್ಯವಿದೆ ಎಂದರು.

ಪ್ರಸಕ್ತ ವರ್ಷ ಸಹಿತ ಹಲವು ವರ್ಷಗಳಿಂದ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಶಾಲೆಗೆ ನಿರಂತರವಾಗಿ ಶೇ.100 ಫಲಿತಾಂಶ ದಾಖಲಾಗುತ್ತಿರುವುದು ಸಂತಸ ತಂದಿದ್ದು,ಇದಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕಿ – ಶಿಕ್ಷಕ ವೃಂದವನ್ನು ಗೋವಿಂದ ಪ್ರಭು ಅಭಿನಂದಿಸಿದರು.

ಶ್ರೀ ತಿರುಮಲ ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರಾದ ಪುರುಷೋತ್ತಮ ಶೆಣ್ಯೆ ಸಭಾಧ್ಯಕ್ಷತೆ ವಹಿಸಿದ್ದರು. ಮೊಕ್ತೇಸರ ಪ್ರವೀಣ್ ಕಿಣಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀನಿವಾಸ ಪೈ, ಮಂಜುನಾಥ ಆಚಾರ್ಯ, ಪ್ರಕಾಶ್ ಪ್ರಭು, ವಸಂತ ಮಲ್ಯ, ರಿತೇಶ್ ಬಾಳಿಗಾ, ಶಿಕ್ಷಕ -ರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಭಟ್ ವೇದಿಕೆಯಲ್ಲಿದ್ದರು. ಇದೇ ವೇಳೆ ಕೆಲ ಪೋಷಕರು ವಿವಿಧ ಸಲಹೆ, ಸೂಚನೆಗಳನ್ನಿತ್ತರಲ್ಲದೆ, ಪ್ರಸಕ್ತ ಸಾಲಿನಲ್ಲಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವಲ್ಲಿ ಶ್ರಮಿಸಿದ ಶಿಕ್ಷಕ ವೃಂದವನ್ನು ಅಭಿನಂದಿಸಿದರು.  ಶಿಕ್ಷಕಿ ಪ್ಲೋಸಿ ಲೋಬೋ ಮುಂದಿನ ಸಾಲಿನ ಅಯವ್ಯಯ ಮಂಡಿಸಿದರು.ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ ಗತವರ್ಷದ ವರದಿ ವಾಚಿಸಿದರು. ಇನ್ನೊರ್ವ ಮುಖ್ಯೋಪಾಧ್ಯಾಯಿನಿ ಕುಸುಮಾವತಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಚಂದ್ರಹಾಸ್ ಎಂ.ವಂದಿಸಿದರು.ಶಿಕ್ಷಕ ಮುರಳೀಧರ್ . ಪಿ.ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್.ವಿ.ಎಸ್. ದೇವಳ ಶಾಲೆ ಶಿಕ್ಷಕ ರಕ್ಷಕ ಸಂಘ ಮಹಾಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*