ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಲಿ: ಬಿ. ಸುರೇಶ್

ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹಸಿರು ಕರ್ನಾಟಕ ಯೋಜನೆಯಡಿ ಇಲ್ಲಿನ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಜಾಹೀರಾತು

ಬಂಟ್ವಾಳ ವಲಯ ಅರಣ್ಯಧಿಕಾರಿ ಬಿ. ಸುರೇಶ್ ಮಾತನಾಡಿ ಓಝೋನ್ ಪದರದ ಕರಗುವಿಕೆಗೆ, ನೀರಿನ ಅಭಾವಕ್ಕೆ, ಸ್ವಚ್ಛ ಗಾಳಿಯ ಕೊರತೆಗೆ ಪರಿಸರ ಮಾಲಿನ್ಯ ಕಾರಣವಾಗಿದೆ. ಆಧುನಿಕತೆ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಇಂದು ಪರಿಸರ ನಾಶವಾಗುತ್ತಿದೆ. ವಿದ್ಯಾರ್ಥಿಗಳು ಪರಿಸರ ಕಾಳಜಿ ತೋರಿ ಪರಿಸರ ಉಳಿಸುವ ಪ್ರಯತ್ನ ಮಾಡಬೇಕು. ಹುಟ್ಟುಹಬ್ಬದಂತಹ ವಿಜೃಂಭಣೆಗೆ ಕಡಿವಾಣ ಹಾಕಿ ಖಾಲಿ ಜಾಗದಲ್ಲಿ ಗಿಡಗಳನ್ನು ನೆಡುವಂತಹ ಸೃಜನಾತ್ಮಕ ಕೆಲಸವಾಗಬೇಕು ಎಂದರು.

ಶಾಲಾ ಪ್ರಾಂಶುಪಾಲೆ ರಮಾಶಂಕರ್ ಅಧ್ಯಕ್ಷತೆ ವಹಿಸಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಅನಿಲ್, ಸ್ಮಿತಾ, ಅನಿತಾ ಭಾಗವಹಿಸಿದ್ದರು. ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಸದಸ್ಯ ಜಗನ್ನಾಥ್ ರೈ ಉಪಸ್ಥಿತರಿದ್ದರು. ಮುಂಜಾನೆಯ ಶಾಲಾ ಸಭೆಯಲ್ಲಿ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಪರಿಸರ ಸಂಬಂಧಿತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಅರಣ್ಯ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಮರಗಳ ಉಳಿವಿನ ಅನಿವಾರ್ಯತೆ, ಜಲ ಸಂರಕ್ಷಣೆಯ ಅನಿವಾರ್ಯತೆ, ನದಿಗಳ ಪ್ರಾಮುಖ್ಯತೆ, ಪರಿಸರ ನೈರ್ಮಲ್ಯದ ಮಹತ್ವದ ಕುರಿತಾದ ವಿವಿಧ ರೀತಿಯ ಪ್ರಹಸನ, ಗಾಯನ, ಭಿತ್ತಿ ಪತ್ರ ಪ್ರದರ್ಶನ, ನೃತ್ಯಗಳನ್ನು ಪ್ರಸ್ತುತ ಪಡಿಸಿದರು. ರಾಜ್ಯ ಪುರಸ್ಕೃತ ಗೈಡ್ಸ ವಿದ್ಯಾರ್ಥಿನಿಯರಾದ ಶ್ರೀಯಾ ಜೈನ್ ಮತ್ತು ಆತ್ಮಿ ಶೆಟ್ಟಿ ನಿರೂಪಿಸಿದರು. ಸ್ಕೌಟ್ಸ್ ಶಿಕ್ಷಕ ಹರೀಶ್ ಆಚಾರ್ಯ, ಗೈಡ್ಸ್ ಶಿಕ್ಷಕಿಯರಾದ ಕೇಶವತಿ ಹಾಗೂ ಜೂಲಿ ಟಿ.ಜೆ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಬಳಿಕ ಅರಣ್ಯ ಇಲಾಖಾ ಅಧಿಕಾರಿಗಳು, ಪ್ರಾಂಶುಪಾಲರು, ಇಕೋ ಕ್ಲಬ್ ಸದಸ್ಯರು, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಲಿ: ಬಿ. ಸುರೇಶ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*