ಪರಮಾನಂದ ಕಾವ್ಯನಾಮದಡಿ ಬರೆಯುತ್ತಿದ್ದ ಪ.ರಾಮ ಶಾಸ್ತ್ರಿ ನಿಧನ

ಬಿ.ಸಿ.ರೋಡ್ ನಿವಾಸಿ, ಲೇಖಕ ಪ. ರಾಮ ಶಾಸ್ತ್ರಿ (89) ಅವರು ಆ.29ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಪುತ್ರಿಯನ್ನು ಹೊಂದಿದ್ದರು. ಮೃತರ ಇಚ್ಛೆಯಂತೆ ಕೆಎಂಸಿಗೆ ದೇಹದಾನ ಮಾಡಲಾಗಿದೆ. ಇವರು ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ಅವರ ಹಿರಿಯ ಸಹೋದರ. ಪರಮಾನಂದ ಎಂಬ ಕಾವ್ಯನಾಮದಲ್ಲಿ ಸಾಹಿತ್ಯಲೋಕದಲ್ಲಿ ಆಪ್ತವಾದ ಬರಹಗಳನ್ನು ಬರೆದವರು.

ಜಾಹೀರಾತು

ಒಂದು ಕಾಲದ ಶ್ರೇಷ್ಠ ಕತೆಗಾರರು. ೧೯೫೦-೬೦ರ ದಶಕದಲ್ಲಿ ಹೃದಯಸ್ಪರ್ಶಿಯಾದ ಸಾಂಸಾರಿಕ ಕತೆಗಳ ಮೂಲಕ ಓದುಗರ ಹಾಗೆಯೇ ವಿಮರ್ಶಕರ ಮನ ಗೆದ್ದ ಅವರು ಅನಂತರದ ಕಾಲದಲ್ಲಿ ಬರೆದರೂ ಪ್ರಕಟಿಸುವ ಗೋಜಿಗೇ ಹೋಗಿರಲಿಲ್ಲ. ಈ ಎರಡು ವರ್ಷದಲ್ಲಿ ಅವರ ಅಜ್ಜನೆಂಬ ಅರಳಿ ಮರ, ಪರಮಾನಂದರ ಕಥಾಸಂಗಮ, ಮಾಂತ್ರಿಕಶಕ್ತಿ ಎಂಬ ಪುಸ್ತಕಗಳು ಪ್ರಕಟವಾದವು.

ಪಟಿಕ್ಕಲ್ಲು ರಾಮಶಾಸ್ತ್ರಿ ಅವರು ಬಂಟ್ವಾಳ ತಾಲೂಕಿನ ಪುಣಚದ ಬಳಿಯಲ್ಲಿ ೧೯೩೧ರ ಜ.೩೦ರಂದು ಜನಿಸಿದರು. ಅವರು ಎಳೆಯ ವಯಸ್ಸಿನಲ್ಲೇ ತಾಯಿಯನ್ನು, ಮನೆಯ ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ಪುತ್ತೂರಿನ ಬಳಿಯ ಪೋಳ್ಯಕ್ಕೆ ಬಂದರು. ಚಿಕ್ಕ ವಯಸ್ಸಿನಲ್ಲೇ ಖ್ಯಾತ ಕತೆಗಾರ, ಕವಿ ದಿ. ಯರ್ಮುಂಜ ರಾಮಚಂದ್ರರು ಒಡನಾಡಿಯಾದರು. ಬೆಂಗಳೂರಿನ ಕತೆಗಾರ ಮಾಸಪತ್ರಿಕೆಯಲ್ಲಿ ಪರಮಾನಂದ ಕಾವ್ಯನಾಮದಡಿಯಲ್ಲಿ ಬರೆದ ಹತ್ತಾರು ಕತೆಗಳು ನಿರಂತರವಾಗಿ ಪ್ರಕಟವಾದವು. ಹೆಸರಾಂತ ವಿಮರ್ಶಕ ಪ್ರೊ| ಎಲ್. ಎಸ್. ಶೇಷಗಿರಿರಾಯರು ಈ ಕತೆಗಳ ಸರಳ, ಕುತೂಹಲಕರ ಗುಣಗಳನ್ನು ಮುಕ್ತಕಂಠದಿಂದ ಹೊಗಳಿದ್ದರು. ಬನ್ನಂಜೆ ಗೋವಿಂದಾಚಾರ್ಯರ ಉಡುಪಿಯ ಪ್ರಕಾಶ ಪತ್ರಿಕೆ, ಜಯಮಾಲ, ಕಸ್ತೂರಿ, ಕರ್ಮವೀರ, ಪ್ರಜಾವಾಣಿ, ಸುಧಾ, ಮಯೂರ, ಧಾರವಾಡದ ನೂತನ ಪತ್ರಿಕೆಗಳಲ್ಲಿಯೂ ಕತೆಗಳು ಪ್ರಕಟವಾದವು.

೧೯೬೦ರಲ್ಲಿ ಶಿವರಾಮ ಕಾರಂತರ ವಿಚಾರವಾಣಿ ವಾರಪತ್ರಿಕೆಯನ್ನು ಪುತ್ತೂರಿನಲ್ಲಿ ಮುನ್ನಡೆಸಿದ ಸಾಹಿತಿಗಳಾದ ಡಾ| ಎಂ. ಬಿ. ಮರಕಿಣಿ, ಶಂಪಾ ದೈತೋಟ, ವಿ. ಬಿ. ಹೊಸಮನೆ ಮೊದಲಾದವರ ಗೆಳೆಯರ ಕೂಟದಲ್ಲಿ ಪರಮಾನಂದರೂ ಒಬ್ಬರಾಗಿ ಪತ್ರಿಕೆಯ ಮೊಳೆಗಳನ್ನು ಜೋಡಿಸಿದರು. ಲೇಖನಗಳನ್ನು ಬರೆದು ಪ್ರಕಟಿಸಿದರು. ನಂತರ ಕೃಷಿಯ ಜಾಡು ಹಿಡಿದು ಪರಮಾನಂದರು ಬೆಳ್ತಂಗಡಿಯ ಮಚ್ಚಿನಕ್ಕೆ ಬಂದರು. ಕೃಷಿ ಕೈ ಹಿಡಿಯಲಿಲ್ಲ. ಮತ್ತೆ ಹಲವು ವರ್ಷ ಮುದ್ರಣಾಲಯದಲ್ಲಿ ಮೊಳೆ ಜೋಡಿಸುತ್ತ ಜೀವನ ಸಾಗಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪರಮಾನಂದ ಕಾವ್ಯನಾಮದಡಿ ಬರೆಯುತ್ತಿದ್ದ ಪ.ರಾಮ ಶಾಸ್ತ್ರಿ ನಿಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*