ಮಳೆಯ ನಡುವೆ ಬಂಟ್ವಾಳದಲ್ಲಿ ನಾಗರಪಂಚಮಿ ಆಚರಣೆ

ಬಂಟ್ವಾಳ, ಬಿ.ಸಿ. ರೋಡು ಸುತ್ತಮುತ್ತ ಸೋಮವಾರ ಮಳೆ ಸುರಿಯುತ್ತಿದ್ದರೂ ನಾಗರಪಂಚಮಿ ಆಚರಣೆಗೆ ಅಡ್ಡಿಯಾಗಲಿಲ್ಲ. ಕೈಕಂಬ ಕಡಪಿಕರಿಯ ಕುಟುಂಬದಲ್ಲಿ ನಾಗರ ಪಂಚಮಿ ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜ‌ ಗೋಪಾಲ ಆಚಾರ್ಯ ನೇತೃತ್ವದಲ್ಲಿ ಸಹಾಯಕ ಅರ್ಚಕರಿಂದ ವೈದಿಕ ಕಾರ್ಯಕ್ರಮ ನಡೆಯಿತು. ಶ್ರೀ ನಾಗದೇವರ ಪ್ರತಿಮೆಗೆ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಕುಟುಂಬದ ಯಜಮಾನ ಸದಾಶಿವ ಕೈಕಂಬ ಮತ್ತು
ಸದಸ್ಯರು ಶ್ರೀ ನಾಗದೇವರ ಭಕ್ತಿ ಪ್ರಸಾದವನ್ನು ಸ್ವೀಕರಿಸಿ, ಆರ್ಶೀವಾದ ಪಡೆದರು.

ಜಾಹೀರಾತು

ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ, ಶ್ರೀ ರಕ್ತೇಶ್ವರಿ ದೇವಸ್ಥಾನ, ಶ್ರೀ ಚಂಡಿಕಾಪರಮೇಶ್ವರಿ ದೇವಸ್ಥಾನ, ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನ ಸಹಿತ ತಾಲೂಕಿನ ಪ್ರಮುಖ ದೇವಸ್ಥಾನಗಳಲ್ಲಿರುವ ನಾಗಸನ್ನಿಧಿಗಳಲ್ಲಿ ಭಕ್ತರು ಹಾಲು ಸೀಯಾಳಾಭಿಷೇಕ ಮಾಡುವುದರ ಮೂಲಕ ನಾಗರಪಂಚಮಿ ಆಚರಿಸಿದರು. ಸರಕಾರಿ ಕಚೇರಿ, ಬ್ಯಾಂಕುಗಳಲ್ಲಿ ಜನಸಂದಣಿ ಕಡಿಮೆ ಇತ್ತು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಳೆಯ ನಡುವೆ ಬಂಟ್ವಾಳದಲ್ಲಿ ನಾಗರಪಂಚಮಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*