ಬಂಟ್ವಾಳ ತಾಲೂಕು ಶ್ರೀ ಶಂಕರ ಸೇವಾ ಪ್ರತಿಷ್ಠಾನ ವತಿಯಿಂದ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಕಾರ್ಯಕ್ರಮ ಆಗಸ್ಟ್ 2ರಿಂದ 8ವರೆಗೆ ನಡೆಯಲಿದೆ.ಪ್ರತಿದಿನ ಸಂಜೆ 6.30ರಿಂದ 8ವರೆಗೆ ಪ್ರವಚನವಿದ್ದು, ಧಾರ್ಮಿಕ ಚಿಂತಕರಾದ ಕೈಯೂರು ನಾರಾಯಣ ಭಟ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮವನ್ನು ಶುಕ್ರವಾರ ಸಂಜೆ 5.30ಕ್ಕೆ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಸೇಸಪ್ಪ ಕೋಟ್ಯಾನ್ ಉದ್ಘಾಟಿಸಲಿದ್ದು, ಹಿರಿಯ ವೈದ್ಯ ಡಾ. ವಸಂತ ಬಾಳಿಗಾ ಮತ್ತು ದೇವಸ್ಥಾನದ ಪ್ರಧಾನ ಆರ್ಚಕ ಈಶ್ವರ ಭಟ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆಗಸ್ಟ್ 2ರಿಂದ ಭಾಗವತ ಪ್ರವಚನ ಸಪ್ತಾಹ"