ಜ್ವರದಿಂದ ಬಳಲುತ್ತಿದ್ದ ಬಂಟ್ವಾಳ ಪೊನ್ನೋಡಿಯ ಯುವಕ ನಿಧನ

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ಸಮೀಪದ ಪೊನ್ನೋಡಿ ನಿವಾಸಿ, ದಿ. ಬಾಲನ್ ಎಂಬವರ ಪುತ್ರ ಪ್ರಶಾಂತ್ ಯಾನೆ ಪಚ್ಚು ಪೊನ್ನೋಡಿ (39) ಜ್ವರಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದವರು ನಿಧನಹೊಂದಿದ್ದಾರೆ.

ಜಾಹೀರಾತು

ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಪ್ರಶಾಂತ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ದಿ.ಬಾಲನ್ ಮತ್ತು ದಿ.ಸರೋಜಿನಿ ದಂಪತಿಯ ನಾಲ್ವರು ಪುತ್ರರ ಪೈಕಿ ಪ್ರಶಾಂತ್ ಮೂರನೇಯವರು.ಅವಿವಾಹಿತರಾಗಿರುವ ಇವರು ತನ್ನ ಲಾರಿಯಲ್ಲಿ ಡ್ರೈವರ್ ಆಗಿ ದುಡಿಯುದ್ದಿದ್ದರು.

ಅವರು ಇಬ್ಬರು ಸಹೋದರಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ. ಜ್ವರಕ್ಕೆ ಕಾರಣ ಡೆಂಗೆ ಎಂಬ ಕುರಿತು ಶಂಕೆ ವ್ಯಕ್ತಪಡಿಸಲಾಗಿದ್ದು, ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜ್ವರದಿಂದ ಬಳಲುತ್ತಿದ್ದ ಬಂಟ್ವಾಳ ಪೊನ್ನೋಡಿಯ ಯುವಕ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*