ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ರೆಂಕ್ಯ ಗ್ರಾಮದ ಯೆಂಜಿರಾ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಪಲ್ಟಿಯಾಗಿದ್ದ ಟ್ಯಾಂಕರ್ ನ್ನು ತೆರವುಗೊಳಿಸಿದ್ದು, ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಗಿರುತ್ತದೆ.
ಜಾಹೀರಾತು
ಎಂಜಿರದ ಮಲೆನಾಡು ಹೋಟೆಲ್ ಬಳಿ ಈ ಅಫಘಾತ ಬೆಳಿಗ್ಗೆ 11,40 ರ ಅಂದಾಜಿಗೆ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ -75 ರಲ್ಲಿ ಘಟನೆ ನಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲು ಪರ್ಯಾಯ ಮಾರ್ಗವಾಗಿ ಗುಂಡ್ಯ – ಸುಬ್ರಮಣ್ಯ – ಕಡಬ – ಉಪ್ಪಿನಂಗಡಿ ಮಾರ್ಗ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಉಪ್ಪಿನಂಗಡಿ – ಸುಬ್ರಮಣ್ಯ ಕ್ರಾಸ್ – ಕಡಬ – ಸುಬ್ರಮಣ್ಯ – ಗುಂಡ್ಯ ಮಾರ್ಗವನ್ನು ಬಳಸಬೇಬೇಕಾಯಿತು. ಇದೀಗ ಸಂಜೆ ವೇಳೆಗೆ ಸಂಚಾರಮುಕ್ತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
www.bantwalnews.com Editor: Harish Mambady
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗಮನಿಸಿ – ಟ್ಯಾಂಕರ್ ತೆರವು, ಹೆದ್ದಾರಿ ಸಂಚಾರಕ್ಕೆ ಮುಕ್ತ"